nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026

    ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ

    August 15, 2026
    Facebook Twitter Instagram
    ಟ್ರೆಂಡಿಂಗ್
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    • ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    • ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ
    • ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.
    • ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
    • ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೈ.ಎನ್.ಹೊಸಕೋಟೆ | ಕಸ್ತೂರಿ ತಿಲಕ ವಂಶಜರ ಜಂಬೂಸವಾರಿ
    ಪಾವಗಡ October 4, 2025

    ವೈ.ಎನ್.ಹೊಸಕೋಟೆ | ಕಸ್ತೂರಿ ತಿಲಕ ವಂಶಜರ ಜಂಬೂಸವಾರಿ

    By adminOctober 4, 2025No Comments2 Mins Read
    y n hosakote

    ವೈ.ಎನ್.ಹೊಸಕೋಟೆ: ಯಲ್ಲಪ್ಪನಾಯಕನ ಹೊಸಕೋಟೆ ಸಂಸ್ಥಾನದ ನಿರ್ಮಾತೃ ಪಾಳೇಗಾರ ಕಾಲದಿಂದಲೂ ಸಾಗಿ ಬಂದಿರುವ ಪಾರಂಪರಿಕ ಜಂಬೂ ಸವಾರಿಯು ಗುರುವಾರದ ವಿಜಯದಶಮಿಯಂದು ಎಂದಿನಂತೆ ಈ ವರ್ಷವೂ ಗ್ರಾಮದಲ್ಲಿ ನಡೆಯಿತು.

    ಸಂಸ್ಥಾನದ ದೊರೆಯ ಮನೆಯಲ್ಲಿ ಪಾಡ್ಯಮಿಯಿಂದಲೇ ಆರಂಭಗೊಂಡಿದ್ದ ನವರಾತ್ರಿಯ ಸಾಂಪ್ರದಾಯಿಕ ಪೂಜೆಗಳು ಪೂರ್ಣಗೊಂಡ ನಂತರ ವಿಜಯದಶಮಿಯಂದು ಸಂಜೆ 3 ಗಂಟೆ ಸಮಯದಲ್ಲಿ ಅಶ್ವಾರೂಢರಾದ ದೊರೆ ರಾಜಾ ಜಯಚಂದ್ರರಾಜುರವರು ಕೋಟೆ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ದಸರಾ ಜಂಬೂ ಸವಾರಿಗೆ ಚಾಲನೆ ನೀಡಿದರು.

    ಕೊಂಬು ಕಹಳೆ ವಾದ್ಯತಾಳಗಳೊಂದಿಗೆ, ದಂಡು ದಳವಾಯಿವಾಯಿಗಳು, ಸಂಸ್ಥಾನದ ಖಾವಂದಾರರುಗಳಿಂದ ಕೂಡಿದ ಮೆರೆವಣಿಗೆ ಗ್ರಾಮದೇವತೆ ಗೌರಸಮುದ್ರ ಮಾರಮ್ಮ, ತುಮ್ಮಲುಮಾರಮ್ಮ, ನಿಡಗಲ್ ಮಾರಮ್ಮ, ಬೊಮ್ಮಲಿಂಗೇಶ್ವರ, ಕೊಲ್ಲಾಪುರದಮ್ಮ, ರಾಮದೇವರು, ಇತ್ಯಾದಿ ದೇವರುಗಳ ಉತ್ಸವ ಮೂರ್ತಿಗಳೊಂದಿಗೆ ಪುರ ಜನರ ಸಮೇತವಾಗಿ ಹೊರಟ ಮೆರವಣಿಗೆ ಪುರಬೀದಿಗಳಲ್ಲಿ ಸಾಗಿ ಬಂದು ಗ್ರಾಮದ ಪೂರ್ವದಲ್ಲಿರುವ ಬನ್ನಿ ಮಂಟಪಕ್ಕೆ ಬಂದು ಸೇರಿತು.

    ಬನ್ನಿ ಮಂಟಪದ ಬನ್ನಿ ಮರಕ್ಕೆ ದೊರೆಯು ಸಾಂಪ್ರದಾಯಿಕ ಪೂಜೆ ಸಲ್ಲಿಸಿ ನಾಲ್ಕು ದಿಕ್ಕುಗಳಿಗೂ ಅಂಬು ಹಾಕಿ ಎಲ್ಲಾ ಕಡೆ ಮಳೆ ಬಿದ್ದು ಜನತೆ ಸಂಮೃದ್ದಿಯಿಂದ ಇರಲಿ ಎಂದು ಎಂದಿನಂತೆ ಪ್ರಾರ್ಥನೆ ಮಾಡಿದರು. ಅಲ್ಲಿಂದ ಮುಂದೆ ರಾಜ ಮೆರವಣಿಗೆ ಪುರಬೀದಿಗಳಲ್ಲಿ ಸಾಗಿತು. ಜಾತಿಮತ ಬೇದಗಳಿಲ್ಲದೆ ಎಲ್ಲರೊಡಗೂಡಿ ಬರುತ್ತಿದ್ದ ಅಶ್ವಾರೂಡ ರಾಜಾ ಜಯಚಂದ್ರರಾಜುರವರು ಗ್ರಾಮದ ಪ್ರಮುಖ ದೇವಾಲಯಗಳಲ್ಲಿ ಪೂಜೆ ನೆರವೇರಿಸಿ ರಾಜರ ಮನೆ ಸೇರುವುದರೊಂದಿಗೆ ಮುಕ್ತಾಯಗೊಂಡಿತು.

    ಈ ಜಂಬೂಸವಾರಿ ಸಂಪ್ರದಾಯವು ಸಂಸ್ಥಾನ ಪ್ರಾರಂಭದೊಂದಿಗೆ ತಳಕು ಹಾಕಿಕೊಂಡಿದ್ದು, ತಲೆ ತಲಾಂತರದಿಂದ ಸಾಗಿಬರುತ್ತಿದ್ದು ಮೈಸೂರಿನ ಜಂಬೂಸವಾರಿಯಷ್ಟೇ ವೈಶಿಷ್ಟ್ಯತೆಯನ್ನು ಪಡೆದಿದೆ.  ಶಮಿವೃಕ್ಷದ ಪೂಜೆಯ ನಂತರ ಎಲ್ಲಾ ಸಾರ್ವಜನಿಕರು ಶಮೀ ಪತ್ರೆಯನ್ನು ಪಡೆದು ಪರಸ್ಪರ ಹಂಚಿಕೊಳ್ಳುತ್ತಾ, ಬಾಳು ಬಂಗಾರವಾಗಲಿ, ನಮ್ಮ ನಿಮ್ಮ ನಡುವಿನ ವಿಶ್ವಾಸ ಶಾಶ್ವತವಾಗಿರಲಿ ಎಂದು ಶುಭ ಹಾರೈಕೆ ಮಾಡಿಕೊಂಡರು.

    ಬೆಸ್ಕಾಂ ಕಛೇರಿಯಲ್ಲಿರುವ ವರಸಿದ್ದಿ ವಿನಾಯಕ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಹತ್ತಿ ಮತ್ತು ಹಣ್ಣಿನ ಅಲಂಕಾರಗಳನ್ನು ಮಾಡಲಾಗಿತ್ತು. ಬನ್ನಿ ಮಂಟಪಕ್ಕೆ ಬಂದ ಜನತೆ ವಿನಾಯಕನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಕೊರಟಗೆರೆ: ಸರ್ಕಾರಿ ಶಾಲೆಗಳು ಮಕ್ಕಳ ಭವಿಷ್ಯ ರೂಪಿಸುವ ಪ್ರಮುಖ ಕೇಂದ್ರಗಳಾಗಿದ್ದು, ಅವುಗಳ ಅಭಿವೃದ್ಧಿಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಸಮಾಜ…

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026

    ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ

    August 15, 2026

    ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.

    August 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.