ತುಮಕೂರು: ಕರ್ನಾಟಕ ಲಲಿತಕಲಾ ಅಕಾಡೆಮಿ ಬೆಂಗಳೂರು ಹಾಗೂ ತುಮಕೂರಿನ ರವೀಂದ್ರ ಕಲಾನಿಕೇತನ ಚಿತ್ರಕಲಾ ಮಹಾವಿದ್ಯಾಲಯ ತುಮಕೂರು ಇವರ ವತಿಯಿಂದ ಗಿರಿಜನ ಉಪಯೋಜನೆಯಡಿ ರಾಜ್ಯಮಟ್ಟದ ಕಲಾ ಶಿಬಿರ ನಡೆಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕಲಾವಿದ ಕಿಶೋರ್, ಇವತ್ತು ನಮ್ಮ ದೇಶದಲ್ಲಿ ಹಾಗೂ ಕರ್ನಾಟಕದಲ್ಲಿ ಜನಪದ ಕಲೆ ನಶಿಸಿಹೋಗುತ್ತಿವೆ. ಆದ್ದರಿಂದ ನಾವು ಕಲೆಯನ್ನು ಗೌರವಿಸಬೇಕು ಅದನ್ನು ಬೆಳೆಸಬೇಕು. ಯಾಕೆ ಕಲಾ ಅಕಾಡೆಮಿಗಳು ಒಂದು ಕಾಮಧೇನು ತರ ಕೆಲಸ ಮಾಡಬಾರದು? ಎಂದು ಅವರು ಪ್ರಶ್ನಿಸಿದರು.
ಸರ್ಕಾರದಿಂದ ಬರುತ್ತಿರುವ ಅನುದಾನಗಳನ್ನು ಫಲಾನುಭವಿಗಳಿಲ್ಲ ಎಂದು ಸರ್ಕಾರಕ್ಕೆ ವಾಪಸ್ ಕಳಿಸಬಾರದು. ಇಂದು ಅರ್ಹ ಜನಾಂಗಗಳಿಗೆ ಸರ್ಕಾರದ ಅನುದಾನಗಳು ಸಿಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ತುಮಕೂರು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಟಿ.ಎಲ್.ಎಸ್. ಪ್ರೇಮ ಶಿಬಿರವನ್ನು ಉದ್ಘಾಟಿಸಿದರು. ಇದೇ ವೇಳೆ ಎಂ.ಟಿ.ಬಿ. ಆಚಾರ್ಯ ರವರ ಜನ್ಮಶತಾಬ್ದಿ ಅಂಗವಾಗಿ 38 ಕಲಾಕೃತಿಗಳನ್ನು ರವೀಂದ್ರ ಕಲಾನಿಕೇತನ ಹಾರ್ಟ್ ಗ್ಯಾಲರಿಯಲ್ಲಿ ಬಿಡುಗಡೆ ಮಾಡಲಾಯಿತು
ಈ ಸಂದರ್ಭದಲ್ಲಿ ಕಲಾವಿದ ಕಿಶೋರ್ ಕುಮಾರ್ ಅಶೋಕ್ ಪ್ರಭು ವಾಸು ಬಾಪೂಜಿ ಸಂಸ್ಥೆಯ ಸಂಸ್ಥಾಪಕರು ಹಾಗೂ ಇನ್ನೂ ಹಲವಾರು ಕಲಾವಿದರು ಉಪಸ್ಥಿತರಿದ್ದರು.
ವರದಿ: ಎ.ಎನ್. ಪೀರ್ , ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB