nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಿಎಂ ಧನ ಧಾನ್ಯ ಕೃಷಿ ಯೋಜನೆ, ದ್ವಿದಳ ಧಾನ್ಯಗಳ ಯೋಜನೆಗೆ ಚಾಲನೆ
    ತಿಪಟೂರು October 12, 2025

    ಪಿಎಂ ಧನ ಧಾನ್ಯ ಕೃಷಿ ಯೋಜನೆ, ದ್ವಿದಳ ಧಾನ್ಯಗಳ ಯೋಜನೆಗೆ ಚಾಲನೆ

    By adminOctober 12, 2025No Comments2 Mins Read
    pm dhana yojana

    ತಿಪಟೂರು: ನಗರದ ಗುರುಕುಲಾನಂದಶ್ರಮದಲ್ಲಿ ಕೋನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಇಲಾಖೆಯಿಂದ ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆ ಹಾಗೂ ದ್ವಿದಳ ಧಾನ್ಯಗಳ ಯೋಜನೆಗೆ ಶನಿವಾರ ಚಾಲನೆ ನೀಡಲಾಯಿತು.

    ಕೇಂದ್ರ ರೈಲ್ವೆ ಮತ್ತು ಜಲಶಕ್ತಿರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಮಾತನಾಡಿ, ದೇಶದಲ್ಲಿ ಧಾನ್ಯ ಹಾಗೂ ಬೇಳೆಕಾಳು ಉತ್ಪಾದನೆ ಇನ್ನೂ ಬೇಡಿಕೆಗೆ ತಕ್ಕಷ್ಟು ಇಲ್ಲ. 1960ರ ದಶಕದಿಂದಲೇ ಆಹಾರ ಕೊರತೆ ನಿವಾರಣೆಗೆ ಹಸಿರು ಕ್ರಾಂತಿ ನಡೆದಿದೆ. ಆದರೆ ಇಂದಿನ ಸ್ಥಿತಿಯಲ್ಲಿ ದ್ವಿದಳ ಧಾನ್ಯ ಬೆಳೆಗಳ ಸ್ವಾವಲಂಬನೆಗೆ ಹೊಸ ಕ್ರಾಂತಿಯ ಅವಶ್ಯಕತೆ ಎದುರಾಗಿದೆ ಎಂದರು.


    Provided by
    Provided by

    ಈ ಯೋಜನೆಯಿಂದ ರೈತರ ಕೈಗೆ ತಂತ್ರಜ್ಞಾನ, ತರಬೇತಿ ಮತ್ತು ಮಾರುಕಟ್ಟೆ ಸಂಪರ್ಕ ಒದಗಿಸುತ್ತದೆ. ವಿಜ್ಞಾನಾಧಾರಿತ ಕೃಷಿ ಮತ್ತು ಸಂಗ್ರಹಣೆ ವ್ಯವಸ್ಥೆ ಮೂಲಕ ರೈತನ ಆದಾಯವನ್ನು ದ್ವಿಗುಣಗೊಳಿಸುತ್ತದೆ ಎಂದರು.

    ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿ, ರೈತ ಬೆಳೆದ ಬೆಳೆಗಳಿಗೆ ಸರ್ಕಾರವು ಸಹಾಯಕವಾಗಬೇಕು. ಕೃಷಿಯನ್ನು ಲಾಭದಾಯಕ ಉದ್ಯಮವಾಗಿ ಮಾಡಬೇಕಿದೆ. ಭಾರತ ಸರ್ಕಾರವು ಸಿರಿಧಾನ್ಯಗಳ ವರ್ಷವೆಂದು ಘೋಷಣೆ ಮಾಡಿದ್ದು, ಕೃಷಿವಲಯ ಅಭಿವೃದ್ಧಿಯಾಗಬೇಕಾದರೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕು ಎಂದರು.

    ಶಾಸಕ ಕೆ.ಷಡಕ್ಷರಿ ಮಾತನಾಡಿ, ‘ರಾಜ್ಯ ಸರ್ಕಾರವು ರೈತರನ್ನು ಸೋಮಾರಿ ಮಾಡಿದೆ ಎಂದು ಹೇಳಿರುವ ಸಚಿವ ಸೋಮಣ್ಣ ತಮ್ಮ ಮಾತನ್ನು ವಾಪಸ್ ಪಡೆಯಬೇಕು. ನಮ್ಮ ಸರ್ಕಾರ ಆರ್ಥಿಕವಾಗಿ ಹಿಂದುಳಿದವರನ್ನು ಮೇಲೆತ್ತಲು ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಅದರಂತೆ ವಿವಿಧ ರಾಜ್ಯಗಳಲ್ಲಿ ಇದನ್ನು ಜಾರಿಗೊಳಿಸಲಾಗಿದೆ ಎಂದರು.

    ವಿವಿಧ ಇಲಾಖೆಗಳ ಸಹಯೋಗದಲ್ಲಿ ಕರಕುಶಲ ಹಾಗೂ ಯಂತ್ರೋಪಕರಣ, ಆಹಾರ ಉತ್ಪಾದನೆ ವಸ್ತು ಪ್ರದರ್ಶನ ನಡೆಯಿತು.

    ಗುರುಕುಲಾನಂದಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ ಮಾತನಾಡಿದರು. ಶಾಸಕ ಜ್ಯೋತಿಗಣೇಶ್‌, ನಗರಸಭೆ ಅಧ್ಯಕ್ಷೆ ಮೇಘಶ್ರೀಭೂಷಣ್‌, ಕೃಷಿಕ ಸಮಾಜದ ಅಧ್ಯಕ್ಷ ಎಮ್.ಎಸ್.ಯೋಗೀಶ್, ಉಪವಿಭಾಗಧಿಕಾರಿ ಸಪ್ತಶ್ರೀ, ತಹಶೀಲ್ದಾರ್ ಮೋಹನ್‌ಕುಮಾರ್, ಕಾರ್ಯನಿರ್ವಾಹಕ ಅಧಿಕಾರಿ ಎಚ್‌.ಎಂ.ಸುದರ್ಶನ್, ಕೆವಿಕೆ ಮುಖ್ಯಸ್ಥ ಶಂಕರ್, ಪೌರಯುಕ್ತ ವಿಶ್ವೇಶ್ವರ ಬದರಗಡೆ, ಸಹಾಯಕ ಕೃಷಿ ನಿರ್ದೇಶಕ ಪವನ್‌ಕುಮಾರ್‌, ಜೆಡಿಎಸ್‌ ಮುಖಂಡ ಕೆ.ಟಿ.ಶಾಂತಕುಮಾರ್, ಬಿಜೆಪಿ ಮುಖಂಡ ರವಿಹೆಬ್ಬಾಕ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ವಿಚಾರವಾಗಿ ಗೃಹ ಸಚಿವ ಡಾ. ಜಿ.…

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.