nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಕರ ದಿನಾಚರಣೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ: ವೇದಿಕೆಯಲ್ಲೇ ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು

    September 13, 2025

    ಪಿ.ಯು.ಸಿ. ನಂತರ ಮುಂದೇನು ಎಂಬ ಪ್ರಶ್ನೆಗೆ ವಿದ್ಯಾರ್ಥಿಗಳಲ್ಲಿ ಉತ್ತರವಿರುವುದಿಲ್ಲ: ಎಂ.ಡಿ.ಶಿವಕುಮಾರ್

    September 13, 2025

    ಠಾಣಾ ಕುಶನೂರು ನೂತನ  ಪಿಎಸ್ ಐ ಪಟೇಲ್ ಅವರಿಗೆ ಸನ್ಮಾನ

    September 13, 2025
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಕರ ದಿನಾಚರಣೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ: ವೇದಿಕೆಯಲ್ಲೇ ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು
    • ಪಿ.ಯು.ಸಿ. ನಂತರ ಮುಂದೇನು ಎಂಬ ಪ್ರಶ್ನೆಗೆ ವಿದ್ಯಾರ್ಥಿಗಳಲ್ಲಿ ಉತ್ತರವಿರುವುದಿಲ್ಲ: ಎಂ.ಡಿ.ಶಿವಕುಮಾರ್
    • ಠಾಣಾ ಕುಶನೂರು ನೂತನ  ಪಿಎಸ್ ಐ ಪಟೇಲ್ ಅವರಿಗೆ ಸನ್ಮಾನ
    • ಬೀದರ್:  ಮಾಂಜ್ರಾ ನದಿಗೆ ಬಿದ್ದಿದ್ದ ವ್ಯಕ್ತಿಯ ಶವ ಪತ್ತೆ
    • ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ
    • ರೈತರ ಜಮೀನು ಹಕ್ಕನ್ನು ಭದ್ರಪಡಿಸಲು ಪೌತಿ ಆಂದೋಲನ: ರಾಜಸ್ವ ನಿರೀಕ್ಷಕ ರವಿಚಂದ್ರನ್ 
    • ಅರಸಾಪುರ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಗಂಗರತ್ನಮ್ಮ ಅವಿರೋಧ ಆಯ್ಕೆ
    • ದಸರಾ ಚಲನಚಿತ್ರೋತ್ಸವ ಉಪಸಮಿತಿ ಅಧ್ಯಕ್ಷರಾಗಿ ದೇವಲಾಪುರ ಸಿದ್ದರಾಜು ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರ ಜಮೀನು ಹಕ್ಕನ್ನು ಭದ್ರಪಡಿಸಲು ಪೌತಿ ಆಂದೋಲನ: ರಾಜಸ್ವ ನಿರೀಕ್ಷಕ ರವಿಚಂದ್ರನ್ 
    ಜಿಲ್ಲಾ ಸುದ್ದಿ September 13, 2025

    ರೈತರ ಜಮೀನು ಹಕ್ಕನ್ನು ಭದ್ರಪಡಿಸಲು ಪೌತಿ ಆಂದೋಲನ: ರಾಜಸ್ವ ನಿರೀಕ್ಷಕ ರವಿಚಂದ್ರನ್ 

    By adminSeptember 13, 2025No Comments2 Mins Read
    sargur

    ಸರಗೂರು:  ಗ್ರಾಮೀಣ ಭಾಗದ ರೈತರ ಜಮೀನು ಹಕ್ಕನ್ನು ಭದ್ರಪಡಿಸಲು ಸರ್ಕಾರ ಪೌತಿ ಆಂದೋಲನ ಹಮ್ಮಿಕೊಂಡಿದ್ದು, ರೈತರು ಇದರ ಸದುಪಯೋಗ ಪಡೆಯಬೇಕು’ ಎಂದು ರಾಜಸ್ವ ನಿರೀಕ್ಷಕ ರವಿಚಂದ್ರನ್  ಹೇಳಿದರು.

    ತಾಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪೌತಿ ಖಾತೆ ಆಂದೋಲನ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


    Provided by
    Provided by
    Provided by

    ‘ಸಾಲ ಸೌಲಭ್ಯ, ವಿಮೆ ಪರಿಹಾರ ಸೇರಿದಂತೆ ಸರ್ಕಾರದ ಪ್ರತಿಯೊಂದು ಸೌಲಭ್ಯ ಪಡೆಯಲು ಅವಶ್ಯಕವಾದ ಪೌತಿ ಖಾತೆಯನ್ನು ಸರ್ಕಾರ ಆಂದೋಲನದ ಮೂಲಕ ರೈತರಿಗೆ ನೀಡುತ್ತಿದ್ದು, ಮೃತ ರೈತರ ವಾರಸುದಾರರು ಕೂಡಲೇ ತಮ್ಮ ಜಮೀನುಗಳ ದಾಖಲಾತಿಗಳನ್ನು ವರ್ಗಾಯಿಸಿಕೊಳ್ಳಬೇಕು’ ಎಂದರು.

    ಗ್ರಾಮೀಣ ಭಾಗದ ಜನರಿಗೆ ಸರಕಾರದ ಹಲವು ಸೇವೆಗಳು ಅವರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ನೂತನ ಯೋಜನೆಗಳಲ್ಲಿ ಪೌತಿ ಖಾತೆ ಆಂದೋಲನವು ಒಂದಾಗಿದೆ. ಪೌತಿ ಖಾತೆ ಆಂದೋಲನ ಎಂದರೆ ಪಿತ್ರಾರ್ಜಿತ ಆಸ್ತಿ ಹಕ್ಕನ್ನು ರೈತರ ಹೆಸರಿಗೆ ಮಾಡಿಕೊಡುವುದು. ಈ ಪೌತಿ ಖಾತೆ ಆಂದೋಲನದ ಮೂಲ ಉದ್ದೇಶವಾಗಿದೆ.

    ಕಂದಾಯ ನಿರೀಕ್ಷಕ  ಎಂ.ಚೈತ್ರಾ ಮಾತನಾಡಿ, ‘ತಕರಾರು ಹಾಗೂ ಕಾನೂನು ತೊಡಕು ಇದ್ದ ಜಮೀನುಗಳನ್ನು ಹೊರತುಪಡಿಸಿ ಉಳಿದ ಎಲ್ಲ ರೈತರು ತಮ್ಮ ಜಮೀನುಗಳ ಖಾತೆಗಳನ್ನು ಸರಿಪಡಿಸಿಕೊಳ್ಳಬೇಕು’ ಎಂದರು.

    ಸರಕಾರದಿಂದ ಸಿಗಬಹುದಾದ ಹಲವಾರು ಪ್ರಯೋಜನೆಗಳಿಂದ ವಂಚಿತರಾಗುತ್ತಾರೆ. ಅಲ್ಲದೇ ಜಮೀನಿನ ಅಭಿವೃದ್ಧಿಗೆ ಸಂಬಂಧಿಸಿ ಬ್ಯಾಂಕ್‌ ಸಾಲಗಳು, ಬೆಳೆ ಹಾನಿ ಪರಿಹಾರ, ಬೆಳೆ ವಿಮೆಯಂತಹ ಅನೇಕ ಸೌಲಭ್ಯಗಳನ್ನು ಕಳೆದುಕೊಳ್ಳುತ್ತಿದ್ದಾರೆ.

    ಈ ನಿಟ್ಟಿನಲ್ಲಿ ನಿಗದಿಪಡಿಸಿದ ದಿನದಂದು ಗ್ರಾಮ ಆಡಳಿತ ಅಧಿಕಾರಿಗಳು ಈ ಮೊದಲೇ ಈಗಾಗಲೇ ಜಿಲ್ಲೆಯಾದ್ಯಂತ ಕಂದಾಯ ವೃತ್ತವಾರು ತಮ್ಮ ಹಳ್ಳಿಗೆ ಬಂದು ಪೌತಿ ಖಾತೆ ಆಂದೋಲನ ಮೂಲಕ ವಾರಸಾ ಖಾತೆ ದಾಖಲಿಸಿಕೊಳ್ಳಲು ಕ್ರಮ ವಹಿಸಲಾಗುತ್ತದೆ.

    ಈ ಸಂಬಂಧ ತಾವುಗಳು ಪೌತಿ ಖಾತೆದಾರರ ಮರಣ ಪ್ರಮಾಣ ಪತ್ರ, ವಂಶವೃಕ್ಷ ದೃಢೀಕರಣ, ಎಲ್ಲ ವಾರಸುದಾರರ ಆಧಾರ್‌ ಕಾರ್ಡ್‌ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಪೌತಿ ಖಾತೆ ಬದಲಾವಣೆಗೆ ಕ್ರಮ ಕೈಗೊಳ್ಳಲು ಪೌತಿ ಖಾತೆ ಆಂದೋಲನದ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಹಲವು ವಾರಸಾ ಪೌತಿ ಖಾತಾ ನಕಲುಗಳನ್ನು ರೈತರಿಗೆ ಹಸ್ತಾಂತರಿಸಲಾಯಿತು.  ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಚಿಕ್ಕಕಾಳಮ್ಮ, ಉಪಾಧ್ಯಕ್ಷ ಲಂಕೆ ರಮೇಶ್, ಸದಸ್ಯರು ಮಹೇಶ್ ಎಚ್.ಡಿ., ಸಿದ್ದರಾಜು, ಕರಿಸ್ವಾಮಿ, ಪಿಡಿಒ ಯೋಗೇಂದ್ರ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶಿಕ್ಷಕರ ದಿನಾಚರಣೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ: ವೇದಿಕೆಯಲ್ಲೇ ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು

    September 13, 2025

    ಠಾಣಾ ಕುಶನೂರು ನೂತನ  ಪಿಎಸ್ ಐ ಪಟೇಲ್ ಅವರಿಗೆ ಸನ್ಮಾನ

    September 13, 2025

    ಬೀದರ್:  ಮಾಂಜ್ರಾ ನದಿಗೆ ಬಿದ್ದಿದ್ದ ವ್ಯಕ್ತಿಯ ಶವ ಪತ್ತೆ

    September 13, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಿಕ್ಷಕರ ದಿನಾಚರಣೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ: ವೇದಿಕೆಯಲ್ಲೇ ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು

    September 13, 2025

    ಔರಾದ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ನಡೆಸಲಾಗಿದೆ ಅಂತ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ವೇದಿಕೆಯಲ್ಲೇ ಪ್ರತಿಭಟನೆ ನಡೆಸಿದ…

    ಪಿ.ಯು.ಸಿ. ನಂತರ ಮುಂದೇನು ಎಂಬ ಪ್ರಶ್ನೆಗೆ ವಿದ್ಯಾರ್ಥಿಗಳಲ್ಲಿ ಉತ್ತರವಿರುವುದಿಲ್ಲ: ಎಂ.ಡಿ.ಶಿವಕುಮಾರ್

    September 13, 2025

    ಠಾಣಾ ಕುಶನೂರು ನೂತನ  ಪಿಎಸ್ ಐ ಪಟೇಲ್ ಅವರಿಗೆ ಸನ್ಮಾನ

    September 13, 2025

    ಬೀದರ್:  ಮಾಂಜ್ರಾ ನದಿಗೆ ಬಿದ್ದಿದ್ದ ವ್ಯಕ್ತಿಯ ಶವ ಪತ್ತೆ

    September 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.