nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

    August 15, 2026

    ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ

    August 15, 2026

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026
    Facebook Twitter Instagram
    ಟ್ರೆಂಡಿಂಗ್
    • ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
    • ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ
    ಪಾವಗಡ September 28, 2025

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    By adminSeptember 28, 2025No Comments2 Mins Read
    vamilki

    ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಶನಿವಾರ ಮಹರ್ಷಿ ವಾಲ್ಮೀಕಿ ವಿಗ್ರಹ ಅನಾವರಣ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಜನಪ್ರತಿನಿಧಿಗಳು ಹಾಗೂ ವಾಲ್ಮೀಕಿ ಸಮುದಾಯದ ಗಣ್ಯರು ಭಾಗವಹಿಸಿದರು.

    ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ವಹಿಸಿದ್ದರು.  ಮಾಜಿ ಸಚಿವ ಬಳ್ಳಾರಿ ಶ್ರೀರಾಮುಲು ಅವರು ಮಾತನಾಡಿ, “ವಾಲ್ಮೀಕಿ ಸಮುದಾಯದವರು ಪಕ್ಷಾತೀತವಾಗಿ ಸಮಾಜದ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಅಭಿವೃದ್ಧಿಗೆ ಒತ್ತುಕೊಡಬೇಕು. ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಲು ಪ್ರೋತ್ಸಾಹಿಸಬೇಕು” ಎಂದು ಕರೆ ನೀಡಿದರು.

    ಮಾಜಿ ಸಚಿವ ಹಾಗೂ ಹಾಲಿ ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಅವರು, “ವಾಲ್ಮೀಕಿ ಸಮಾಜದಲ್ಲಿ ನಾಯಕತ್ವ ಹುಟ್ಟಿನಿಂದಲೇ ಇದೆ. ಆದರೆ ಜನರನ್ನು ಆಳುವಂತಹ ನಾಯಕರಾಗಲು ಶಿಕ್ಷಣವೇ ಪ್ರಮುಖ ಆಯುಧ. ಪ್ರತಿಯೊಬ್ಬರೂ ವಿದ್ಯಾಭ್ಯಾಸದಲ್ಲಿ ಶ್ರಮಿಸಬೇಕು” ಎಂದು ಸಲಹೆ ನೀಡಿದರು.

    ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರು, “ವಾಲ್ಮೀಕಿ ಸಮಾಜವು ಎಲ್ಲಾ ಸಮುದಾಯಗಳಂತೆ ಉತ್ತಮ ಸ್ಥಾನಕ್ಕೆ ಬೆಳೆಯಬೇಕು. ಯಾವುದೇ ದ್ವೇಷದ ಕೆಲಸಕ್ಕೆ ಮುಂದಾಗದೆ ಸಾಮರಸ್ಯದಿಂದ ನಡೆದುಕೊಳ್ಳಬೇಕು. ವಾಲ್ಮೀಕಿ ಮಹರ್ಷಿಗಳಿಗೆ ವಿಧಾನಸೌಧದ ಮುಂದೆ ವಿಗ್ರಹ ಪ್ರತಿಷ್ಠಾಪನೆ ಮಾಡಿದ ಸಿದ್ದರಾಮಯ್ಯ ಹಾಗೂ ವಾಲ್ಮೀಕಿ ದಿನಾಚರಣೆಗೆ ರಜೆ ಘೋಷಿಸಿದ ಯಡಿಯೂರಪ್ಪರನ್ನು ಸ್ಮರಿಸಬೇಕು” ಎಂದು ಅಭಿಪ್ರಾಯ ಪಟ್ಟರು.

    ಮಾಜಿ ಸಚಿವ ವೆಂಕಟರಮಣಪ್ಪ ಅವರು, “ನಾಯಕ ಸಮಾಜವು ಪ್ರೀತಿಯಿಂದ ಎಲ್ಲ ಸಮಾಜಗಳೊಂದಿಗೆ ಬೆರೆತು ಬೆಳೆಯಬೇಕು. ರಾಜಣ್ಣ ಅವರ ಪದವಿ ಕಳೆದುಹೋಗಲು ಕೆಲವು ಶಕ್ತಿಗಳು ಷಡ್ಯಂತ್ರ ನಡೆಸಿದ್ದು ನೋವು ತಂದಿದೆ. ಆದರೂ ಸ್ನೇಹ-ಸೌಹಾರ್ದತೆಯಿಂದ ಮುಂದೆ ಸಾಗುತ್ತೇವೆ” ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ದೊರೆ ರಾಜ ಜಯಚಂದ್ರ ಶಾಸಕ ಎಚ್ ವಿ ವೆಂಕಟೇಶ್, ಇಇ ಅನಿಲ್ ಕುಮಾರ್, ಇಇ ಹನುಮಂತರಾಯಪ್ಪ,  ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಜಂಗಮಪ್ಪ, ಎಚ್.ತಿಮ್ಮಯ್ಯ, ಮಧುಸೂದನ್, ಉಪನ್ಯಾಸಕ ನಾಗರಾಜು, ಪುತ್ಥಳಿ ನಿರ್ಮಾತೃ ನವೀನ್ ಕುಮಾರ್, ಪುರಸಭೆ ಸದಸ್ಯರಾದ ಪಿ.ಎಚ್.ರಾಜೇಶ್ ರವಿ ಮುಖಂಡಗಳಾದ ಬ್ಯಾಡನೂರು ಶಿವು, ಕೆ.ರಾಂಪುರದ ಆನಂದ್, ರಂಗಮ್ಮ, ಶಿವಕುಮಾರ್, ಅಂಬಿಕಾ ರಮೇಶ್, ಎರ್ರಪ್ಪ ಸೇರಿದಂತೆ  ಸಮುದಾಯದ ಮುಖಂಡರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ,  ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

    August 15, 2026

    ಔರಾದ: ತಾಲೂಕಿನ ಮಹಾರಾಜವಾಡಿ ಗ್ರಾಮದಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು…

    ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ

    August 15, 2026

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.