nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಗ್ ಬಾಸ್ ಕನ್ನಡ: ಡಿ.ಕೆ.ಶಿವಕುಮಾರ್ ಅವರಿಗೆ ಕೃತಜ್ಞತೆ ತಿಳಿಸಿದ ಕಿಚ್ಚ ಸುದೀಪ್

    October 9, 2025

    5 ಕೆ.ಜಿ. ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆ: ಸಂಪುಟ ಸಭೆ ತೀರ್ಮಾನ

    October 9, 2025

    ಮಹಿಳೆಯರಿಗೆ ವೇತನ ಸಹಿತ ‘ಋತುಚಕ್ರ ರಜೆ: ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ

    October 9, 2025
    Facebook Twitter Instagram
    ಟ್ರೆಂಡಿಂಗ್
    • ಬಿಗ್ ಬಾಸ್ ಕನ್ನಡ: ಡಿ.ಕೆ.ಶಿವಕುಮಾರ್ ಅವರಿಗೆ ಕೃತಜ್ಞತೆ ತಿಳಿಸಿದ ಕಿಚ್ಚ ಸುದೀಪ್
    • 5 ಕೆ.ಜಿ. ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆ: ಸಂಪುಟ ಸಭೆ ತೀರ್ಮಾನ
    • ಮಹಿಳೆಯರಿಗೆ ವೇತನ ಸಹಿತ ‘ಋತುಚಕ್ರ ರಜೆ: ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ
    • ರಾತ್ರೋ ರಾತ್ರಿ ಮತ್ತೆ ತೆರೆದ ಬಿಗ್ ಬಾಸ್ ಮನೆ: ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ವಾಪಸ್
    • 15 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಕಾರ್ಡ್‌ ವಿತರಿಸುವ ಗುರಿ: ಸಚಿವ ಸಂತೋಷ್ ಲಾಡ್
    • ಬೀದರ್ | ಮದಕಟ್ಟಿ ಗ್ರಾಮದಲ್ಲಿ ಹದಗೆಟ್ಟ ರಸ್ತೆ: ದುರಸ್ತಿಗೆ ಗ್ರಾಮಸ್ಥರ ಆಗ್ರಹ
    • ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಒಂದು ರೂಪಾಯಿ ಅನುದಾನ ನೀಡಿಲ್ಲ: ಪ್ರಣವಾನಂದ ಸ್ವಾಮೀಜಿ ಕಿಡಿ
    • ತಿಪಟೂರು: 108 ಆಂಬುಲೆನ್ಸ್ ಸೇವೆ ಸ್ಥಗಿತ: ಸಾರ್ವಜನಿಕರಿಂದ ಪರದಾಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಒಂದು ರೂಪಾಯಿ ಅನುದಾನ ನೀಡಿಲ್ಲ: ಪ್ರಣವಾನಂದ ಸ್ವಾಮೀಜಿ ಕಿಡಿ
    ತುಮಕೂರು October 9, 2025

    ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಒಂದು ರೂಪಾಯಿ ಅನುದಾನ ನೀಡಿಲ್ಲ: ಪ್ರಣವಾನಂದ ಸ್ವಾಮೀಜಿ ಕಿಡಿ

    By adminOctober 9, 2025No Comments2 Mins Read
    pranavananda

    ತುಮಕೂರು: ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಈವರೆಗೂ ಒಂದು ರೂಪಾಯಿ ಅನುದಾನ ನೀಡಿಲ್ಲ. ಸರ್ಕಾರ ಈಡಿಗ ಸಮುದಾಯವನ್ನು ಮೂಲೆ ಗುಂಪು ಮಾಡಿದೆ ಎಂದು ಕರದಾಳ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಇಲ್ಲಿ ಬುಧವಾರ ಅಸಮಾಧಾನ ವ್ಯಕ್ತಪಡಿಸಿದರು.

    ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಈಡಿಗ, ಬಿಲ್ಲವ, ನಾಮದಾರಿ ಸಮುದಾಯಕ್ಕೆ ಎರಡು ಮಂತ್ರಿ ಸ್ಥಾನ, ಮೂರು ನಿಗಮಗಳ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಈಗಿನ ಸರ್ಕಾರ ಕೇವಲ ಒಂದೇ ಮಂತ್ರಿ ಸ್ಥಾನ ಕೊಟ್ಟಿದೆ. ಇದುವರೆಗೆ ಬೆಂಗಳೂರಿನಲ್ಲಿ ನಾರಾಯಣ ಗುರು ಪುತ್ಥಳಿ ಅನಾವರಣ ಮಾಡಲಿಲ್ಲ. ಈಡಿಗರು ರಾಜಕೀಯಕ್ಕೆ ಬರಬಾರದು ಎಂಬ ಉದ್ದೇಶದಿಂದ ಸೇಂದಿ ಮಾರಾಟ ಬಂದ್‌ ಮಾಡಿಸಿದರು. ಕುಲ ಕಸುಬು ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.


    Provided by
    Provided by
    Provided by

    ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ. 6ರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದಿಂದ ಬೆಂಗಳೂರು ವರೆಗೆ ಪಾದಯಾತ್ರೆ ನಡೆಸಲಾಗುವುದು. ಪ್ರತಿ ದಿನ 20 ಕಿಲೊ ಮೀಟರ್‌ನಂತೆ 700 ಕಿ.ಮೀ ಪಾದಯಾತ್ರೆ ನಡೆಯಲಿದೆ. ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಮರಣಾಂತ ಉಪವಾಸ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

    ರಾಜ್ಯದಲ್ಲಿ ನಾರಾಯಣ ಗುರು ಹೆಸರಿನಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಬೇಕು. ಎಲ್ಲ ವಿ.ವಿಗಳಲ್ಲಿ ನಾರಾಯಣ ಗುರು ಅಧ್ಯಯನ ಪೀಠ ಆರಂಭಿಸಬೇಕು. ಇಂದಿಗೂ ಶೇ.90ರಷ್ಟು ಜನ ಕಡು ಬಡವರಿದ್ದಾರೆ. ಅವರ ಭವಿಷ್ಯಕ್ಕಾಗಿ, ಸಾಮಾಜಿಕ ನ್ಯಾಯ ಕಲ್ಪಿಸಲು ಹೋರಾಟ ನಡೆಸಲಾಗುವುದು. ನಿಗಮಕ್ಕೆ 7500 ಕೋಟಿ ಅನುದಾನ ನೀಡುವುದು, ಮದ್ಯ ಮಾರಾಟದಲ್ಲಿ ಶೇ.50ರಷ್ಟು ರಿಯಾಯಿತಿ ಸೇರಿ ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

    ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಕೆಳಗೆ ಇಳಿಸಿರುವುದು ಖಂಡನೀಯ. ಪೀಠದಲ್ಲಿ ಧರ್ಮ ವಿರೋಧಿ ಕೆಲಸ ಆಗಿದೆ. ಇದರಲ್ಲಿ ರಾಜಕೀಯ ಉದ್ದೇಶ ಅಡಗಿದೆ. ಅವರನ್ನು ಮತ್ತೆ ಪೀಠಕ್ಕೆ ನೇಮಿಸಬೇಕು ಎಂದು ಒತ್ತಾಯಿಸಿದರು.

    ರಾಷ್ಟ್ರೀಯ ಈಡಿಗ ಮಹಾಮಂಡಳಿ ರಾಜ್ಯ ಘಟಕದ ಅಧ್ಯಕ್ಷ ತಿಪ್ಪೇಶ್‌, ಮುಖಂಡ ಲಕ್ಷ್ಮಿನರಸಿಂಹಯ್ಯ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    15 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಕಾರ್ಡ್‌ ವಿತರಿಸುವ ಗುರಿ: ಸಚಿವ ಸಂತೋಷ್ ಲಾಡ್

    October 9, 2025

    ಹೋರಾಟ ನಮ್ಮದು, ಹಕ್ಕು ಇನ್ನೊಬ್ಬರದ್ದಾ?: ಕುರುಬರನ್ನು ಎಸ್ ಟಿ ಪಟ್ಟಿಗೆ ಸೇರಿಸುವುದಕ್ಕೆ ವಿರೋಧ

    October 9, 2025

    ಪತ್ನಿ, ಅತ್ತೆಯಿಂದ ಕಿರುಕುಳ: ಗಂಡ ಆತ್ಮಹತ್ಯೆಗೆ ಯತ್ನ!

    October 8, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಗ್ ಬಾಸ್ ಕನ್ನಡ: ಡಿ.ಕೆ.ಶಿವಕುಮಾರ್ ಅವರಿಗೆ ಕೃತಜ್ಞತೆ ತಿಳಿಸಿದ ಕಿಚ್ಚ ಸುದೀಪ್

    October 9, 2025

    ಬೆಂಗಳೂರು: ‘ಬಿಗ್ ಬಾಸ್ ಕನ್ನಡ’ ಚಿತ್ರೀಕರಣ ನಡೆಯುತ್ತಿರುವ “ಜಾಲಿವುಡ್ ಆವರಣದ ಮೇಲಿನ ಬೀಗ ಮುದ್ರೆಯನ್ನು ತೆರವುಗೊಳಿಸಲು ನೆರವಾದ ಡಿಸಿಎಂ ಡಿ.ಕೆ.ಶಿವಕುಮಾರ್…

    5 ಕೆ.ಜಿ. ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆ: ಸಂಪುಟ ಸಭೆ ತೀರ್ಮಾನ

    October 9, 2025

    ಮಹಿಳೆಯರಿಗೆ ವೇತನ ಸಹಿತ ‘ಋತುಚಕ್ರ ರಜೆ: ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ

    October 9, 2025

    ರಾತ್ರೋ ರಾತ್ರಿ ಮತ್ತೆ ತೆರೆದ ಬಿಗ್ ಬಾಸ್ ಮನೆ: ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ವಾಪಸ್

    October 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.