nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!

    October 5, 2025

    ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಅಂತ ಕೇಳ್ಬೇಡಿ: ಸರ್ವೇದಾರರಿಗೆ ಡಿ.ಕೆ.ಶಿವಕುಮಾರ್ ಸಲಹೆ

    October 5, 2025

    ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

    October 5, 2025
    Facebook Twitter Instagram
    ಟ್ರೆಂಡಿಂಗ್
    • ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!
    • ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಅಂತ ಕೇಳ್ಬೇಡಿ: ಸರ್ವೇದಾರರಿಗೆ ಡಿ.ಕೆ.ಶಿವಕುಮಾರ್ ಸಲಹೆ
    • ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
    • ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿಯ ಆಡಳಿತ ಬರಬೇಕು: ಯತ್ನಾಳ್
    • ತುಮಕೂರು: ರಾಗಿ ಖರೀದಿ ನೋಂದಣಿ ಆರಂಭ
    • ಶೆಡ್, ದನದ ಕೊಟ್ಟಿಗೆಗೆ ಸ್ಟಿಕ್ಕರ್ ಹಾಕಿದ್ದಾರೆ: ಬೆಸ್ಕಾಂ ಸಿಬ್ಬಂದಿ ಯಡವಟ್ಟಿಗೆ ಸಮೀಕ್ಷೆದಾರರು ಕಂಗಾಲು
    • ಒಕ್ಕಲಿಗರ ಮೀಸಲಾತಿಗೆ ಧಕ್ಕೆಯಾದರೆ ಉಗ್ರ ಹೋರಾಟ: ನಂಜಾವಧೂತ ಸ್ವಾಮೀಜಿ
    • ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಹಿಳೆಯರು ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಕ್ಕಲಿಗರ ಮೀಸಲಾತಿಗೆ ಧಕ್ಕೆಯಾದರೆ ಉಗ್ರ ಹೋರಾಟ: ನಂಜಾವಧೂತ ಸ್ವಾಮೀಜಿ
    ಕುಣಿಗಲ್ October 5, 2025

    ಒಕ್ಕಲಿಗರ ಮೀಸಲಾತಿಗೆ ಧಕ್ಕೆಯಾದರೆ ಉಗ್ರ ಹೋರಾಟ: ನಂಜಾವಧೂತ ಸ್ವಾಮೀಜಿ

    By adminOctober 5, 2025No Comments2 Mins Read
    okkaliga

    ಕುಣಿಗಲ್: ರಾಜ್ಯ ಸರ್ಕಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ. ಆತುರವಾಗಿ ವರದಿ ಪಡೆದು ಒಕ್ಕಲಿಗರ ಮೀಸಲಾತಿಗೆ ಧಕ್ಕೆಯಾದರೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ನಂಜಾವಧೂತ ಸ್ವಾಮೀಜಿ ಎಚ್ಚರಿಸಿದರು.

    ಪಟ್ಟಣದಲ್ಲಿ ಶನಿವಾರ ನಡೆದ ಒಕ್ಕಲಿಗರ ಮಾಹಿತಿ ಮತ್ತು ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು,  ಸರ್ಕಾರ ಹಠಕ್ಕೆ ಬಿದ್ದು ಸಮೀಕ್ಷೆ ಮಾಡುತ್ತಿದ್ದು, ಅಂಕಿ ಅಂಶಗಳ ಪ್ರಕಾರ ಶೇ.70ರಷ್ಟು ಮುಗಿದಿದ್ದರೂ, ಗೊಂದಲಗಳು ನಿವಾರಣೆಯಾಗಿಲ್ಲ. ಸಮೀಕ್ಷೆ ವರದಿ ರಾಜಕೀಯ ಮೀಸಲಾತಿಗೆ ಪೂರಕವಾಗಿದ್ದು, ಸರ್ಕಾರಕ್ಕೆ ಸಮೀಕ್ಷೆ ಮುಗಿಸಿ ವರದಿ ಪಡೆಯಲು ಆತುರ ಯಾಕೆ? ಒಂದು ವೇಳೆ ವರದಿ ಆಧರಿಸಿ ಒಕ್ಕಲಿಗರ ಶೇ.4 ಮೀಸಲಾತಿಗೆ ಧಕ್ಕೆಯಾದರೆ ಮುಂದಿನ ದಿನಗಳಲ್ಲಿ ಹೋರಾಟ ಅನಿವಾರ್ಯವಾಗುತ್ತದೆ ಎಂದರು.


    Provided by
    Provided by
    Provided by

    ಮುಖ್ಯಮಂತ್ರಿ ತಮ್ಮ ಸಮುದಾಯದವರಿಗೆ ‘ಕುರುಬ’ ಎಂದು ಮಾತ್ರ ಬರೆಸಲು ಸೂಚನೆ ನೀಡಿದ್ದಾರೆ. ಆದರೆ ಕೆಲ ಒಕ್ಕಲಿಗರು ಪ್ರತಿಷ್ಠೆಯಿಂದಾಗಿ ಸಮೀಕ್ಷೆಯ ಸೂಕ್ಷ್ಮಗಳ ಅರಿವಿಲ್ಲದೆ ಮಾಹಿತಿ ನೀಡುತ್ತಿದ್ದಾರೆ. ಸಮೀಕ್ಷೆಯ ನೂನ್ಯತೆಗಳನ್ನು ಸರಿಪಡಿಸಿ, ಸಮೀಕ್ಷೆಗೆ ಇನ್ನೂ ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದರು.

    ವಿಶ್ವ ಒಕ್ಕಲಿಗರ ಸಂಸ್ಥಾನದ ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ಒಕ್ಕಲಿಗರು ಸಮೀಕ್ಷೆಗೆ ಸಮರ್ಪಕ ಮಾಹಿತಿ ನೀಡದಿದ್ದರೆ, ಇಡೀ ಸಮುದಾಯಕ್ಕೆ ಮಾರಕವಾಗುತ್ತದೆ. ನಿರಂತರ ರಜೆಗಳ ಪ್ರಯುಕ್ತ ಬಹುತೇಕ ಮಂದಿ ಸಮೀಕ್ಷೆಯಲ್ಲಿ ಪಾಲ್ಗೊಂಡು ಮಾಹಿತಿ ನೀಡಿಲ್ಲ. ಅಪೂರ್ಣವಾದ ಸಮೀಕ್ಷೆಯನ್ನು ಸಂಪೂರ್ಣಗೊಳಿಸಲು ಇನ್ನೂ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

    ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಬಿ.ರಾಮಸ್ವಾಮಿ ಗೌಡ,  ಶಾಸಕ ಡಾ.ರಂಗನಾಥ್‌ ಮಾತನಾಡಿದರು.  ಆದಿ ಚುಂಚನಗಿರಿ ಮಠದ ಪ್ರಸನ್ನಾಂದ ನಾಥ ಸ್ವಾಮೀಜಿ, ಮಂಗಳನಾಂದ ಸ್ವಾಮೀಜಿ, ಮಾಜಿ ಸಚಿವ ಡಿ.ನಾಗರಾಜಯ್ಯ, ರಾಜ್ಯ ಒಕ್ಕಲಿಗರ ಸಂಘದ ಕಾರ್ಯದರ್ಶಿ ಕೋನಪ್ಪ ಗೌಡ, ಹನುಮಂತರಾಯಪ್ಪ, ನಿರ್ದೇಶಕ ಲೋಕೇಶ್  ಡಿ.ನಾಗರಾಜಯ್ಯ, ತುಮುಲ್ ನಿರ್ದೇಶಕ ಡಿ.ಕೃಷ್ಣಕುಮಾರ್, ಬಿಜೆಪಿ ಮುಖಂಡ ರಾಜೇಶ್‌ ಗೌಡ ಪಾಲ್ಗೊಂಡಿದ್ದರು.

    ಉಪಜಾತಿ ಬರೆಸಲು ಮನವಿ: ವೇದಿಕೆಯಲ್ಲಿದ್ದ ಸ್ವಾಮೀಜಿಗಳು ಗಣ್ಯರು ಸಮೀಕ್ಷೆಯಲ್ಲಿ ‘ಒಕ್ಕಲಿಗ’ ಎಂದೇ ಬರೆಸುವಂತೆ ಮನವಿ ಮಾಡಿದರೆ ಅರೆಶಂಕರ ಮಠದ ಸಿದ್ದರಾಮ ಚೈತನ್ಯಸ್ವಾಮೀಜಿ ಒಕ್ಕಲಿಗರು ತಮ್ಮ ಉಪ ಜಾತಿಗಳ ಅಸ್ಥಿತ್ವಕ್ಕೆ ಮತ್ತು ಮೀಸಲಾತಿಗಾಗಿ ಉಪ ಜಾತಿಗಳ ಹೆಸರು ಬರೆಸುವಂತೆ ಮನವಿ ಮಾಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶೆಡ್, ದನದ ಕೊಟ್ಟಿಗೆಗೆ ಸ್ಟಿಕ್ಕರ್ ಹಾಕಿದ್ದಾರೆ: ಬೆಸ್ಕಾಂ ಸಿಬ್ಬಂದಿ ಯಡವಟ್ಟಿಗೆ ಸಮೀಕ್ಷೆದಾರರು ಕಂಗಾಲು

    October 5, 2025

    ಕುಣಿಗಲ್ | ಮುಚ್ಚಿದ ತೂಬು ತೆರವಿಗೆ ಹೇಮಾವತಿ ನಾಲಾ ವಲಯ ಅಧಿಕಾರಿಗಳಿಂದ ಪರಿಶೀಲನೆ

    September 26, 2025

    ಕುಣಿಗಲ್: ಪೌರಕಾರ್ಮಿಕರಿಗೆ ನಿವೇಶನ ನೀಡಲು ಮೂರು ಎಕರೆ ಜಮೀನು ಗುರುತು: ಶಾಸಕ ರಂಗನಾಥ್

    September 24, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!

    October 5, 2025

    ಬೆಂಗಳೂರು: ಖ್ಯಾತ ಸಾಹಿತಿ, ಹಿರಿಯ ಕತೆಗಾರ ಪ್ರೊ.ಮೊಗಳ್ಳಿ ಗಣೇಶ್ (64) ಭಾನುವಾರ ಅನಾರೋಗ್ಯದಿಂದ ಮನೆಯಲ್ಲಿ ನಿಧನರಾದರು. ಇವರು ಪತ್ನಿ, ಮೂವರು…

    ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಅಂತ ಕೇಳ್ಬೇಡಿ: ಸರ್ವೇದಾರರಿಗೆ ಡಿ.ಕೆ.ಶಿವಕುಮಾರ್ ಸಲಹೆ

    October 5, 2025

    ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

    October 5, 2025

    ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿಯ ಆಡಳಿತ ಬರಬೇಕು: ಯತ್ನಾಳ್

    October 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.