ಔರಾದ: ಬೀದರ್ ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬೋಸ್ಕೋ ಬೆಂಗಳೂರು ಹಾಗೂ ಡಾನ್ ಬೋಸ್ಕೋ ಬೀದರ್ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಕತ್ವ ಯೋಜನೆಯಡಿಯಲ್ಲಿ ಪಾಲನೆ–ಪೋಷಣೆಯಿಂದ ವಂಚಿತರಾದ ಮಕ್ಕಳಿಗೆ ಸೂಕ್ತ ಪರಿವಾರದ ವ್ಯವಸ್ಥೆ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ. ಇದರಿಂದ ಮಕ್ಕಳು ಮಾನಸಿಕ, ದೈಹಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಡಾನ್ ಬೋಸ್ಕೋ ಬೀದರ್ ಸಂಸ್ಥೆಯ ಪೋಷಕತ್ವ ಯೋಜನೆ ಜಿಲ್ಲಾ ಸಂಯೋಜಕರಾದ ರಮೇಶ್ ಸೂರ್ಯವಂಶಿ ಹೇಳಿದರು.
ಶುಕ್ರವಾರ, ತಾಲೂಕಿನ ಸಂತಪೂರ ಗ್ರಾಮದ ದೀಪಾಲಯ ಸಮಾಜ ಸೇವಾ ಸಂಸ್ಥೆಯಲ್ಲಿ ದೀಪಾಲಯ ಸಮಾಜ ಸೇವಾ ಸಂಸ್ಥೆಯ ಸಾಮಾಜಿಕ ಕಾರ್ಯಕರ್ತರು ಮತ್ತು ಆರ್ಬಿಟ್ ಸಂಸ್ಥೆಯ ಔರಾದ ತಾಲೂಕಿನ ಸಾಮಾಜಿಕ ಕಾರ್ಯಕರ್ತರು ಜಂಟಿಯಾಗಿ ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ಈ ಸಭೆಯಲ್ಲಿ ಪೋಷಕತ್ವ ಯೋಜನೆ ಕುರಿತು ಕುಲಂಕುಶವಾಗಿ ಮಾಹಿತಿಯನ್ನು ನೀಡಲಾಯಿತು. ಪೋಷಕತ್ವ ಯೋಜನೆಯ ಲಾಭ ಅರ್ಹ ಮಕ್ಕಳಿಗೆ ದೊರೆಯಬೇಕಾದರೆ ಸ್ವಯಂ ಸೇವಾ ಸಂಸ್ಥೆಗಳ ಪಾಲುದಾರಿಕೆ ಬಹು ಮುಖ್ಯವಾಗಿದೆ ಮತ್ತು ತಾವು ತಮ್ಮ ತಮ್ಮ ಕ್ಷೇತ್ರದಲ್ಲಿ ಸಮಾಜ ಸೇವೆಗೆ ಹೋಗಿದ್ದಾಗ ನಿಮ್ಮ ಗಮನಕ್ಕೆ, ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳ ಮಾಹಿತಿ ದೊರೆತರೆ ನಮಗೆ ತಿಳಿಸಬೇಕೆಂದು ಡಾನ್ ಬಾಸ್ಕೋ ಬೀದರ್ ಸಂಸ್ಥೆಯ ಪೋಷಕತ್ವ ಯೋಜನೆ, ಜಿಲ್ಲಾ ಸಂಯೋಜಕರಾದ ರಮೇಶ್ ರವರು ಹೇಳಿದರು.
ಪೋಷಕತ್ವ ಎಂದರೆ ಕಾನೂನಿನ ಪ್ರಕಾರ ಅನಾಥರು ಎಂದು ಪರಿಗಣಿಸಿದ ಮಕ್ಕಳು–ಪರಿವಾರದ ಆರೈಕೆಯಿಂದ ವಂಚಿತರಾದ ಮಕ್ಕಳಿಗೆ ತಾತ್ಕಾಲಿಕ ಪರಿವಾರದ ಮೂಲಕ ಸಿಗುವ ಕಾಳಜಿಯಾಗಿದೆ. ಬಾಲನ್ಯಾಯ ಕಾಯ್ದೆ — 2015 ತಿದ್ದುಪಡಿ 21ರ ಅನ್ವಯ ಪೋಷಕತ್ವ ಯೋಜನೆ 2022 ಅನುಷ್ಠಾನಗೊಳ್ಳಲು ಸರ್ಕಾರ — ಜನರ ಮಧ್ಯೆ ಸ್ವಯಂ ಸೇವಾ ಸಂಸ್ಥೆಗಳು ಸೇತುವೆಯಾಗಿ ಕಾರ್ಯ ಯಾವ ರೀತಿಯಲ್ಲಿ ನಿರ್ವಹಿಸಬೇಕು. ಎಂಬ ಮಾಹಿತಿಯನ್ನು ಸರಾಗವಾಗಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣವನ್ನು ಸಂಸ್ಥೆಯ ನಿರ್ದೇಶಕಿಯರಾದ ಸಿಸ್ಟರ್ ಲೀನಟ್ ಅವರು ಮಾಡಿದರು. ಮತ್ತು ಈ ಕಾರ್ಯಕ್ರಮವು ಡಾನ್ ಬೋಸ್ಕೋ ಚಿಕ್ಕಪೇಟ ಬೀದರ್ ಸ್ವಯಂ ಸೇವಾ ಸಂಸ್ಥೆಯ ನಿರ್ದೇಶಕರಾದ ಫಾದರ್ ಸ್ಟೀವನ್ ಲಾರೆನ್ಸ್ ಅವರ ನಿರ್ದೇಶನದ ಮೇರೆಗೆ ಜರುಗಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎರಡು ಸಂಸ್ಥೆಯ ಸಾಮಾಜಿಕ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC