nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ

    October 7, 2025

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!

    October 7, 2025
    Facebook Twitter Instagram
    ಟ್ರೆಂಡಿಂಗ್
    • ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ
    • ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ
    • ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!
    • ಪಾವಗಡ | ಶಿಷ್ಯ ವೇತನ, ಮದ್ಯಪಾನ ಮುಕ್ತರಿಗೆ ಅಭಿನಂದನೆ ಕಾರ್ಯಕ್ರಮ
    • ಮೇಕೆಗಳ ಹಿಂಡಿನ ಮೇಲೆ ಹುಲಿ ದಾಳಿ: ಮೂರು ಮೇಕೆಗಳು ಸಾವು, ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಆಕ್ರೋಶ
    • ಮಧುಗಿರಿ | ಮೂಲಸೌಕರ್ಯ, ನಿರ್ವಹಣೆ ಸಮಸ್ಯೆಯಿಂದ ಬಳಲುತ್ತಿರುವ ಸರ್ಕಾರಿ ಕಾಲೇಜು
    • ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ
    • ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ
    ಜಿಲ್ಲಾ ಸುದ್ದಿ October 7, 2025

    ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ

    By adminOctober 7, 2025No Comments2 Mins Read
    sargur

    ಸರಗೂರು‌: ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಈ ದಿನ ಜನಿಸಿದರು ಎಂಬುದಕ್ಕಾಗಿ ಈ ದಿನಕ್ಕೆ ವಾಲ್ಮೀಕಿ ಜಯಂತಿ ಎನ್ನುವ ಹೆಸರು ಬಂದಿದೆ ಎಂದು ಪಪಂ ಸದಸ್ಯ ಶ್ರೀನಿವಾಸ ತಿಳಿಸಿದರು.

    ಪಟ್ಟಣದ 9 ನೇ ವಾರ್ಡಿನ ಚಿಕ್ಕ ದೇವಮ್ಮ ಸರ್ಕಲ್ ಬಳಿ ನಾಯಕ ಸಮಾಜದ ಹಾಗೂ ಯುವಕರು ವತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ವಾಲ್ಮೀಕಿ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು.


    Provided by
    Provided by
    Provided by

    ಮಹರ್ಷಿ ವಾಲ್ಮೀಕಿಯವರ ಜನ್ಮದಿನವನ್ನು ಶರದ್ ಪೂರ್ಣಿಮೆಯ ದಿನದಂದು ಆಚರಿಸಲಾಗುತ್ತದೆ. ಆದಾಗ್ಯೂ, ಶರದ್ ಪೂರ್ಣಿಮೆಯ ದಿನದಂದು ಲಕ್ಷ್ಮಿ ಮತ್ತು ಚಂದ್ರನನ್ನು ಪೂಜಿಸಲಾಗುತ್ತದೆ.

    ವಾಲ್ಮೀಕಿ ಜಯಂತಿ ಪ್ರಖ್ಯಾತ ಋಷಿ ಮತ್ತು ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಅವರ ಜನ್ಮದಿನಕ್ಕೆ ಮೀಸಲಾದ ದಿನವಾಗಿದೆ. ಅವರು ಭಗವಾನ್ ಶ್ರೀರಾಮನ ಪರಮ ಭಕ್ತರಾಗಿದ್ದರು ಎನ್ನುವ ನಂಬಿಕೆಯಿದೆ ಎಂದರು.

    ಈ ದಿನದ ಮೂಲಕ, ಜನರು ಅವರನ್ನು ನೆನಪಿಸಿಕೊಳ್ಳುತ್ತಾರೆ ಮತ್ತು ಅವರು ನೀಡಿದ ಜ್ಞಾನ ಮತ್ತು ಶಿಕ್ಷಣಕ್ಕಾಗಿ ಕೃತಜ್ಞತೆಯನ್ನು ಸಲ್ಲಿಸುತ್ತಾರೆ. ರಾಮಾಯಣದ ಮೂಲಕ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಬಗ್ಗೆ ತಿಳಿಸಿದ ಮಹಾನ್ ಸಂತರೇ ವಾಲ್ಮೀಕಿ ಮಹರ್ಷಿಗಳು.

    ಈ ಸಂದರ್ಭದಲ್ಲಿ ಶ್ರೀನಿವಾಸ್, ನವೀನ್ ಕುಮಾರ್, ವೆಂಕಟೇಶ್, ಬೆಟ್ಟನಾಯಕ, ಚನ್ನಪ್ಪನಾಯಕ, ಶಿವಣ್ಣ, ಏಕದಂತ ಗ್ರೂಪ್ಸ್ ಹಾಗೂ ವಿನಾಯಕ ಗ್ರೂಪ್ಸ್ ನ ಸದಸ್ಯರು ಹಾಗೂ ನಾಯಕ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ವಾಲ್ಮೀಕಿ ಜಯಂತಿ

    ಸರಗೂರು:  ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರದಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಹಮ್ಮಿಕೊಂಡಿದ್ದು ವಾಲ್ಮೀಕಿ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಸರಳವಾಗಿ ಆಚರಣೆ ಮಾಡಲಾಯಿತು.

    ಪಪಂ ಉಪಾಧ್ಯಕ್ಷ ಶಿವಕುಮಾರ್, ಸದಸ್ಯರು ಶ್ರೀನಿವಾಸ, ಚೆಲುವ ಕೃಷ್ಣ, ನೂರಳಾಸ್ವಾಮಿ, ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಮುಖಂಡರು ನವೀನ್, ಶ್ರೀನಾಥ್, ಸ್ವಾಮಿ, ಸಿಬ್ಬಂದಿ ವರ್ಗದವರು ಪಳಿನಿಸ್ವಾಮಿ, ರಾಮು, ಶಿವಪ್ರಸಾದ್, ಅರುಣ್ ಆರಾಧ್ಯ, ಅರ್ಜುನ್, ನಾಗೇಶ್, ಶಶಿ, ಹಾಗೂ ಪೌರಕಾರ್ಮಿಕರು ಇನ್ನೂ ಇತರರು ಇದ್ದರು.

    ಜೆಎಸ್ ಎಸ್ ಶಿಕ್ಷಣ ಸಂಸ್ಥೆ ವತಿಯಿಂದ ವಾಲ್ಮೀಕಿ ಜಯಂತಿ:

    ಸರಗೂರು:  ಪಟ್ಟಣದ ಜೆಎಸ್ ಎಸ್ ಶಿಕ್ಷಣ ಸಂಸ್ಥೆಗಳು ಸರಗೂರು ವತಿಯಿಂದ ಮಂಗಳವಾರ ದಂದು ಆದಿಕವಿ ಮಹರ್ಷಿ ವಾಲ್ಮೀಕಿ ರವರ ಜಯಂತಿ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.

    ನಂತರ ಮಾತನಾಡಿದ ಜೆಎಸ್ಎಸ್ ಕಾಲೇಜಿನ ಪ್ರಾಂಶುಪಾಲ ಮಹದೇವಸ್ವಾಮಿ ಕೆ .ಎಸ್., ರಾಮಾಯಣವನ್ನು ರಚಿಸಿದ ಕಾರಣ ವಾಲ್ಮೀಕಿಯನ್ನು “ಆದಿ ಕವಿ” (ಮೊದಲ ಕವಿ) ಎಂದು ಗೌರವಿಸಲಾಗುತ್ತದೆ. ಅವರು ಸಂಸ್ಕೃತದ ಒಬ್ಬ ಋಷಿಯಾಗಿಯೂ ಗುರುತಿಸಲ್ಪಟ್ಟಿದ್ದಾರೆ ಎಂದರು.

    ವಾಲ್ಮೀಕಿ ಮುನಿಯು ತಮಸಾ ನದಿಯ ದಡದಲ್ಲಿದ್ದಾಗ ಅಲ್ಲಿಗೆ ನಾರದರು ಬರುತ್ತಾರೆ. ಆಗ ಅವರು ರಾಮನ ಕಥೆಯನ್ನು ವಾಲ್ಮೀಕಿ ಮಹರ್ಷಿಗಳಿಗೆ ವಿವರಿಸುತ್ತಾರೆ. ಅದನ್ನು ವಾಲ್ಮೀಕಿ ಶ್ಲೋಕರೂಪದಲ್ಲಿ ಪ್ರಸ್ತುತ ಪಡಿಸುತ್ತಾರೆ ಎಂಬ ಮಾತು ಇದೆ. ಇದರೊಂದಿಗೆ ತಮಸಾ ನದಿಯ ದಡದಲ್ಲಿ ಸಂತೋಷದಿಂದ ಹಾರಾಡುತ್ತಿದ್ದ ಜೋಡಿ ಕ್ರೌಂಚ ಪಕ್ಷಿಗಳಿಗೆ ಬೇಡನೊಬ್ಬ ಬಾಣ ಹೂಡುತ್ತಾನೆ. ಆಗ ಗಂಡು ಪಕ್ಷಿ ಪ್ರಾಣ ಕಳೆದುಕೊಳ್ಳುತ್ತದೆ. ಹೆಣ್ಣು ಕ್ರೌಂಚ ಪಕ್ಷಿಯ ನೋವು ಕಂಡ ವಾಲ್ಮೀಕಿ ಮಹರ್ಷಿ ಬೇಡನಿಗೆ ಶೋಕದಿಂದ ಶಾಪ ಕೊಡಲು ಮುಂದಾಗುತ್ತಾರೆ, ಶಾಪವನ್ನು ಶ್ಲೋಕ ರೂಪದಲ್ಲಿ ಉದ್ಗರಿಸುತ್ತಾರೆ. ಇದು ರಾಮಾಯಣ ರಚಿಸಲು ಮೂಲವಾಯಿತು ಎಂಬ ಮಾತು ಇದೆ ಎಂದರು.

    ಈ ಸಂದರ್ಭದಲ್ಲಿ  ಪ್ರೌಢಶಾಲಾ ಮುಖ್ಯ ಶಿಕ್ಷಕ ನಾಗರತ್ನ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಜಯಣ್ಣ, ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮೇಕೆಗಳ ಹಿಂಡಿನ ಮೇಲೆ ಹುಲಿ ದಾಳಿ: ಮೂರು ಮೇಕೆಗಳು ಸಾವು, ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಆಕ್ರೋಶ

    October 7, 2025

    ಮುಖ್ಯ ನ್ಯಾಯಮೂರ್ತಿಯತ್ತ ಶೂ ಎಸೆತ: ಜಾನ್ಸನ್ ಘೋಡೆ ತೀವ್ರ ಖಂಡನೆ

    October 7, 2025

    ಖಾಸಗಿ ಕಂಪನಿ ಉದ್ಯೋಗ ತೊರೆದು ಏಲಕ್ಕಿ ಬಾಳೆ ಬೆಳೆದು ಲಾಭ ಗಳಿಸಿದ ರೈತ

    October 6, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ

    October 7, 2025

    ಕುಣಿಗಲ್: ಬೈಕ್ ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ವೃದ್ಧೆಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ…

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!

    October 7, 2025

    ಪಾವಗಡ | ಶಿಷ್ಯ ವೇತನ, ಮದ್ಯಪಾನ ಮುಕ್ತರಿಗೆ ಅಭಿನಂದನೆ ಕಾರ್ಯಕ್ರಮ

    October 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.