ಪಾವಗಡ: ಯುವಕರು ದುಶ್ಚಟಕ್ಕೆ ಬಲಿಯಾಗದೆ, ನಿಮ್ಮನ್ನು ಹೆತ್ತು ಹೊತ್ತು ಕಷ್ಟ ಪಟ್ಟು ಸಾಕಿದ ತಂದೆ ತಾಯಂದಿರನ್ನು ಸುಖವಾಗಿ ಜೀವಿಸಲು ಪಣ ತೊಡುವಂತೆ ವೈ. ಎನ್. ಹೊಸಕೋಟೆ. ಪಿ. ಎಸ್. ಐ. ಭಾರತಿ ಯುವ ಸಮುದಾಯವನ್ನು ಜಾಗೃತಿಗೊಳಿಸಿದರು.
ಸಂತ ಸೇವಾಲಾಲ್ 283ನೇ ಜಯಂತಿ ಹಾಗೂ ಹೆಲ್ಪ್ ಸೊಸೈಟಿ ವತಿಯಿಂದ ವೈ. ಎನ್ ಹೊಸಕೋಟೆ ಹೋಬಳಿ ಮೆಗಲಪಾಳ್ಯ ದೊಡ್ಡ ಹಟ್ಟಿ ತಾಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಬ್ಯಾಗ್ ವಿತರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಗ್ರಾಮದಲ್ಲಿ ಅಕ್ರಮ ಚಟುವಟಿಕೆ ನಡೆಯದಂತೆ ಎಚ್ಚರ ವಹಿಸಿ ಶಾಂತಿ ಸೌಹಾರ್ದತೆ ಕಾಪಾಡಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಇದೇ ವೇಳೆ ಮನವಿ ಮಾಡಿದರು.
ಸಂತ ಸೇವಾಲಾಲ್ ಜಯಂತಿ ಪೂಜಾ ಹಾಗೂ ಶಾಲಾ ಮಕ್ಕಳಿಗೆ ಹೆಲ್ಪ್ ಸೊಸೈಟಿ ವತಿಯಿಂದ ಬ್ಯಾಗ್ ವಿತರಿಸಿ ಮಾತನಾಡಿದ ಸಮಾಜ ಸೇವಕ, ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಮಕ್ಕಳು ವಿದ್ಯಾವಂತರಾಗಿ ಶಿಕ್ಷಣ ನೀಡಿದ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತರಬೇಕು. ಗ್ರಾಮದ ಅಭಿವೃದ್ಧಿಯ ವಿಚಾರದಲ್ಲಿ ಹೆಲ್ಪ್ ಸೊಸೈಟಿ ತಂಡ ಸಾರ್ವಜನಿಕರೊಂದಿಗೆ ಸದಾ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಶ್ರೀನಿವಾಸ ನಾಯ್ಕ್, ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ, ಹೆಲ್ಪ್ ಸೊಸೈಟಿ ಪದಾಧಿಕಾರಿಗಳಾದ ವೆಂಕಟೇಶ್ ನಾಯ್ಕ್, ಸಾಯಿ ಹಾಗೂ ಗ್ರಾಮದ ವರದಿಗಾರ ನಂದೀಶ್ ನಾಯ್ಕ್, ಯುವಕರಾದ ಹರೀಶ್, ಗಣೇಶ್,ಚೇತನ್,ಅರ್ಜುನ್, ಗುರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅತಿಥಿಗಳನ್ನು ಶಾಲೆಯ ಮುಖ್ಯ ಶಿಕ್ಷಕರು ಸ್ವಾಗತಿಸಿ ವಿದ್ಯಾರ್ಥಿಗಳು ಪ್ರಾರ್ಥನೆಯನ್ನು ನೆರವೇರಿಸಿದರು
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB