nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೋಕ್ಸೋ ಪ್ರಕರಣ: ಗಾಯಕ ‘ಮ್ಯೂಸಿಕ್ ಮೈಲಾರಿ’ ಮಹಾರಾಷ್ಟ್ರದಲ್ಲಿ ಬಂಧನ

    December 17, 2025

    ವಿಧಾನಸಭೆಯಲ್ಲಿ ಗೃಹಲಕ್ಷ್ಮಿ ಬಾಕಿ ಹಣದ ಕಿಚ್ಚು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ, ವಿಪಕ್ಷಗಳ ಸಭಾತ್ಯಾಗ

    December 17, 2025

    80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ

    December 17, 2025
    Facebook Twitter Instagram
    ಟ್ರೆಂಡಿಂಗ್
    • ಪೋಕ್ಸೋ ಪ್ರಕರಣ: ಗಾಯಕ ‘ಮ್ಯೂಸಿಕ್ ಮೈಲಾರಿ’ ಮಹಾರಾಷ್ಟ್ರದಲ್ಲಿ ಬಂಧನ
    • ವಿಧಾನಸಭೆಯಲ್ಲಿ ಗೃಹಲಕ್ಷ್ಮಿ ಬಾಕಿ ಹಣದ ಕಿಚ್ಚು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ, ವಿಪಕ್ಷಗಳ ಸಭಾತ್ಯಾಗ
    • 80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ
    • ಗುಡ್ಡ ಗಾಡು ಓಟದ ಸ್ಪರ್ಧೆ: ಡಿ.18ರಂದು ಆಯ್ಕೆ ಪ್ರಕ್ರಿಯೆ
    • ಲೋಹಿಯಾ ಪ್ರಶಸ್ತಿಗೆ ಶಿವಾನಂದ ತಗಡೂರು ಆಯ್ಕೆ
    • ರಾಜ್ಯದ ಜೈಲುಗಳ ಮೇಲೆ ಸರಣಿ ದಾಳಿ: ಮೊಬೈಲ್, ಮಾರಕಾಸ್ತ್ರ ಹಾಗೂ ಗಾಂಜಾ ಪತ್ತೆ
    • ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!
    • ಕುಣಿಗಲ್ ಸಹಕಾರಿ ರಂಗಕ್ಕೆ ತಾರತಮ್ಯವಾಗಿದ್ದಲ್ಲಿ ಸರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ದಸರಾ: ಜಂಬೂ ಸವಾರಿಗೆ ಸಾಕ್ಷಿಯಾದ ಸಾವಿರಾರು ಜನರು
    ತುಮಕೂರು October 3, 2025

    ತುಮಕೂರು ದಸರಾ: ಜಂಬೂ ಸವಾರಿಗೆ ಸಾಕ್ಷಿಯಾದ ಸಾವಿರಾರು ಜನರು

    By adminOctober 3, 2025No Comments2 Mins Read
    tumakuru dasara

    ತುಮಕೂರು:  ನಗರದಲ್ಲಿ ಗುರುವಾರ ತುಮಕೂರು ದಸರಾ’ ಅಂಗವಾಗಿ ಜರುಗಿದ ‘ಜಂಬೂ ಸವಾರಿ’ಗೆ ಜಿಲ್ಲೆಯ ನಾನಾ ಕಡೆಗಳಿಂದ ಬಂದಿದ್ದ ಸಾವಿರಾರು ಜನ ಸಾಕ್ಷಿಯಾದರು.

    ಕಲಾ ತಂಡಗಳ ವೈಭವ, ಗಜ ಪಡೆಯ ಗಾಂಭೀರ್ಯದ ನಡೆಯನ್ನು ಕಣ್ಣುಂಬಿಕೊಂಡರು. ರಸ್ತೆಯ ಇಕ್ಕೆಲಗಳಲ್ಲಿ ನಿಂತು ಮೆರವಣಿಗೆ ವೀಕ್ಷಿಸಿದರು. ಅಂಬಾರಿ ಹೊತ್ತ ಶ್ರೀರಾಮ ಆನೆಯ ಜತೆಗೆ ಎರಡು ಲಕ್ಷ್ಮೀ ಆನೆಗಳು ರಾಜ ಬೀದಿಯಲ್ಲಿ ಗಾಂಭೀರ್ಯದಲ್ಲೇ ಹೆಜ್ಜೆ ಹಾಕಿದವು.


    Provided by
    Provided by

    ದಸರಾ ಪ್ರಯುಕ್ತ ಜಿಲ್ಲಾ ಆಡಳಿತದಿಂದ ಸೆ. 22ರಿಂದ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದವು. ಕೊನೆಯ ದಿನ ನಡೆದ ಅಂಬಾರಿ ಮೆರವಣಿಗೆ ಹಬ್ಬದ ಸಂಭ್ರಮ ಇಮ್ಮಡಿಗೊಳಿಸಿತು. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಸಂಖ್ಯೆಯ ಜನರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಟೌನ್‌ಹಾಲ್ ಬಳಿ ಸಾರ್ವಜನಿಕರಿಗೆ ಅಸನದ ವ್ಯವಸ್ಥೆ ಮಾಡಲಾಗಿತ್ತು.

    ಟೌನ್‌ ಹಾಲ್‌ ಹತ್ತಿರ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿದ್ದ ಚಾಮುಂಡೇಶ್ವರಿ ದೇವಿಗೆ ಪುಷ್ಪ ನಮನ ಸಲ್ಲಿಸಿ, ನಮಿಸಿದರು. ಶಾಸಕರಾದ ಟಿ.ಬಿ.ಜಯಚಂದ್ರ, ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಚಂದ್ರಶೇಖರಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌, ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಹಾನಗರ ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಇತರರು ಭಾಗವಹಿಸಿದ್ದರು.

    ಟೌನ್‌ಹಾಲ್‌ನಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಲಾಯಿತು. ಅಶೋಕ ರಸ್ತೆಯಲ್ಲಿ ಸಾಗಿದ ಮೆರವಣಿಗೆ ಸ್ವಾತಂತ್ರ್ಯ ಚೌಕ, ಜಿಲ್ಲಾಧಿಕಾರಿ ಕಚೇರಿ ಮುಂಭಾಗ, ಅಮಾನಿಕೆರೆ ರಸ್ತೆ, ಕೋತಿತೋಪು ಮುಖ್ಯರಸ್ತೆ, ಎಸ್‌.ಎಸ್‌.ವೃತ್ತದಿಂದ ಬಿ.ಎಚ್.ರಸ್ತೆ ತಲುಪಿತು. ಅಲ್ಲಿಂದ ಭದ್ರಮ್ಮಛತ್ರದ ಮುಖಾಂತರ ಜೂನಿಯರ್ ಕಾಲೇಜು ಬಳಿ ಕೊನೆಗೊಂಡಿತು.

    ಎಸ್.ಎಸ್.ವೃತ್ತ ಬಳಿ ಸಾರ್ವಜನಿಕರು ಕುಳಿತುಕೊಂಡು ಜಂಬೂ ಸವಾರಿ ನೋಡಲು ವೇದಿಕೆ ಸಿದ್ಧಪಡಿಸಲಾಗಿತ್ತು. ಅಶೋಕ ನಗರ, ಕುವೆಂಪು ನಗರ ಒಳಗೊಂಡಂತೆ ಸುತ್ತಮುತ್ತಲಿನ ಪ್ರದೇಶದ ಜನರು ಇದರ ಪ್ರಯೋಜನ ಪಡೆದರು. ಮೈದಾನದಲ್ಲಿ ದೇವರ ಮೂರ್ತಿಗೆ ಶಮಿ ಪೂಜೆ, ಬನ್ನಿ ಮುಡಿಯುವ ಕಾರ್ಯಕ್ರಮ ನೆರವೇರಿಸಲಾಯಿತು.

    ಮೆರವಣಿಗೆ ಸಾಗುವ ರಸ್ತೆಯಲ್ಲಿ ವಾಹನಗಳ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಶಾಂತಿಯುತವಾಗಿ ಮೆರವಣಿಗೆ ನೆರವೇರಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು. ಸದಾ ವಾಹನ ದಟ್ಟಣೆ ಇರುವ ಟೌನ್‌ ಹಾಲ್‌ ನಲ್ಲಿ ವೇದಿಕೆ ನಿರ್ಮಿಸಿದ್ದರಿಂದ ವಾಹನ ಸವಾರರು ಪರದಾಡಿದರು.

    ತುಮಕೂರು ದಸರಾ ವಿಡಿಯೋ ನೋಡಿ:  https://youtu.be/q7V8Jmwr35U


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ

    December 17, 2025

    ಗುಡ್ಡ ಗಾಡು ಓಟದ ಸ್ಪರ್ಧೆ: ಡಿ.18ರಂದು ಆಯ್ಕೆ ಪ್ರಕ್ರಿಯೆ

    December 17, 2025

    ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಿದ ಆರೋಪ: ಶಿಕ್ಷಕಿ ನೀಡಿದ ಸ್ಪಷ್ಟನೆ ಏನು?

    December 17, 2025

    Leave A Reply Cancel Reply

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪೋಕ್ಸೋ ಪ್ರಕರಣ: ಗಾಯಕ ‘ಮ್ಯೂಸಿಕ್ ಮೈಲಾರಿ’ ಮಹಾರಾಷ್ಟ್ರದಲ್ಲಿ ಬಂಧನ

    December 17, 2025

    ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಸಿದ್ಧ ಜನಪದ ಗಾಯಕ ‘ಮ್ಯೂಸಿಕ್ ಮೈಲಾರಿ’ ಅಲಿಯಾಸ್ ಮೈಲಾರಿಯನ್ನು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ…

    ವಿಧಾನಸಭೆಯಲ್ಲಿ ಗೃಹಲಕ್ಷ್ಮಿ ಬಾಕಿ ಹಣದ ಕಿಚ್ಚು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ, ವಿಪಕ್ಷಗಳ ಸಭಾತ್ಯಾಗ

    December 17, 2025

    80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ

    December 17, 2025

    ಗುಡ್ಡ ಗಾಡು ಓಟದ ಸ್ಪರ್ಧೆ: ಡಿ.18ರಂದು ಆಯ್ಕೆ ಪ್ರಕ್ರಿಯೆ

    December 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.