ಪಾವಗಡ: ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ನೆಲೆಸಿರುವಂತಹ ಕರ್ನಾಟಕ ರಾಜ್ಯದ ಸುಪ್ರಸಿದ್ಧ ಶ್ರೀ ಶನಿಮಹಾತ್ಮ ಸ್ವಾಮಿ ಮತ್ತು ಜೇಷ್ಠಾ ದೇವಿಯ ಬ್ರಹ್ಮರಥೋತ್ಸವ ನಡೆಯಿತು.
ಕಳೆದ 3 ದಿನಗಳಿಂದ ದೇವಸ್ಥಾನದಲ್ಲಿ ವಿವಿಧ ಹೋಮ ಪೂಜೆಗಳನ್ನು ಆಚರಿಸಲಾಗುತ್ತಿತ್ತು. ಹುಣ್ಣಿಮೆಯ ಪ್ರಯುಕ್ತ ಇಂದು ಸ್ವಾಮಿಯ ರಥೋತ್ಸವವನ್ನು ಪಾವಗಡ ಪಟ್ಟಣದ ಸರ್ಕಲ್ ನಲ್ಲಿ ನೆರವೇರಿಸಲಾಯಿತು.
ಎಸ್ ಎಸ್ ಕೆ ಕಾರ್ಯ ನಿರ್ವಾಹಕ ಸಂಘದ ವತಿಯಿಂದ ದೇವಸ್ಥಾನದಲ್ಲಿ ಅತ್ಯಂತ ವೈಭವವಾಗಿ ಹೂವಿನ ಅಲಂಕಾರವನ್ನು ಮಾಡಲಾಗಿತ್ತು. ರಥೋತ್ಸವ ವೀಕ್ಷಿಸಲು ತಾಲ್ಲೂಕಿನಾದ್ಯಂತ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy