nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026
    Facebook Twitter Instagram
    ಟ್ರೆಂಡಿಂಗ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ
    • ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನ ಅಲೆಯುವುದನ್ನು ತಪ್ಪಿಸಲು ಪ್ರಜಾಸೌಧ: ಅನಿಲ್ ಚಿಕ್ಕಮಾದು
    ಜಿಲ್ಲಾ ಸುದ್ದಿ October 4, 2025

    ಜನ ಅಲೆಯುವುದನ್ನು ತಪ್ಪಿಸಲು ಪ್ರಜಾಸೌಧ: ಅನಿಲ್ ಚಿಕ್ಕಮಾದು

    By adminOctober 4, 2025No Comments2 Mins Read
    sargur

    ಸರಗೂರು:   ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಅಲೆಯುವುದನ್ನು ತಪ್ಪಿಸುವ ಸಲುವಾಗಿ ಒಂದೇ ಸೂರಿನಡಿ 32 ಇಲಾಖೆಗಳು ಬರುವಂತೆ ‘ಪ್ರಜಾಸೌಧ’ ಕಟ್ಟಡ ವಿನ್ಯಾಸಗೊಳಿಸಿದ್ದು, ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದು  ಶಾಸಕರು, ಅರಣ್ಯ ಮತ್ತು ವಸತಿ ವಿಹಾರಧಾಮ ಸಂಸ್ಥೆಗಳ ಅಧ್ಯಕ್ಷ ಅನಿಲ್ ಚಿಕ್ಕಮಾದು ತಿಳಿಸಿದರು.

    ಪಟ್ಟಣದ ನೀರಾವರಿ ಇಲಾಖೆಯ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 8.60  ಕೋಟಿ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ‘ಪ್ರಜಾಸೌಧ’ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.


    Provided by
    Provided by

    ಮಾಜಿ ಶಾಸಕ ದಿ.ಎಸ್.ಚಿಕ್ಕಮಾದು, ಮಾಜಿ ಸಂಸದ ದಿ.ಆರ್.ಧ್ರುವನಾರಾಯಣ್ ಅವರು ಸತತ ಪರಿಶ್ರಮದಿಂದಾಗಿ ಹೋಬಳಿ ಕೇಂದ್ರವಾಗಿದ್ದ ಸರಗೂರು, ಕೋಟೆ ತಾಲೂಕಿನಿಂದ ಬೇರ್ಪಟ್ಟು ನೂತನ ತಾಲೂಕಾಗಿ ಘೋಷಣೆಯಾಗಿ 8 ವರ್ಷ ಕಳೆದಿದೆ. ಸದ್ಯ ನೀರಾವರಿ ಇಲಾಖೆ ಜಾಗವನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಿಕೊಂಡು ಸಿಎಂ ಸಿದ್ದರಾಮಯ್ಯ ಅವರಿಂದ ಅನುದಾನ ಬಿಡುಗಡೆ ಮಾಡಿಸಿ ‘ಪ್ರಜಾಸೌಧ’ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ಇಲ್ಲಿ 32 ಇಲಾಖೆಗಳೂ ಕಾರ್ಯನಿರ್ವಹಿಸಲಿವೆ ಎಂದು ಅವರು ಹೇಳಿದರು.

    ಆಸ್ಪತ್ರೆ, ಕೋರ್ಟ್, ಅಗ್ನಿಶಾಮಕ ಠಾಣೆ: ರಾಜ್ಯದಲ್ಲಿ ಸಮ್ಮಿಶ್ರ ಸರಕಾರವಿದ್ದಾಗ ಪದವಿ ಕಾಲೇಜು ಮಂಜೂರಾಯಿತು. ಕಾಂಗ್ರೆಸ್ ಸರಕಾರದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣ, 32 ಕೋಟಿ ರೂ.ವೆಚ್ಚದಲ್ಲಿ 100 ಹಾಸಿಗೆಯುಳ್ಳ ದೊಡ್ಡಾಸ್ಪತ್ರೆ, ನೀರಾವರಿ ಇಲಾಖೆಯ ಜಾಗದಲ್ಲಿಯೇ ನ್ಯಾಯಾಲಯ, 2 ಎಕರೆ ಜಾಗದಲ್ಲಿ ಜಾಗದಲ್ಲಿ ಅಗ್ನಿಶಾಮಕದಳ ಕಟ್ಟಡ ನಿರ್ಮಾಣಕ್ಕೆ 4 ಕೋಟಿ ರೂ.ಅನುದಾನ ಬಂದಿದೆ. ಹಂತ–ಹಂತವಾಗಿ ಇಲಾಖೆಗಳ ಕಟ್ಟಡಗಳ ನಿರ್ಮಿಸಲಾಗುವುದು. ಹಳ್ಳಿಗಳಿಂದ ಕೂಡಿದ ಸರಗೂರು ತಾಲೂಕಿನ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.

    ಪ್ರವೇಶಾತಿ ಕೊರತೆ: ಪಟ್ಟಣದಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಕ್ಕಳ ಪ್ರವೇಶಾತಿ ಕೊರತೆ ಇದ್ದು, ಮುಚ್ಚುವ ಭೀತಿಯಲ್ಲಿದೆ. ಕಾಲೇಜು ಮುಚ್ಚುವುದು ಸುಲಭ. ಆದರೆ, ಮಂಜೂರು ಮಾಡಿಸಿಕೊಂಡು ಬರುವುದು ಬಹಳ ಕಷ್ಟ. ಹೀಗಾಗಿ ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಕಾಲೇಜಿಗೆ ಸೇರಿಸಬೇಕು. ಆ ಮೂಲಕ ಸರಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು. ಬಿಡುಗಲು 3.20 ಎಕರೆ ಜಾಗದಲ್ಲಿ ನಿವೇಶನ ಹಂಚಿಕೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಬಾಕಿ ಇರುವ ಸಾಗುವಳಿಯನ್ನು ಕೊಡಿಸುವ ಕೆಲಸವನ್ನು ಮಾಡಲಾಗುವುದು ಎಂದು ಅವರು ಹೇಳಿದರು.

    ಪ್ರತಿ ವಾರ್ಡ್ ಗಳಿಗೆ ಪ್ರತ್ಯೇಕವಾಗಿ ಅನುದಾನ ಬಿಡುಗಡೆ ಮಾಡಲಾಗುವುದು. ಒಂದನೇ ಮುಖ್ಯ ರಸ್ತೆಯಲ್ಲಿ ಬಾಕಿ ಇರುವ ರಸ್ತೆ ಕಾಮಗಾರಿ ಪೂರ್ಣಗೊಳಿಸಲಾಗುವುದು. 2ನೇ ಮುಖ್ಯ ರಸ್ತೆ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಲಾಗುವುದು. ಕ್ರೀಡಾಂಗಣದ ಅಭಿವೃದ್ಧಿಗೆ ಕ್ರಮವಹಿಸಲಾಗುವುದು. ಹ್ಯಾಂಡ್‌ ಪೋಸ್ಟ್–ಸರಗೂರು ಡಬಲ್ ರಸ್ತೆ ನಿರ್ಮಾಣಕ್ಕೆ ಕ್ರಮವಹಿಸಲಾಗುವುದು. ಸರಗೂರು ಪಟ್ಟಣ ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಾಣಕ್ಕೂ ಮುಂದಾಗಲಾಗುವುದು ಎಂದರು.

    ತಹಶೀಲ್ದಾರ್ ಮೋಹನಕುಮಾರಿ ಮಾತನಾಡಿ, ಒಂದೇ ಸೂರಿನಡಿ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸಲು ಕಟ್ಟಡ ನಿರ್ಮಾಣ ಮಾಡಬೇಕು. ಆದಷ್ಟು ಬೇಗ ಮುಗಿಸಿ ಇಲಾಖೆಗೆ ಹಸ್ತಾಂತರಿಸಬೇಕು ಎಂದು ತಿಳಿಸಿದರು.

    ಪಟ್ಟಣ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ ಮಾತನಾಡಿದರು.  ಈ ಸಂದರ್ಭದಲ್ಲಿ ಉಪಾಧ್ಯಕ್ಷ ಶಿವಕುಮಾರ್, ಸದಸ್ಯರಾದ ಚಲುವಕೃಷ್ಣ, ರಾಧಿಕಾ, ವಿನಯ್, ನವೀನ್, ರಮೇಶ್, ಸ್ವಾಮಿ, ಮುಖ್ಯಾಧಿಕಾರಿ ಸಂತೋಷ್‌ಕುಮಾರ್, ಕಾಂಗ್ರೆಸ್ ಮುಖಂಡರಾದ ಶಂಭುಲಿಂಗನಾಯಕ, ಅಣ್ಣಯ್ಯಸ್ವಾಮಿ, ಕುರುಬ ಸಮಾಜದ ಅಧ್ಯಕ್ಷ ಎಂ.ಬಿ.ಆನಂದ್, ಚಿಕ್ಕವೀರನಾಯಕ, ಕಂದೇಗಾಲ ಶಿವರಾಜು, ನವೀನ್ ಮಸಹಳ್ಳಿ, ಮನುಗನಹಳ್ಳಿ ಗುರುಸ್ವಾಮಿ, ಸಿದ್ದರಾಜು, ವೇಣುಗೋಪಾಲ್, ಚಿನ್ನಸ್ವಾಮಿ ದಡದಹಳ್ಳಿ, ಕುಂದೂರು ಮೂರ್ತಿ, ಮೈಸೂರು ಚಂದ್ರು, ರುದ್ರಯ್ಯ , ಸಣ್ಣಸ್ವಾಮಿ, ಶಾಸಕರ ಆಪ್ತ ಕಾರ್ಯದರ್ಶಿ ಮಂಜುನಾಥ್, ಸುದರ್ಶನ್ ಸೇರಿದಂತೆ ಇನ್ನಿತರರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ಬೆಂಗಳೂರು: ರಾಜಧಾನಿಯ ಕಸ ವಿಲೇವಾರಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಈಗ ‘ಕಸದ ಕಿಚ್ಚು’ ಹತ್ತಿಕೊಂಡಿದೆ. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ಸಾಗಿಸುವುದನ್ನು…

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.