ಸರಗೂರು: ಕಾಡಂಚಿನ ಗ್ರಾಮದ ಜನರಿಗೆ ಆರೋಗ್ಯವೃದ್ಧಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿರುವ ಪ್ರಶಂಸನೀಯ ಹಾಗೂ ತುಂಬಾ ಸಂತೋಷಕರ ವಿಷಯವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು.
ತಾಲೂಕಿನ ಬಿ ಮಟಕರೆ ಗ್ರಾಪಂ ವ್ಯಾಪ್ತಿಯ ನೇಮ್ಮನಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ, ಸಾರ್ವಜನಿಕ ಆಸ್ಪತ್ರೆ ಐ.ಸಿ.ಟಿ.ಸಿ.ವಿಭಾಗ ಹೆಚ್.ಡಿ.ಕೋಟೆ ಇವರ ವತಿಯಿಂದ, ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ ನೆಮ್ಮನ ಹಳ್ಳಿ ಗ್ರಾಮದಲ್ಲಿ ಶುಕ್ರವಾರದಂದು ಸಮುದಾಯ ಆಧಾರಿತ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನೆಮ್ಮನ ಹಳ್ಳಿ ಗ್ರಾಮದಲ್ಲಿ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಿದ್ದು ಹಾಗೂ ನಾವು ಇಂದು 2ನೇ ಬಾರಿ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ನಡೆಸುತ್ತಿದ್ದೇವೆ. ಈ ಶಿಬಿರದಲ್ಲಿ ಕಣ್ಣಿನ ಪರೀಕ್ಷೆ, ಮಧುಮೇಹ ಮತ್ತು ರಕ್ತದೊತ್ತಡ, ಐಸಿಟಿಸಿ ರಕ್ತ ಪರೀಕ್ಷೆ, ಕಫ ಪರೀಕ್ಷೆ ಬಗ್ಗೆ ತಪಾಸಣೆ ಮಾಡಲಾಗುತ್ತದೆ.
ಸುತ್ತಮುತ್ತಲ ಗ್ರಾಮದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಶಿಬಿರವನ್ನು ಯಶಸ್ವಿಗೊಳಿಸಿ ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಇಂತಹ ಆರೋಗ್ಯ ಕಾರ್ಯಕ್ರಮಗಳು ಹೆಚ್ಚಿನದಾಗಿ ಆಗಬೇಕು ಮತ್ತು ಇತ್ತೀಚಿನ ದಿನಗಳಲ್ಲಿ ಕ್ಯಾನರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಕ್ಯಾನರ್ ಆರೋಗ್ಯ ಶಿಬಿರಗಳನ್ನು ಮುಂದಿನ ದಿನಗಳಲ್ಲಿ ಆಯೋಜಿಸುತ್ತೇವೆ ಎಂದರು.
ನಂತರ ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಂದ್ರ ಶೇಖರ್ ಮಾತನಾಡಿ, ನಮ್ಮ ಪ್ರಾಥಮಿಕ ಆರೋಗ್ಯ ಕೇಂದ್ರದ ನೆಮ್ಮನ ಹಳ್ಳಿ ಗ್ರಾಮದಲ್ಲಿ ಈ ಶಿಬಿರವನ್ನು ಮಾಡಲು ತಿಳಿಸಿದ್ದೇವೆ ಕಾರಣ ನೇಮ್ಮನ ಹಳ್ಳಿ ಗ್ರಾಮದ ಜನರಿಗೆ ಒಳ್ಳೆಯ ಆರೋಗ್ಯವನ್ನು ಒದಗಿಸುವುದು ಮತ್ತು ಜನರಿಗೆ ಆರೋಗ್ಯ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಈ ಗ್ರಾಮವನ್ನು ಆಯ್ಕೆ ಮಾಡಲಾಗಿದೆ, ಆದುದರಿಂದ ಗ್ರಾಮದ ಹೆಚ್ಚಿನ ಜನರು ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ನಂತರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ದೇವದಾಸ್ ರವರು ಮಾತನಾಡಿ, ಆರೋಗ್ಯವೇ ಭಾಗ್ಯ, ಎಲ್ಲರೂ ಆರೋಗ್ಯವಾಗಿರಿ ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ ನಮ್ಮ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಿರುವುದು ತುಂಬಾ ಸಂತೋಷಕರ ವಿಷಯ, ಆದರೆ ಶಿಬಿರಕ್ಕೆ ಹೆಚ್ಚಿನ ಜನರು ಬಂದು ಚಿತ್ರವನ್ನು ಯಶಸ್ವಿಗೊಳಿಸಬೇಕೆಂದು ಈ ಸಂದರ್ಭದಲ್ಲಿ ತಿಳಿಸಿದರು.
ಐಸಿಟಿಸಿ ಆಪ್ತ ಸಮಾಲೋಚಕ ರಾಮು ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ ನುಡಿಯನ್ನು ನುಡಿದರು. ಈ ಶಿಬಿರದಲ್ಲಿ ಬಿಪಿ ಶುಗರ್ 80 ತಪಾಸಣೆ , 40 ಜನ ಕಣ್ಣಿನ ಪರೀಕ್ಷೆ, 60ಜನ ಐಸಿಟಿಸಿ ಪರೀಕ್ಷೆ, ಈ ಶಿಬಿರದಲ್ಲಿ ಪ್ರಯೋಜನವನ್ನು ಪಡೆದಿರುತ್ತಾರೆ.
ಈ ಕಾರ್ಯಕ್ರಮದಲ್ಲಿ ದಂತ ತಜ್ಞ ಡಾ.ಪೂರ್ಣಿಮಾ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಿ ಭಾಗ್ಯಮ್ಮ, ಪಂಚಾಯಿತಿ ಸದಸ್ಯರು ನಾಗೇಂದ್ರ, ನಾಗನಾಯ್ಕ, ಬೊಮ್ಮ, ಪಿಬಿಎಸ್ಕೆ ವೈದ್ಯಾಧಿಕಾರಿ ಡಾ.ಹೇಮಲತಾ, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಶರಣಪ್ಪ, ರವಿರಾಜ್, ನಾಗರಾಜು, ಉಮೇಶ್, ಮಹೇಶ್, ಲೋಲಕ್ಷಿ, ಮಹದೇವ್ ಜಲಜ, ಜಯಲಕ್ಷ್ಮಿ, ಗಿರೀಶ್, ಆಶಾ ಕಾರ್ಯಕರ್ತೆಯರು ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC