ತುಮಕೂರು: ಕೊವಿಡ್ ನಿಂದ ಮೃತಪಟ್ಟ 22 ಮಂದಿ ಅಸ್ತಿಯನ್ನು ಶ್ರೀರಂಗಪಟ್ಟಣಕ್ಕೆ ರವಾನಿಸಲಾಗಿದ್ದು, ಕೊವಿಡ್ 2ನೇ ಅಲೆಯಲ್ಲಿ ಮೃತಪಟ್ಟ ಒಟ್ಟು 22 ಮಂದಿ ವಾರಸುದಾರರಿಲ್ಲದವರ ಚಿತಾ ಭಸ್ಮವನ್ನು ತುಮಕೂರು ಜಿಲ್ಲಾಡಳಿತದ ವತಿಯಿಂದ ಸಂಸ್ಕಾರ ನಡೆಸಲು ಸಿದ್ಧತೆ ನಡೆಸಲಾಗಿದೆ.
22 ಮಂದಿಯ ಅಸ್ತಿಯನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ವಿಸರ್ಜಿಸಲು ಸಿದ್ಧತೆ ನಡೆಸಲಾಗಿದೆ. ಕೈಲಾಸ ರಥದ ಮೂಲಕ ಶ್ರೀರಂಗಪಟ್ಟಣಕ್ಕೆ ಅಸ್ತಿಯನ್ನು ರವಾನೆ ಮಾಡಲಾಗಿದೆ.
ಇನ್ನೂ ಕೊವಿಡ್ 2ನೇ ಅಲೆಯ ಸಂದರ್ಭ ಕಲ್ಕತ್ತಾ, ಬಿಹಾರ್, ಉತ್ತರ ಪ್ರದೇಶ ಮೂಲದವರು ಮೃತಪಟ್ಟಿದ್ದರು. ಆದರೆ, ವಾರಸುದಾರರು ಬಾರದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು. ಆದರೆ ಅಸ್ತಿ ಸಂಗ್ರಹಕ್ಕೂ ವಾರಸುದಾರರು ಬಾರದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದಲೇ ಚಿತಾ ಭಸ್ಮ ವಿಸರ್ಜನೆಗೆ ಸಿದ್ಧತೆ ನಡೆಸಲಾಗಿದೆ.
ವರದಿ: ಉದಯ್ ಕುಮಾರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB