nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ

    September 13, 2025

    ರೈತರ ಜಮೀನು ಹಕ್ಕನ್ನು ಭದ್ರಪಡಿಸಲು ಪೌತಿ ಆಂದೋಲನ: ರಾಜಸ್ವ ನಿರೀಕ್ಷಕ ರವಿಚಂದ್ರನ್ 

    September 13, 2025

    ಅರಸಾಪುರ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಗಂಗರತ್ನಮ್ಮ ಅವಿರೋಧ ಆಯ್ಕೆ

    September 12, 2025
    Facebook Twitter Instagram
    ಟ್ರೆಂಡಿಂಗ್
    • ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ
    • ರೈತರ ಜಮೀನು ಹಕ್ಕನ್ನು ಭದ್ರಪಡಿಸಲು ಪೌತಿ ಆಂದೋಲನ: ರಾಜಸ್ವ ನಿರೀಕ್ಷಕ ರವಿಚಂದ್ರನ್ 
    • ಅರಸಾಪುರ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಗಂಗರತ್ನಮ್ಮ ಅವಿರೋಧ ಆಯ್ಕೆ
    • ದಸರಾ ಚಲನಚಿತ್ರೋತ್ಸವ ಉಪಸಮಿತಿ ಅಧ್ಯಕ್ಷರಾಗಿ ದೇವಲಾಪುರ ಸಿದ್ದರಾಜು ಆಯ್ಕೆ
    • ಗಾಂಜಾ ಬೆಳೆದ ಇಬ್ಬರು ಆರೋಪಿಗಳ ಬಂಧನ: ಗಾಂಜಾ ವಶ
    • ರಾಜಕೀಯ ಸ್ಥಿತಿಗತಿಯಲ್ಲಿ ಶಿಕ್ಷಕ ಪ್ರಶಸ್ತಿಗಳಿಸುವುದು ಸುಲಭವಲ್ಲ: ಈರಣ್ಣ
    • ಪಿಂಚಣಿ ಅನುಮೋದನೆ ಪತ್ರ ಮನೆ ಬಾಗಿಲಿಗೆ: ಪೌತಿ ಖಾತೆ ಆಂದೋಲನದಲ್ಲಿ ರಾಜಸ್ವ ನಿರೀಕ್ಷಕ ರವಿಚಂದ್ರನ್
    • ಶಾಲಾ ಮಕ್ಕಳ ಸಮಸ್ಯೆ ಖುದ್ದು ಅನುಭವಿಸಿದ ಸಿಇಒ: ಅಧಿಕಾರಿಗಳಿಗೆ ತರಾಟೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಚೆ ಕಚೇರಿ ಖಾತೆದಾರರ ನಕಲಿ ಸಹಿ ಬಳಸಿ ಕೋಟ್ಯಂತರ ಹಣ ಗುಳುಂ ಆರೋಪ: ಖಾತೆದಾರರಿಂದ ಪ್ರತಿಭಟನೆ
    ಜಿಲ್ಲಾ ಸುದ್ದಿ September 12, 2025

    ಅಂಚೆ ಕಚೇರಿ ಖಾತೆದಾರರ ನಕಲಿ ಸಹಿ ಬಳಸಿ ಕೋಟ್ಯಂತರ ಹಣ ಗುಳುಂ ಆರೋಪ: ಖಾತೆದಾರರಿಂದ ಪ್ರತಿಭಟನೆ

    By adminSeptember 12, 2025No Comments2 Mins Read
    post office

    ಸರಗೂರು: ಪಟ್ಟಣದ ಅಂಚೆ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರು ಖಾತೆದಾರರ ನಕಲಿ ಸಹಿ ಬಳಸಿ, ಒಂದು ಕೋಟಿಗೂ ಹೆಚ್ಚು ರೂ.ಗಳ ಅಧಿಕ ಮೊತ್ತದ ಹಣ ಲಪಟಾಯಿಸಿರುವ ಸಂಬಂಧ ಖಾತೆದಾರರು ದೂರು ನೀಡಿ ನಾಲ್ಕು ತಿಂಗಳುಗಳೇ ಕಳೆದರೂ ಠೇವಣಿ ಹಣ ಕೊಡಿಸಿಲ್ಲ ಎಂದು ಆರೋಪಿಸಿ ಖಾತೆದಾರರು ಪ್ರತಿಭಟನೆ ನಡೆಸಿದರು.

    ಪಟ್ಟಣದ ಒಂದನೇ ಮುಖ್ಯ ರಸ್ತೆಯ ಎಸ್‌ ಬಿಐ ಬ್ಯಾಂಕ್ ಕಚೇರಿ ಪಕ್ಕದಲ್ಲಿರುವ ಅಂಚೆ ಕಚೇರಿಗೆ ಮುತ್ತಿಗೆ ಹಾಕಿದ ಖಾತೆದಾರರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಕಚೇರಿಗೆ ಬೀಗ ಜಡಿದು, ಸಿಬ್ಬಂದಿಯನ್ನು ಹೊರಹಾಕಿ ನ್ಯಾಯ ಕೊಡಿಸುವಂತೆ ಒತ್ತಾಯಿಸಿದರು. ಅಂಚೆ ಕಚೇರಿಯಲ್ಲಿನ ಅಂಚೆ ಶಾಖಾ ಪಾಲಕ(ಪೋಸ್ಟಲ್ ಅಸಿಸ್ಟೆಂಟ್) ದೀಪಕ್ ಎಂಬುವವರು ಅಂಚೆ ಕಚೇರಿಯ ವಿವಿಧ ಖಾತೆಗಳಿಂದ ನಕಲಿ ಸಹಿ ಬಳಸಿ, ಲಕ್ಷಾಂತರ ರೂ. ಲೂಟಿ ಮಾಡಿದ್ದಾನೆ ಎಂದು ಹಣ ಕಳೆದುಕೊಂಡ ಖಾತೆದಾರರುಗಳು ದೂರಿದ್ದಾರೆ. ಪ್ರಕರಣ ಬೆಳಕಿಗೆ ಬಂದು ಹಲವು ತಿಂಗಳುಗಳೇ ಕಳೆದಿವೆ. ಹಣ ಲಪಟಾಯಿಸಿರುವವರ ವಿರುದ್ಧ ದೂರು ನೀಡಿದರೂ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.


    Provided by
    Provided by
    Provided by

    ಅಂಚೆ ಕಚೇರಿಯ ಉಳಿತಾಯ ಖಾತೆಯಿಂದ ಹಣ ಹಿಂಪಾವತಿಯ ಮೇಲೆ ಖಾತೆದಾರರ ನಕಲಿ ಸಹಿ ಮಾಡಿ ಹಣ ಪಡೆದಿದ್ದಾರೆ ಅದಲ್ಲದೆ ಗ್ಯಾರಂಟಿ ಯೋಜನೆ ಹಣವನ್ನು ಖಾತೆದಾರರಿಂದ ಹಣ ಜಮಾ ಮಾಡಲು ತೆಗೆದುಕೊಂಡು ಅದನ್ನು ಸಹ ಬಳಸಿಕೊಂಡು ಖಾತೆದಾರರ ಪುಸ್ತಕದಲ್ಲಿ ಮುದ್ರೆ ಹಾಕಿ ಸಹಿ ಮಾಡಿ ಕೊಟ್ಟಿದ್ದಾರೆ. ಆದರೆ ಈ ಕುರಿತು ಕಚೇರಿಯ ಪುಸ್ತಕದಲ್ಲಿ ಯಾವುದೇ ವಿವರ ನಮೂದು ಮಾಡಿಲ್ಲ. ಇದನ್ನು ಪ್ರಶ್ನಿಸಿದರೆ ಅಂಚೆ ಕಚೇರಿಯ ಅಧಿಕಾರಿಗಳು ಕೆಲವೊಂದು ಫಾರಂಗೆ ಸಹಿ ಮಾಡಿಸಿಕೊಂಡು ವಾರ ಬಿಟ್ಟು ಬನ್ನಿ ಎಂದು ಸಬೂಬು ಹೇಳುತ್ತಿದ್ದಾರೆ. ಸರ್ವರ್ ಬಿಸಿ ನಾಳೆ ಬನ್ನಿ ಎಂದು ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನು ಯಾರು ಮಾಡಿದ್ದಾರೆ ಅವರನ್ನು ತಕ್ಷಣ ಪತ್ತೆ ಹಚ್ಚಿ ಕೂಡಲೇ ಖಾತೆದಾರರಿಗೆ ಅವರ ಠೇವಣಿ ಹಣವನ್ನು ಬಡ್ಡಿ ಸಮೇತ ಕೊಡಿಸಬೇಕು. ನಕಲಿ ಸಹಿ ಮಾಡಿ ಕೋಟ್ಯಾಂತರ ರೂಗಳನ್ನು ದೋಚಿರುವ ವ್ಯಕ್ತಿಗಳು ಸೇರಿದಂತೆ ಪ್ರಕರಣದಲ್ಲಿ ಶಾಮೀಲಾಗಿರುವ ಉನ್ನತ ಅಧಿಕಾರಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಸಾರ್ವಜನಿಕರು ಒಬ್ಬ ವ್ಯಕ್ತಿಯನ್ನು ನೋಡಿ ಹಣ ಕಟ್ಟಿರುವುದಿಲ್ಲ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಪೋಸ್ಟ್ ಆಫೀಸ್ ಅನ್ನು ನಂಬಿ ಹಣ ಕಟ್ಟಿರುತ್ತಾರೆ. ಈ ಸಂಬಂಧ ಮದುವೆ ಮುಂಜಿಗಳಿಗೆ ಹಣ ಇಟ್ಟಿದ್ದು ಈಗ ಅದು ಇಲ್ಲವಾಗಿದೆ. ಈ ಹಣ ನಮಗೆ ಬರದೇ ಇದ್ದರೆ ನಾವುಗಳು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೆಲ ಗ್ರಾಹಕರುಗಳು  ಎಚ್ಚರಿಕೆ ನೀಡಿದರು. ಹಾಗೂ ಈ ಸಂಬಂಧ ಸರಗೂರು ಅಂಚೆ ಕಚೇರಿಯಲ್ಲಿ ಕೆಲ ಅಧಿಕಾರಿಗಳನ್ನು ಅಮಾನತ್ತಿನಲ್ಲಿಟ್ಟಿದ್ದಾರೆ. ಈ ಸಂಬಂಧ ಮೈಸೂರು ಜಿಲ್ಲೆಯ ಅಂಚೆ ಕಚೇರಿಯ ಹಲವಾರು ಸಿಬ್ಬಂದಿಗಳು ಸರಗೂರಿನ ಅಂಚೆ ಕಚೇರಿಗೆ ಬಂದು ಪರಿಶೀಲಿಸಿ ಇಲ್ಲಿನ  ಮನೆ ಮನೆಗೆ ಹೋಗಿ ನಿಮ್ಮ ಖಾತೆಗಳನ್ನು ದೃಢಪಡಿಸಿಕೊಳ್ಳಿ ಎಂದು ಒತ್ತಾಯಿಸಿದರು. ಸರಗೂರು ತಾಲೂಕಿನ ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿ ಸುಮಾರು ನಾಲ್ಕು ತಿಂಗಳು ಕಳೆದರೂ ಸಹ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

