ತುರುವೇಕೆರೆ: ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರ ಮತ್ತು ಗ್ಲೋಬಲ್ ಇನ್ಸ್ಟಿಟ್ಯೂಟ್ ಫಾರ್ , ಎಜುಕೇಶನ್, ಅಂಡ್ ರಿಸರ್ಚ್ ಫೌಂಡೇಸ್ಷನ್ ಸಹಹೋಗದೊಂದಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ತರಬೇತಿ ಹಾಗೂ ಪರವಾನಗಿ ಆಂದೋಲನ, ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಅಂಕಿತ ಅಧಿಕಾರಿಗಳಾದ ಡಾ.ಪ್ರಭಾವತಿ, ಬದಲಾಗುತ್ತಿರುವ ಆಧುನಿಕ ಜಗತ್ತಿನಲ್ಲಿ, ಅಸುರಕ್ಷಿತ ಆಹಾರ ಪದ್ಧತಿ, ಸ್ವಚ್ಚತೆ ಇಲ್ಲದೆ ಇರುವ ಪರಿಸರದಲ್ಲಿ ಆಹಾರ ಉತ್ಪಾದನೆ, ಕಲಬೆರಕೆ, ಅಸುರಕ್ಷಿತ ಪ್ಯಾಕಿಂಗ್ ಮತ್ತು ಸಾಗಾಣಿಕೆ , ಆತಾಂತ್ರಿತವಾಗಿ ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಉತ್ಪಾದನೆ ಇತ್ಯಾದಿ ಕಾರಣಗಳಿಂದ ನಾವು ತೆಗೆದುಕೊಳ್ಳುವ ಆಹಾರ ಗುಣಮಟ್ಟವಿಲ್ಲದೇ ಹಲವಾರು ಅನಾರೋಗ್ಯಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಎಲ್ಲ ವಿಧದ ವ್ಯಾಪಾರಿಗಳು ಖಡ್ಡಾಯವಾಗಿ ನೋಂದಣಿ ಹಾಗೂ ಪರವಾನಗಿ ಮಾಡಿಸಲೇ ಬೇಕು ಎಂದರು.
ಈ ಸಂದರ್ಭದಲ್ಲಿ, ಸೀನಿಯರ್ ಫುಡ್ ಸೆಫ್ಟಿ ಆಫಿಸರ್ , ನಾರಾಯಣಪ್ಪ, ತುರುವೇಕೆರೆ ತಾಲ್ಲೂಕು ವರ್ತಕರ ಸಂಘದ ಮಲ್ಲಿಕಾರ್ಜುನ್ ಹಾಗೂ ಗ್ಲೋಬಲ್ ಇನ್ಸ್ಟಿಟ್ಯೂಟ್ ಫಾರ್ ಎಜುಕೇಶನ್ ರಿಸರ್ಚ್ ಫಾಂಡೇಷನ್ ನ ಜಿಲ್ಲಾ ಸಂಯೋಜಕ ರಂಗನಾಥ್, ಚಂದ್ರು ನವೀನ್, ಹರೀಶ್ ಹಾಜರಿದ್ದರು.
ವರದಿ: ಸುರೇಶ್ ಬಾಬು ಎಂ., ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB