ಸರಗೂರು: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಅರಣ್ಯ ವಲಯ ವ್ಯಾಪ್ತಿಯ ಜಯಲಕ್ಷೀಪುರ ಗ್ರಾಮದ ಕೃಷ್ಣಬೋವಿ ರವರ ಜಮೀನಲ್ಲಿ ಸೋಮವಾರ ಹುಲಿ ದಾಳಿಗೆ ಮೇಕೆ ಬಲಿಯಾಗಿದೆ.
ಜಯಲಕ್ಷೀಪುರ ಗ್ರಾಮದಲ್ಲಿ ಕೃಷ್ಣಬೋವಿ ಎಂಬುವರಿಗೆ ಸೇರಿದ ಮೇಕೆಗ ಬಲಿಯಾಗಿವೆ. ಮೇಕೆಗಳನ್ನು ಮೇಯಿಸಲು ಹೋದಾಗ ಜಮೀನಲ್ಲಿ ಅವಿತು ಕುಳಿತಿದ್ದ ಹುಲಿ ಮೇಕೆ ಹಿಂಡಿನ ಮೇಲೆ ದಾಳಿ ನಡೆಸಿದೆ. ಒಟ್ಟು ಮೂರು ಮೇಕೆಗಳನ್ನು ಕೊಂದು ಅದರಲ್ಲಿ ಒಂದು ಮೇಕೆಯನ್ನು ಹುಲಿ ಹೊತ್ತೊಯ್ದಿದೆ. ಮೇಕೆ ಸಾಕಾಣಿಕೆಯನ್ನೇ ನಂಬಿ ಜೀವನ ನಡೆಸುತ್ತಿರುವ ಕೃಷ್ಣಬೋವಿ ಅವರಿಗೆ ಆರ್ಥಿಕ ನಷ್ಟ ಆಗಿದೆ.
ಘಟನೆ ಸಂಬಂಧ ಮಾತನಾಡಿದ ಗ್ರಾಮದ ಮುಖಂಡ ವೆಂಕಟರಾಮು, ಘಟನೆ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿದರೆ ಸ್ಪಂದಿಸುತ್ತಿಲ್ಲ ಎಂದು ದೂರಿದ್ದು, ಘಟನೆ ನಡೆದು ಸುಮಾರು ಹೊತ್ತಾದರೂ ಸ್ಥಳಕ್ಕೆ ಆಗಮಿಸದೆ ನಿರ್ಲಕ್ಷ್ಯ ಧೋರಣೆ ಮಾಡುತ್ತಿದ್ದಾರೆ ಎಂದರು.
ಕಳೆದ ತಿಂಗಳು ಜಾನುವಾರುಗಳು ಹಾಗೂ ಜನರ ಮೇಲೆ ಹುಲಿ ದಾಳಿ ಮಾಡಿದೆ. ಇದರ ಬಗ್ಗೆ ತಲೆ ಕೆಡಿಸಿಕೊಳ್ಳದೆ ಸುಮ್ಮನೆ ಇದ್ದಾರೆ. ಇದರ ಬಗ್ಗೆ ಇವರ ಮೇಲ್ಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಬೋನು ಇಡದೆ ಜನರ ಜೊತೆ ಆಟವಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾನುವಾರು ಹಾಗೂ ಮೇಕೆ ಹುಲಿ ದಾಳಿಗೆ ಬಲಿಯಾಗಿರುವವರು ಅರ್ಜಿ ನೀಡಿದರೂ ಯಾವುದೇ ಪರಿಹಾರ ಸಿಗುತ್ತಿಲ್ಲ . ಕಾಡಾನೆಗಳು ಜಮೀನಲ್ಲಿ ಬೆಳೆದ ಬೆಳೆಗಳನ್ನು ನಾಶ ಮಾಡಿ ಹೋಗುತ್ತಿದ್ದರೂ ರೈಲು ಕಂಬಿಗಳು ಅಳವಡಿಸಲು ಹಿಂದೇಟು ಹಾಕುತ್ತಿದ್ದಾರೆ ದೂರಿದರು. ಮೇಕೆಗಳನ್ನು ಕಳೆದುಕೊಂಡಿರುವ ಕೃಷ್ಢಬೋವಿ ಅವರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಅರಣ್ಯ ಇಲಾಖೆಗೆ ಒತ್ತಾಯಿಸಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC