nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಸಬಾ ವಿ.ಎಸ್.ಎಸ್.ಎನ್.ನ ವಾರ್ಷಿಕ ಮಹಾಸಭೆ ಯಶಸ್ವಿ
    ಕೊರಟಗೆರೆ September 23, 2025

    ಕಸಬಾ ವಿ.ಎಸ್.ಎಸ್.ಎನ್.ನ ವಾರ್ಷಿಕ ಮಹಾಸಭೆ ಯಶಸ್ವಿ

    By adminSeptember 23, 2025No Comments2 Mins Read
    krishi pattina sangha

    ಕೊರಟಗೆರೆ: ಕೊರಟಗೆರೆ ತಾಲೂಕಿನ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ರೈತರು ಮತ್ತು ಆಡಳಿತ ಮಂಡಳಿ ನಡುವೆ ಉತ್ತಮ ಸಹಕಾರವಿದ್ದು, ಸಾರ್ವಜನಿಕರು ಠೇವಣಿಗಳನ್ನು ಸಹಕಾರ ಸಂಘದಲ್ಲಿ ಇಟ್ಟರೆ ಅದು ರೈತರಿಗೆ ಉಪಯೋಗವಾಗಲಿದೆ ಎಂದು ಸಂಘದ ಅಧ್ಯಕ್ಷ ಕೆ.ಎಸ್.ವಿನಯ್‌ಕುಮಾರ್ ತಿಳಿಸಿದರು.

    ಕೊರಟಗೆರೆ ಪಟ್ಟಣದಲ್ಲಿ ಕಸಬಾ ಪ್ರಾಥಮಿಕ ಸಹಾಕಾರ ಸಂಘ ಏರ್ಪಡಿಸಿದ್ದ ೨೦೨೪–೨೫ನೇ ಸಾಲಿನ ವಾರ್ಷಿಕ ಸಾಮಾನ್ಯ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಹಿಂದೆ ಕಸಬಾ ವಿ.ಎಸ್.ಎಸ್.ಎನ್. ಸಂಘವು ಬಹಳ ಸಂಕಷ್ಠದಲ್ಲಿದ್ದು ನಂತರ ಚೇತರಿಕೆ ಕಂಡಿದೆ, ತಾಲೂಕಿನಲ್ಲೇ ಹೆಚ್ಚಿನ ಸದಸ್ಯರನ್ನು ಹಾಗೂ ವ್ಯಾಪ್ತಿಯನ್ನು ಹೊಂದಿದ್ದು, ದೊಡ್ಡ ಸಹಕಾರ ಸಂಘ ಎಂಬ ಹೆಗ್ಗಳಿಕೆ ಪಡೆದಿದೆ, ಈ ಹಿಂದೆ ಸಂಘದಲ್ಲಿ ಜಿಡಿಪಿ ಸಾಲಗಳನ್ನು ನೀಡಿದ್ದು ಅವುಗಳನ್ನು ವಸೂಲಿ ಮಾಡುವುದು ಪ್ರಸ್ತುತವಿರುವ ಆಡಳಿತ ಮಂಡಳಿಗೆ ತಲೆ ನೋವಾಗಿದೆ, ಆದರೂ ಎಲ್ಲರೂ ಒಟ್ಟಾಗಿ ಸಾಲ ಮರುಪಾವತಿಗೆ ಶ್ರವಹಿಸಿ ಕಾರ್ಯ ನಿರ್ವಹಿಸುತ್ತಿದ್ದೇವೆ, ಕೆಸಿಸಿ ಸಾಲದಲ್ಲಿ ರೈತರು ಮರಣ ಹೊಂದಿದ್ದಾಗ ಅದನ್ನು ಮತ್ತೆ ಕುಟುಂಬದ ಸದಸ್ಯರಿಗೆ ವರ್ಗಾವಣೆ ಮಾಡಿ ಆ ಕುಟುಂಬಕ್ಕೆ ಹೊರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ, ಈಗಾಗಲೇ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಮಾಜಿ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ನವರು ನೂತನವಾಗಿ ಹೊಸ ರೈತರಿಗೆ ಕೆಸಿಸಿ ಸಾಲ ಕೊಡುವುದಾಗಿ ಭರವಸೆ ನೀಡಿದ್ದಾರೆ, ನಮ್ಮ ಸಹಕಾರ ಸಂಘವು ರೈತರ ಮತ್ತು ಆಡಳಿತ ಮಂಡಳಿಯ ನಡುವೆ ಉತ್ತಮವಾದ ಅನುಬಂಧ ಹೋಂದಿದೆ ಎಂದರು.