    ಪ್ರತಿಭಟನೆಯಲ್ಲಿ ಖಾತೆದಾರರಾದ ಮುಳ್ಳೂರು ಲೋಕೇಶ್, ಮೆಡಿಕಲ್ ನೀತಿನ್ ಕುಮಾರ್, ಸರಗೂರು ಲೋಕೇಶ್, ಸುಂದರಮ್ಮ, ರಾಜೇಶ್, ನಾಗರಾಜ್, ಚೌಡಶೆಟ್ಟಿ, ಮಹೇಶ್, ವೆಂಕಟೇಶ್, ಅನಂತ ಶಯನ, ಜಯಮ್ಮ, ಸರೋಜಮ್ಮ, ಜಿ.ಬಿ.ಶಶಿಕಲಾ, ಜಗದೀಶ್ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಹಣ ಕಳೆದು ಕೊಂಡ ನೊಂದ ಗ್ರಾಹಕರುಗಳು ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರೈತರ ಜಮೀನು ಹಕ್ಕನ್ನು ಭದ್ರಪಡಿಸಲು ಪೌತಿ ಆಂದೋಲನ: ರಾಜಸ್ವ ನಿರೀಕ್ಷಕ ರವಿಚಂದ್ರನ್ 

    September 13, 2025

    ದಸರಾ ಚಲನಚಿತ್ರೋತ್ಸವ ಉಪಸಮಿತಿ ಅಧ್ಯಕ್ಷರಾಗಿ ದೇವಲಾಪುರ ಸಿದ್ದರಾಜು ಆಯ್ಕೆ

    September 12, 2025

    ಗಾಂಜಾ ಬೆಳೆದ ಇಬ್ಬರು ಆರೋಪಿಗಳ ಬಂಧನ: ಗಾಂಜಾ ವಶ

    September 12, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ

    September 13, 2025

    ಹಾಸನ: ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ…

    ರೈತರ ಜಮೀನು ಹಕ್ಕನ್ನು ಭದ್ರಪಡಿಸಲು ಪೌತಿ ಆಂದೋಲನ: ರಾಜಸ್ವ ನಿರೀಕ್ಷಕ ರವಿಚಂದ್ರನ್ 

    September 13, 2025

    ಅರಸಾಪುರ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಗಂಗರತ್ನಮ್ಮ ಅವಿರೋಧ ಆಯ್ಕೆ

    September 12, 2025

    ದಸರಾ ಚಲನಚಿತ್ರೋತ್ಸವ ಉಪಸಮಿತಿ ಅಧ್ಯಕ್ಷರಾಗಿ ದೇವಲಾಪುರ ಸಿದ್ದರಾಜು ಆಯ್ಕೆ

    September 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.