nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ದೂರುಗಳ ಸುರಿಮಳೆ
    ಜಿಲ್ಲಾ ಸುದ್ದಿ August 21, 2025

    ಸರಗೂರು: ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ದೂರುಗಳ ಸುರಿಮಳೆ

    By adminAugust 21, 2025No Comments3 Mins Read

    ಸರಗೂರು: ಪಟ್ಟಣದ ನಾಲ್ಕನೇ ವಾರ್ಡಿನಲ್ಲಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಸಮುದಾಯದ ಭವನದಲ್ಲಿ ಬುಧವಾರ ಲೋಕಾಯುಕ್ತ ಪೊಲೀಸರಿಂದ ಆಯೋಜಿಸಿದ್ದ ಸಾರ್ವಜನಿಕ ಕುಂದು ಕೊರತೆಗಳ ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಕಳೆದ ಸಭೆಯಲ್ಲಿ ಪಡೆದ ಅರ್ಜಿಗಳಿಗೆ ಕೈಗೊಂಡ ಕ್ರಮದ ಬಗ್ಗೆ ತಿಳಿಸುವಂತೆ ಒತ್ತಾಯಿಸಿ ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆಯಿತು.

    ಕಂದಾಯ ಇಲಾಖೆ, ಗ್ರಾಪಂಗಳ ವಿರುದ್ಧ ಸಾರ್ವಜನಿಕರು ಹಾಗೂ ರೈತರಿಂದ ಸಾಲು ಸಾಲು ದೂರುಗಳ ಸುರಿಮಳೆಯಾಗಿದೆ.  ನಂತರ ಸಭೆ ಪ್ರಾರಂಭವಾಗಿ ಸಾರ್ವಜನಿಕರಿಂದ ಕುಂದು ಕೊರತೆಗಳ ದೂರು ಸ್ವೀಕಾರ ಮಾಡಲಾಯಿತು.


    Provided by
    Provided by

    ಮನುಗನಹಳ್ಳಿ ಗ್ರಾ.ಪಂ. ಲಂಕೆ ರಮೇಶ್ ಮಾತನಾಡಿ ನಮ್ಮ ದೊಡ್ಡಪ್ಪನ ಹೆಸರಿನಲ್ಲಿ ಜಮೀನು ಇದೆ. ಅದರೆ ಅದನ್ನು ಬೇರೆಯವರಿಗೆ ಮಾಡಿದ್ದಾರೆ ಎಂದು ಆರೋಪಿಸಿದರು. ಕಳೆದ ಸಭೆಯಲ್ಲಿ ಈ ವಿಚಾರದ ಬಗ್ಗೆ ಮಾಹಿತಿಯನ್ನು ನೀಡಿದರೂ ಯಾವುದೇ ಕಂದಾಯ ಇಲಾಖೆ ಬಂದಿಲ್ಲ ಎಂದರು.

    ಪೌತಿಖಾತೆ ಮಾಡಲು ಹಾಗೂ ನೆಮ್ಮದಿ ಕೇಂದ್ರದಲ್ಲಿ ನೆಮ್ಮದಿ ಇಲ್ಲದಂತಾಗಿದೆ. ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಹಣವನ್ನು ಪಡೆಯಲಾಗುತ್ತಿದೆ. ಸ್ವಾಧೀನದಲ್ಲಿದ್ದು 53 ಮತ್ತು 57 ಅರ್ಜಿ ಸಲ್ಲಿಸಿದ್ದರೂ ಸಹ ಸಾಗುವಳಿ ಚೀಟಿ ವಿತರಣೆ ಮಾಡಿಲ್ಲ ಎಂದು ದೂರಿದರು.

    ದಲಿತ ಮುಖಂಡ ಮಾತನಾಡಿ, ಶ್ರೀನಿವಾಸ ಸರಗೂರು ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಚಗೊಳಿಸಿಲ್ಲ. ಎಂ.ಸಿ.ತಳಲು ನುಗು ನದಿಯಿಂದ ಯಶವಂತಪುರ ಗ್ರಾಮದವರೆಗೆ ನಿರ್ಮಾಣವಾಗಿರುವ ಸಣ್ಣ ಏತ ನೀರಾವರಿ ಯೋಜನೆ ಹಾಗೂ ಬಾಲನಕಟ್ಟೆ, ಗೂಡುಕಟ್ಟೆ, ಹಾಗೂ ಎಂ.ಸಿ.ತಳಲು ಕೆರೆ ಅಭಿವೃದ್ಧಿ ಪಡಿಸಿ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪೂರ್ಣಗೊಂಡಿಲ್ಲ ಕಳಪೆಯಾಗಿರುತ್ತದೆ. ಅಧಿಕಾರಿಗಳು ಸಂಪರ್ಕಕ್ಕೆ ಸಿಗುತ್ತಿಲ್ಲ ಇದರಿಂದ ಸರ್ಕಾರದ ಅನುದಾನ ನಷ್ಟವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಿ ಯೋಜನೆಯನ್ನು ಅನುಷ್ಠಾನ ಮಾಡಬೇಕು ಎಂದರು.

    ಹಾದನೂರು ಗ್ರಾ.ಪಂ. ಸದಸ್ಯ ಯಶವಂತಪುರ ಶಿವಲಿಂಗಯ್ಯ ಮಾತನಾಡಿ, ಯಶವಂತಪುರ ಗ್ರಾಮದ ಜಂಜರು ಸಂಖ್ಯೆ 25, 26/1, 66/1, 99 ರ ಸರ್ಕಾರಿ ಖಾಲಿ ನಿವೇಶನಗಳು ಅಕ್ರಮವಾಗಿ ಒತ್ತುವರಿಯಾಗಿವೆ. ಅವುಗಳ ರಕ್ಷಣೆ ಮಾಡಲು ಸಿಡಿಪಿಓ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪಿಡಿಓರವರು ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದ ಸರ್ಕಾರಿ ಆಸ್ತಿಪಾಸ್ತಿಗೆ ನಷ್ಟ ಉಂಟುಮಾಡುತ್ತಿದ್ದಾರೆ. ಆದ್ದರಿಂದ ಕೂಡಲೇ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣ ಮಾಡಲು ಸೂಕ್ತ ಖಾಲಿ ನಿವೇಶನವನ್ನು ಗುರುತಿಸಬೇಕು. ಎಲ್ಲಾ ಸರ್ಕಾರಿ ಖಾಲಿ ನಿವೇಶನಗಳನ್ನು ಗುರುತಿಸಿ ನಾಮಫಲಕ ಅಳವಡಿಸಬೇಕು. ನೂತನ ಕಂದಾಯ ಗ್ರಾಮದಲ್ಲಿ ವಾಸಿಸುತ್ತಿರುವ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿಲ್ಲ. ಚರಂಡಿ ನಿರ್ಮಾಣ ಮಾಡಲು ಅಡ್ಡಿಪಡಿಸುತಿದ್ದಾರೆ ಎಂದು ದೂರಿದರು.

    ಮಹೇಶ್ ಮಾತನಾಡಿ, ಸರಗೂರು ಅಂಚೆ ಕಛೇರಿಯಲ್ಲಿ ಖಾತೆದಾರರಿಗೆ ಸುಮಾರು ಒಂದೂವರೆ ಕೋಟಿಯಷ್ಟು ಹಣ ವಂಚನೆ ಮಾಡಿದ್ದಾರೆ ಎಂದರು.

    ದಸಂಸ (ಅಂಬೇಡ್ಕರ್ ವಾದ) ಸಂಘಟನೆ ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು ಹಾಗೂ ಸೀರಮ್ಮ ಮಾತನಾಡಿ ಗಿರಿಜನ ಆಶ್ರಮ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮಕ್ಕೆ ಅವಕಾಶ ಕಲ್ಪಿಸುತ್ತಿಲ್ಲ. ಎಸ್ಸಿ.ಎಸ್ಟಿ ಸಭೆಗಳಿಗೆ ಆಹ್ವಾನಿಸುತ್ತಿಲ್ಲ. ತಾಲ್ಲೋಕಿನಾಧ್ಯಂತ ಹಾಡಿಗಳಲ್ಲಿ ಕಳಪೆ ಕಾಮಗಾರಿಗಳ ಹಾವಳಿ ಹೆಚ್ಚಾಗುತ್ತಿದೆ. ಬಾಲ್ಯ ವಿವಾಹದ ಬಗ್ಗೆ ಅರಿವಿಲ್ಲ. ನಮ್ಮ ಹಾಡಿಜನರು ಇದರಿಂದಾಗಿ ಹೆಚ್ಚು ಜೈಲು ಪಾಲಾಗುತ್ತಿದ್ದಾರೆ ಈ ವಿಚಾರವಾಗಿ ಹಾಡಿಗಳಲ್ಲಿ ಅರಿವು ಮೂಡಿಸಬೇಕಿದೆ ಎಂದು ಆದಿವಾಸಿಗಳು ದೂರು ಸಲ್ಲಿಸಿದರು.

    ಮಂಜುನಾಥ ಮಾತನಾಡಿ ಪೋಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳು ಹಳ್ಳಿಗಳಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ಮಾಡಲು ಸಹಕರಿಸುತ್ತಿದ್ದಾರೆ. ದೂರು ಸಲ್ಲಿಸಿದರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಯಾವುದೇ ದೂರು ದಾಖಲಿಸದೆ ಹಣದ ಆಮಿಷಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ಹಳ್ಳಿಗಳಲ್ಲಿ ಯುವಜನರು ಮಹಿಳೆಯರು ಕುಡಿತದ ದಾಸರಾಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದರು.

    ನಂತರ ಲೋಕಾಯುಕ್ತ ಡಿಎಸ್ಪಿ ರವಿಕುಮಾರ್ ರವರು ಮಾತನಾಡಿ ಒಟ್ಟು 46 ದೂರುಗಳು ಬಂದಿವೆ. ಈ ಎಲ್ಲಾ ದೂರುಗಳಿಗೂ ಸಂಬಂಧಪಟ್ಟ ಇಲಾಖಾಧಿಕಾರಿಗಳು ಜವಾಬ್ದಾರಿ ವಹಿಸಿ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸಲು ಕ್ರಮಕೈಗೊಂಡು ವರದಿ ಮಾಡಬೇಕು, ಯಾವ ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟು ಪಡೆದುಕೊಂಡಲ್ಲಿ ತಮ್ಮ ಮೇಲೆ ಮೇಲಾಧಿಕಾರಿಗಳಿಗೆ ವರದಿ ಮಾಡಿ ಕಾನೂನಾತ್ಮಕ ಶಿಕ್ಷೆಗೆ ಗುರಿಪಡಿಸಬೇಕಾಗುತ್ತದೆ ಎಂದು ತಿಳಿಸಿದರು.

    ಸಭೆಯ ಅಧ್ಯಕ್ಷತೆಯನ್ನು ತಾಲ್ಲೂಕು ತಹಶೀಲ್ದಾರ್ ಮೋಹನ್ ಕುಮಾರಿ, ಲೋಕಾಯುಕ್ತ ಅಧಿಕಾರಿಗಳಾದ ವೆಂಕಟೇಶ್, ಡಿಎಸ್ಪಿ. ರವಿಕುಮಾರ್, ಇನ್ಸ್ಪೆಕ್ಟರ್, ಸರಗೂರು ಸರ್ಕಲ್ ಇನ್ಸ್ಪೆಕ್ಟರ್ ಪ್ರಸನ್ನಕುಮಾರ್, ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಶಿವಣ್ಣ, ಡಿಎಸ್ ಎಸ್ ಅನುಷಾ, ಗೋವಿಂದ ಕುಡುಗಿ, ಮುಖಂಡರಾದ ಮಲ್ಲೇಶ್, ಇಟ್ನ ರಾಜಣ್ಣ, ಲಕ್ಷಣ್, ಬಿಲ್ಲಯ್ಯ, ನಾಗರಾಜು ಉಯ್ಯಂಬಳ್ಳಿ, ಕೆಂಡಗಣ್ಣಸ್ವಾಮಿ, ಗ್ರಾಮೀಣಾ ಮಹೇಶ್, ಸಣ್ಣಸ್ವಾಮಿ, ಸೋಮಣ್ಣ, ಚಿನ್ನಯ್ಯ, ಶ್ರೀನಿವಾಸ್, ವಾಲ್ಮೀಕಿ ಸಿದ್ದರಾಜು, ಪ್ರಭಾಕರ್, ರೈತ ಮುಖಂಡ ನಂದೀಶ ಬರಗಿ, ನವೀನ್, ಸರಗೂರು ಕೃಷ್ಣ, ಚನ್ನಾಯಕ, ಮಹಲಿಂಗ, ಸಾರ್ವಜನಿಕರೊಂದಿಗೆ ಇತರರು ಭಾಗವಹಿಸಿದ್ದರು. ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಸಹ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.