    Provided by
    Provided by

    ಡಿಸಿಸಿ ಬ್ಯಾಂಕ್‌ ನ ನೂತನ ನಿರ್ದೇಶಕ ಎಸ್.ಹನುಮಾನ್ ಮಾತನಾಡಿ, ಬರುವ ದಿನಗಳಲ್ಲಿ ರೈತರಿಗೆ ಕೆಸಿಸಿ ಸಾಲವನ್ನು ಎಲ್ಲಾ ಸಹಕಾರ ಸಂಘಗಳಿಗೆ ನೀಡುವ ಭರವಸೆಯನ್ನು ನೂತನ ಅಧ್ಯಕ್ಷರಾದ ಕೆ.ಎನ್.ರಾಜಣ್ಣ ನವರು ತಿಳಿಸಿದ್ದಾರೆ, ಈಗಾಗಲೆ ಕಸಬಾ ಸಹಕಾರ ಸಂಘಕ್ಕೆ ೪.೬೦ ಕೋಟಿ ರೂಗಳು ಕೆಸಿಸಿ ಸಾಲವನ್ನು ನೀಡಲಾಗಿದೆ, ಸಂಘವು ೪೯,೭೦ ಲಕ್ಷಗಳ ಸ್ವಂತ ಬಂಡವಾಳ ಸಾಲವನ್ನು ನೀಡಿದೆ, ಕಸಬಾ ವಿಎಸ್‌ ಎಸ್‌ ಎನ್ ತಾಲೂಕಿನಲ್ಲಿ ಅತಿ ಹೆಚ್ಚು ಶೇರುದಾರರನ್ನು ಹೊಂದಿರುವ ಸಹಕಾರ ಸಂಘವಾಗಿದ್ದು ಹಲವು ಸಮಸ್ಯೆಗಳ ನಡುವುಯೂ ಆಡೆಳಿತ ಮಂಡಳಿ ಉತ್ತಮವಾದ ಕೆಲಸ ಮಾಡುತ್ತಿದೆ ಎಂದರು.

    ಮೇಲ್ವಿಚಾರಕ ತಿಮ್ಮರಾಜು ಮಾತನಾಡಿ, ಈ ಹಿಂದೆ ಕಸಬಾ ವಿಎಸ್‌ ಎಸ್‌ ಎನ್ ಸಂಘವು ಮುಚ್ಚಲಾಗಿತ್ತು. ನಂತರ ಇದನ್ನು ಮತ್ತೆ ಮುಂಚುಣಿಗೆ ತರಲಾಯಿತು, ಸಹಕಾರ ಸಂಘದಲ್ಲಿ ಕಾರ್ಯದರ್ಶಿಯ ಪಾತ್ರ ಮಹತ್ವವಾದುದು ಕಾರ್ಯದರ್ಶಿಗಳು ಸಂಘದ ಕೆಲಸವನ್ನು ಪಾರದರ್ಶಕತೆ ಮತ್ತು ನಿಷ್ಠೆಯಿಂದ ಮಾಡಬೇಕು ಹಾಗೂ ಆಡಳಿತ ಮಂಡಳಿ ಅವರಿಗೆ ಸಹಕಾರ ನೀಡಬೇಕು, ಆಗ ರೈತರು ಆ ಸಂಘದ ಜೊತೆಗೆ ಗಟ್ಟಿಯಾಗಿ ನಿಲ್ಲುತ್ತಾರೆ ಎಂದರು.

    ವಾರ್ಷಿಕ ಮಹಾಸಭೆಯಲ್ಲಿ ಉಪಾಧ್ಯಕ್ಷೆ ಸುಂದರಮ್ಮ, ನಿದೇರ್ಶಕರುಗಳಾದ ಹೆಚ್.ಸಿ.ರಾಜಣ್ಣ, ಕೃಷ್ಣಮೂರ್ತಿ, ಪುಟ್ಟನರಸಯ್ಯ, ಜಿ.ಸಿ.ರಮೇಶ್, ಕೆ.ವಿ.ಪುರುಷೋತ್ತಮ್, ಡಿ.ಪಿ.ಸುರೇಶ್, ಡಿ.ಎಲ್.ಮಲ್ಲಯ್ಯ, ತಿಮ್ಮಪ್ಪ, ಎನ್.ನೇತ್ರಾವತಿ, ಜಿ.ಎನ್.ದಿವಾಕರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಓ.ಕೃಷ್ಣಮೂರ್ತಿ, ನೌಕರರಾದ ದಿನಕರ, ಮಾರುತಿ ಸೇರಿದಂತೆ ಇನ್ನಿತರರು ಹಾಜರಿದ್ದರು. ಸುಮಾರು ೪೮೦ ಕ್ಕೂ ಹೆಚ್ಚು ಷೇರುದಾರರು ಮಹಾಸಭೆಯಲ್ಲಿ ಭಾಗವಹಿಸಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು…

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.