ತಿಪಟೂರು: ತಾಲ್ಲೂಕಿನ ಬೊಮ್ಮಲಾಪುರ ಕೆರೆ ಕಾಮಗಾರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ.14.73 ಲಕ್ಷ ವೆಚ್ಚವನ್ನು ವಿನಿಯೋಗಿಸಿ ಕಾಮಗಾರಿಯನ್ನು ನಡೆಸುತ್ತಿದ್ದು, ಕಾಮಗಾರಿ ವೀಕ್ಷಣೆಗೆ ತಾಲ್ಲೂಕು ದಂಡಾಧಿಕಾರಿಗಳಾದ ಮೋಹನ್ ಆಗಮಿಸಿ, ಯೋಜನೆಯ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಹರ್ಷ ವ್ಯಕ್ತಪಡಿಸಿದರು.
ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯದ ಬಡ ಜನತೆಗೆ ಹಾಗೂ ರೈತರಿಗೆ ಉಪಯೋಗವಾಗುವಂತಹ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಪ್ರಸ್ತುತ ತಾಲ್ಲೂಕಿನಲ್ಲಿ ಒಟ್ಟು 15 ಕೆರೆ ಪುನಶ್ಚೇತನಗೊಳಿಸಲು ಸರಿಸುಮಾರು 2 ಕೋಟಿಯಷ್ಟು ಮೊತ್ತವನ್ನು ಮಂಜೂರುಗೊಳಿಸಿರುವುದು ಕಂಡುಬರುತ್ತಿದೆ. ಈ ತರಹದ ಸಮಾಜಮುಖಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡಲು ಧರ್ಮಸ್ಥಳ ಕ್ಷೇತ್ರದ ವೀರೇಂದ್ರ ಹೆಗ್ಗಡೆಯವರಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.
ಇಷ್ಟಲ್ಲದೇ ಈ ಒಂದು ಕೆರೆ ಪುನಶ್ಚೇತನದ ಭಾಗ್ಯ ಬೊಮ್ಮಲಾಪುರ ಗ್ರಾಮಕ್ಕೆ ದೊರೆತಿದ್ದು, ದಯವಿಟ್ಟು ಗ್ರಾಮದ ಎಲ್ಲಾ ಮುಖಂಡರು, ರೈತರು ಧರ್ಮಸ್ಥಳ ಸಂಸ್ಥೆಗೆ ಸಹಕರಿಸಿ ಉತ್ತಮ ಕೆರೆಯನ್ನಾಗಿ ಮಾರ್ಪಾಡುಗೊಳಿಸಲು ಸಹಕರಿಸಬೇಕೆಂದು ವಿನಂತಿಸಿದರು.
ಜೊತೆಗೆ ಬಾಕಿ ಉಳಿದ ಕಾಮಗಾರಿಯ ಬಗ್ಗೆಯೂ ಅತ್ಯಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭ ಕಂದಾಯ ನಿರೀಕ್ಷಕರಾದ ರಂಗಣ್ಣ,ಕಂದಾಯ ಗ್ರಾಮ ಲೆಕ್ಕಾಧಿಕಾರಿ ಸಾವಿತ್ರಮ್ಮ, ಗ್ರಾ.ಪಂ.ಅಧ್ಯಕ್ಷ ಪ್ರಸನ್ನಕುಮಾರ್, ಕೆರೆ ಸಮಿತಿ ಅಧ್ಯಕ್ಷರಾದ ನೀಲಕಂಠಸ್ವಾಮಿ, ಉಪಾಧ್ಯಕ್ಷರಾದ ತಿಮ್ಮೇಗೌಡ, ಬೊಮ್ಮಲಾಪುರ ಯೂತ್ ಕಾಂಗ್ರೆಸ್ ಬೂತ್ ಕಮಿಟಿ ಅಧ್ಯಕ್ಷರಾದ ಸೋಮಶೇಖರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಕೃಷಿ ಅಧಿಕಾರಿ ಪ್ರಮೋದ್ ಕುಮಾರ್, ಜೆ.ಸಿ.ಬಿ. ಮಾಲಿಕರಾದ ಗಣೇಶ್ ಹಾಗೂ ಗ್ರಾಮದ ರೈತರು ಉಪಸ್ಥಿತರಿದ್ದರು.
ವರದಿ: ಆನಂದ್ ತಿಪಟೂರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC