ಶಿರಾ: ನಗರದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
ಮಹಮದ್ ರಫೀ (19) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ಮಹಮದ್ ರಫೀ ನಗರದ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಸಿವಿಲ್ ವಿಭಾಗದಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಅನಾರೋಗ್ಯದಿಂದ ಬಳಲುತ್ತಿದ್ದು, ಒಂದು ವಾರದಿಂದ ಸ್ವಗ್ರಾಮಕ್ಕೆ ತೆರಳಿ ಚಿಕಿತ್ಸೆ ಪಡೆದಿದ್ದ. ಮಂಗಳವಾರ ವಿದ್ಯಾರ್ಥಿ ನಿಲಯಕ್ಕೆ ವಾಪಸ್ ಬಂದಿದ್ದು. ರಾತ್ರಿ ಊಟ ಮಾಡಿ ಮಲಗಿದ್ದಾನೆ.
ಬುಧವಾರ ಮುಂಜಾನೆ ಶೌಚಾಲಯಕ್ಕೆ ಹೋಗಿ ಬಾಗಿಲು ಹಾಕಿಕೊಂಡಿದ್ದು ಅಲ್ಲಿಯೇ ಕುಸಿದು ಬಿದ್ದಿದ್ದಾನೆ. ಎಷ್ಟು ಸಮಯವಾದರೂ ಶೌಚಾಲಯದಿಂದ ಹೊರಕ್ಕೆ ಬರದ ಕಾರಣ ಇತರೇ ವಿದ್ಯಾರ್ಥಿಗಳು ಕೂಗಿದರು ಒಳಗಿನಿಂದ ಯಾವುದೇ ಶಬ್ದ ಬರದ ಕಾರಣ ಬಾಗಿಲನ್ನು ಹತ್ತಿ ನೋಡಿದಾಗ ಮಹಮದ್ ರಫೀ ಬಿದ್ದಿರುವುದನ್ನು ನೋಡಿ ವಾರ್ಡನ್ ಅವರಿಗೆ ಸುದ್ದಿ ಮುಟ್ಟಿಸಿದ್ದಾರೆ.
ಬಾಗಿಲು ತೆರೆದು ನೋಡುವ ವೇಳೆಗೆ ರಫೀ ಮೃತ ಪಟ್ಟಿದ್ದಾನೆ. ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC