nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026
    Facebook Twitter Instagram
    ಟ್ರೆಂಡಿಂಗ್
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಡೋಣೆ ವಿಎಸ್ ಎಸ್ ಎನ್ ನಲ್ಲಿ ಭಾರಿ ಅಕ್ರಮ |  ನಕಲಿ ಠೇವಣಿ ಬಾಂಡ್ ಮಾಫಿಯಾದಿಂದ ಬೀದಿಗೆ ಬಿದ್ದ ಬಡ ಕುಟುಂಬಗಳು!
    ಜಿಲ್ಲಾ ಸುದ್ದಿ September 25, 2025

    ಬೆಂಡೋಣೆ ವಿಎಸ್ ಎಸ್ ಎನ್ ನಲ್ಲಿ ಭಾರಿ ಅಕ್ರಮ |  ನಕಲಿ ಠೇವಣಿ ಬಾಂಡ್ ಮಾಫಿಯಾದಿಂದ ಬೀದಿಗೆ ಬಿದ್ದ ಬಡ ಕುಟುಂಬಗಳು!

    By adminSeptember 25, 2025No Comments4 Mins Read

    ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಹಕಾರ ಕೃಷಿ ಪತ್ತಿನ ಸಹಕಾರ ಸಂಘ ನಿ.(ವಿ ಎಸ್ ಎಸ್ ಎನ್) ನಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಸುಮಾರು 50ಕ್ಕೂ ಹೆಚ್ಚು ಮುಗ್ಧ ಬಡ ಜನರಿಗೆ ಸಹಕಾರ ಸಂಘದ ನಿಯಮ ಮೀರಿ ನಕಲಿ ನಿಶ್ಚಿತ ಠೇವಣಿ ಬಾಂಡ್ ವಿತರಿಸಿ ವಂಚನೆ ಮಾಡಿರುವ ಘಟನೆ ನಡೆದಿದೆ..


    Provided by
    Provided by

    ಬೆಂಡೋಣೆ ವಿ ಎಸ್ ಎಸ್ ಎನ್ ವ್ಯಾಪ್ತಿಯಲ್ಲಿ ಸುಮಾರು ಅಂದಾಜು 70 ಲಕ್ಷ ರೂಪಾಯಿ ವಂಚನೆ ಆಗಿರುವುದು ಸಾಬೀತಾಗಿದ್ದು. ಸಹಕಾರ ಕ್ಷೇತ್ರಕ್ಕೆ ಕಪ್ಪುಮಸಿ ಬಳಿಯುವ ಹುನ್ನಾರ ನಡೆದಿದೆ ಎನ್ನಲಾಗಿದೆ. ತುಮಕೂರು ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಇದೆ ಮೊದಲ ಬಾರಿಗೆ ಇಂತಹ ದೊಡ್ಡ ಮಟ್ಟದ ಹಣದ ಮಹಾ ವಂಚನೆ ನಡೆದುರುವುದು ಸಹಕಾರ ಕ್ಷೇತ್ರಕ್ಕೆ ಅವಮಾನ ತಂದಿದೆ.

    ಬೆಂಡೋಣೆ ವಿ ಎಸ್ ಎಸ್ ಎನ್ ವ್ಯಾಪ್ತಿಯಲ್ಲಿನ ಗ್ರಾಮಿಣ ಭಾಗದ ಬಡ ಜನರಿಗೆ ಸಹಕಾರ ಸಂಘದ ನಿಯಮಗಳನ್ನು ಗಾಳಿಗೆ ತೂರಿ ಸುಮಾರು 50ಕ್ಕೂ ಹೆಚ್ಚು ನಕಲಿ ಠೇವಣಿ ಬಾಂಡ್ ವಿತರಣೆ ಮಾಡಲಾಗಿದೆ ಎನ್ನಲಾಗಿದೆ.

    ಬೆಂಡೋಣೆ ವಿ ಎಸ್ ಎಸ್ ಎನ್ ಮಾಜಿ ಕಾರ್ಯ ನಿರ್ವಹಣಾಧಿಕಾರಿ ಹೆಚ್ ಆರ್ ರಮೇಶ್ ಆಂಡ್ ಟೀಂ ನಿಂದ ನಕಲಿ ಠೇವಣಿ ಬಾಂಡ್ ವಿತರಣೆ ಮಾಡಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇದೇ ಸಂದರ್ಭದಲ್ಲಿ ಕೆಲವರಿಗೆ ಮಾತ್ರ ಅಸಲಿ ಠೇವಣಿ ಬಾಂಡ್ ವಿತರಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

    ಮುಗ್ಧ ಜನರೇ ಈ ವಂಚಕರ ಟಾರ್ಗೆಟ್:

    ಗ್ರಾಮೀಣ ಭಾಗದ ಮುಗ್ಧ ಮಹಿಳೆಯರು ಮತ್ತು ಬಡ ಕೂಲಿ ಕಾರ್ಮಿಕರು ತಮ್ಮ ಹೊಟ್ಟೆ– ಬಟ್ಟೆಯನ್ನು ಕಟ್ಟಿ ತಮ್ಮ ಕೂಲಿ ಹಣದಿಂದ ಬಂದ ಅಲ್ಪ–ಸ್ವಲ್ಪ ಕೂಡಿಟ್ಟ ಹಣವನ್ನು ವಿ ಎಸ್ ಎಸ್ ಎನ್ ನಲ್ಲಿ ಠೇವಣಿ ಇಟ್ಟಿದ್ದರು. ಸಹಕಾರ ಸಂಘದ ಮೇಲಾಧಿಕಾರಿಗಳ ಕಣ್ಣು ತಪ್ಪಿಸಿ ನಕಲಿ ನಿಶ್ಚಿತ ಠೇವಣಿ ಬಾಂಡ್ ಗಳನ್ನು ಜನರಿಗೆ ನೀಡಿ ಯಾಮಾರಿಸಿರುವ ಘಟನೆ  ಬೆಂಡೋಣೆ ವಿ ಎಸ್ ಎಸ್ ಎನ್ ಆಡಳಿತ ಮಂಡಳಿ ಮಾಡಿದೆ.

    ಮಾಜಿ ಕಾರ್ಯ ನಿರ್ವಹಣಾಧಿಕಾರಿ ಹೆಚ್ ಆರ್ ರಮೇಶ್ ಅಮಾನತ್ತು

    ಬೆಂಡೋಣೆ ವಿ ಎಸ್ ಎಸ್ ಎನ್ ನಲ್ಲಿ ಅತಿ ಹೆಚ್ಚು ಹಣ ದುರುಪಯೋಗ ಸಾಭೀತು ಆದ ಬೆನ್ನಲ್ಲೇ ಮಾಜಿ ಸಹಕಾರ ಸಚಿವ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ ಎನ್ ರಾಜಣ್ಣ ರವರ ಆದೇಶದ ಮೇರೆಗೆ ಕಾರ್ಯ ನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಚ್ ಆರ್ ರಮೇಶ್ ರವನನ್ನು ಅಮಾನತ್ತು ಮಾಡಲಾಗಿದೆ.

    ಸಾರ್ವಜನಿಕರ ಹಣ ದುರುಪಯೋಗ : ಆಸ್ತಿ ಮುಟ್ಟುಗೋಲು

    ಮಾಜಿ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಆರ್.ರಮೇಶಗೆ ಸೇರಿದ ಆಸ್ತಿಗಳನ್ನ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಅಕ್ರಮ ಹಣ ದುರುಪಯೋಗ ಮಾಡಿರುವುದು ಕಂಡು ಬಂದ ತಕ್ಷಣ ಆರೋಪಿಗೆ ಸೇರಿದ ಆಸ್ತಿಯನ್ನ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

    ಎಫ್ ಐಆರ್ ದಾಖಲಿಸುವಂತೆ ಒತ್ತಾಯ:

    ಸಾರ್ವಜನಿಕರ ಮತ್ತು ಮುಗ್ಧ ಜನರ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ತಪ್ಪಿತಸ್ಥರ ಮೇಲೆ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸುವಂತೆ ಸಾರ್ವಜನಿಕರು ವಾರ್ಷಿಕ ಮಹಾಸಭೆಯಲ್ಲಿ ಒತ್ತಾಯಿಸಿದ್ದಾರೆ.

    ಬೆಂಡೋಣೆ ವಿ ಎಸ್ ಎಸ್ ಎನ್ ನಲ್ಲಿ ನಿಶ್ಚಿತ ಠೇವಣಿ ಹಣ ಹೂಡಿಕೆ ಮಾಡಿದ್ದ ಜನರ ಹಣವನ್ನು ತಕ್ಷಣವೇ ಬಡ್ಡಿ ಸಮೇತ ವಾಪಸ್ ಕೊಡಿಸಿ ಕೊಡಿ ಎಂದು ವಾರ್ಷಿಕ ಮಹಾಸಭೆಯಲ್ಲಿ ಮೇಲ್ವಿಚಾರಕ ತಿಮ್ಮರಾಜುಗೆ ಗೇರಾವ್ ಹಾಕಿದ ಘಟನೆಯೂ ಸಹ ನಡೆದಿದೆ. ನಮಗೆ ಸೂಕ್ತ ನ್ಯಾಯ ಒದಗಿಸಿ ತಪ್ಪಿತಸ್ಥರ ಮೇಲೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಹಕಾರ ಸಚಿವ ಹಾಗೂ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ ಎನ್ ರಾಜಣ್ಣರವರಲ್ಲಿ ಮೋಸಕ್ಕೆ ಒಳಗಾದ ಮಹಿಳೆಯರು ಮತ್ತು ಬಡ ಜನರು ಮಾದ್ಯಮದ ಮೂಲಕ ಮನವಿ ಮಾಡಿದ್ದಾರೆ.

    ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಎನ್ ಆರ್ ಸಣ್ಣಪ್ಪಯ್ಯ ಸರ್ಕಾರದ ಅಧಿಸೂಚನೆ ಸಂಖ್ಯೆ : ಸಿಒ/71/ಸಿಎಲ್ಎಂ/2016. ದಿನಾಂಕ : 06-12-2016 ರಲ್ಲಿ ಅಧಿಕಾರ ಚಲಾಯಿಸಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಬೆಂಡೋಣೆ ಯಲ್ಲಿ ಆಡಳಿತಾತ್ಮಕ ಹಾಗೂ ನಿಶ್ಚಿತ ಠೇವಣಿ ಬಾಂಡ್ ವಿತರಣೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ಕಲಂ 65 ರಡಿ ಪರಿವೀಕ್ಷಣೆ ನಡೆಸಿ ಈ ಆದೇಶದ ದಿನಾಂಕ ದಿಂದ 30 ದಿನದೊಳಗೆ ವರದಿ ಸಲ್ಲಿಸಲು ಕಲಂ 65ರ ಪರಿವೀಕ್ಷಣಾಧಿಕಾರಿಯಾಗಿ ವಿನಾಸ್‌ ಗುರುರಾಜು, ಸಹಕಾರ ಅಭಿವೃದ್ಧಿ ಅಧಿಕಾರಿಯನ್ನು ನೇಮಕ ಮಾಡಿ ಆದೇಶ ನೀಡಲಾಗಿದೆ.

    ಸ್ವಾಮಿ.. ನಾನು ನನ್ನ ಮಗಳ ಮದುವೆಗೆಂದು ಕೂಲಿ–ನಾಲಿ ಮಾಡಿ ಸಂಪಾದಿಸಿದ ಎರಡು ಲಕ್ಷ ಹಣವನ್ನು ವಿ ಎಸ್ ಎಸ್ ಎನ್ ನಲ್ಲಿ ಠೇವಣಿ ಇಟ್ಟಿದ್ದೆ. ನಾನು ಮೂಲತಃ ಬಂಡೆ ಕಾರ್ಮಿಕ, ನನ್ನ ಕುಟುಂಬ ಈಗ ಬೀದಿಗೆ ಬಂದಿದೆ. ನನ್ನ ಹಣವು ಇಲ್ಲ ನನಗೆ ಸೇರಬೇಕಾದ ಠೇವಣಿ ಬಡ್ಡಿಯೂ ಇಲ್ಲ ನಾನು ಯಾರ ಬಳಿ ನ್ಯಾಯ ಕೇಳಬೇಕು. ನನಗೆ ನನ್ನ ಠೇವಣಿ ಹಣ ಬೇಕು. ನಕಲಿ ಠೇವಣಿ ಬಾಂಡ್ ನಮಗೆ ನೀಡಿ ನಮಗೆ ಮಹಾ ವಂಚನೆ ಮಾಡಿದ್ದಾರೆ. ಬ್ಯಾಂಕ್ ನ ಮೇಲಾಧಿಕಾರಿಗಳನ್ನು ಕೇಳಿದರೆ ಉಡಾಫೆ ಉತ್ತರ ನೀಡುತ್ತಿದ್ದಾರೆ.

    —  ರಾಜಣ್ಣ. ಗೌಜಗಲ್ಲು ಗ್ರಾಮ,  ಮೋಸಕ್ಕೆ ಒಳಗಾದ ಬಂಡೆ ಕಾರ್ಮಿಕ.


    ನನ್ನ ಮೊಮ್ಮಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೆಂದು ನಾನು ಐದು ಲಕ್ಷ ರೂಪಾಯಿಗಳನ್ನು ಇಲ್ಲಿ ಠೇವಣಿ ಇಟ್ಟಿದ್ದೆ. ನನಗೆ ನಕಲಿ ಠೇವಣಿ ಬಾಂಡ್ ನೀಡಿ ನನ್ನನು ವಂಚಿಸಿದ್ದಾರೆ. ವಿ ಎಸ್ ಎಸ್ ಎನ್ ನಲ್ಲಿ ಹಿಂದೆ ಕೆಲಸ ಮಾಡುತ್ತಿದ್ದ ಕಾರ್ಯ ನಿರ್ವಹಣಾಧಿಕಾರಿ ರಮೇಶ್ ರವರನ್ನು ನನ್ನ ಹಣ ಕೊಡಿ ಎಂದು ಕೇಳಿದರೆ ನನಗೆ ನೀವು ಯಾವುದೇ ಹಣವು ಕೊಟ್ಟಿಲ್ಲ ಎಂದು ಹೇಳುತ್ತಿದ್ದಾರೆ.ನನ್ನ ಕುಟುಂಬಕ್ಕೆ ಈಗ ನ್ಯಾಯ ಬೇಕಿದೆ ನನ್ನ ಮೊಮ್ಮಗಳನ್ನು ಬಿಎಸ್ಸಿ ಪದವಿ ಮಾಡಿಸಬೇಕು ನನಗೆ ನ್ಯಾಯ ಒದಗಿಸಿ ಕೊಡಿ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣರಲ್ಲಿ ಮನವಿ ಮಾಡುತ್ತಿದ್ದೇನೆ.

    —  ಸಿದ್ಧಲಿಂಗಮ್ಮ. ಮಲ್ಲೇಕಾವು ಗ್ರಾಮ. ನೊಂದ ರೈತ ಮಹಿಳೆ.


    ವಿ ಎಸ್ ಎಸ್ ಎನ್ ನಲ್ಲಿ ನಕಲಿ ಠೇವಣಿ ಬಾಂಡ್ ನಿಂದ ಅನ್ಯಾಯಕ್ಕೆ ಒಳಗಾದ ಬಗ್ಗೆ ನಮ್ಮ ಗಮನಕ್ಕೆ ಬಂದಿರುತ್ತದೆ. ನಾವು ಮಾಹಿತಿ ತಿಳಿದ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಂಡು ಎಲ್ಲ ಠೇವಣಿದಾರರ ಹಣವನ್ನು ಶೀಘ್ರವೇ ವಾಪಸು ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಮಾಜಿ ಕಾರ್ಯದರ್ಶಿ ಹೆಚ್.ಆರ್.ರಮೇಶ್ ಮೇಲೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ನ್ಯಾಯಾಲಯದ ಮೊರೆ ಹೋಗಿ ಅವರಿಗೆ ಸೇರಿದ ಆಸ್ತಿಗಳನ್ನು ಸಹ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ನಕಲಿ ಠೇವಣಿ ಬಾಂಡ್ ವಿತರಣೆ ಮಾಡಿದ ಬಗ್ಗೆ ಈಗಾಗಲೇ ಪರಿಶೀಲನೆ ನಡೆಸಲಾಗಿದೆ. ಶೀಘ್ರವೇ ತಪ್ಪಿತಸ್ಥರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುತ್ತೇವೆ.

    —  ತಿಮ್ಮರಾಜು. ಮೇಲ್ವಿಚಾರಕರು, ಕೊರಟಗೆರೆ.


    ಇನ್ನಾದರೂ ಸಂಬಂಧ ಪಟ್ಟ ಅಧಿಕಾರಿಗಳು ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಈ ಮುಗ್ಧ ಜನರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಾರಾ ಎಂದು ಕಾದು ನೋಡಬೇಕಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Comments are closed.

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಮಧುಗಿರಿ/ದೊಡ್ಡೇರಿ: ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ ಎಂದು ಪರಿಷತ್ ಸದಸ್ಯ ಆರ್ ರಾಜೇಂದ್ರ ರಾಜಣ್ಣ ತಿಳಿಸಿದರು. ಮಧುಗಿರಿ ತಾಲ್ಲೂಕಿನ…

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.