ಪಾವಗಡ: ತಾಲೂಕು ವಾಲ್ಮೀಕಿ ಜಾಗೃತಿ ವೇದಿಕೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ನಿಡಗಲ್ ಸಂಸ್ಥಾನ ವತಿಯಿಂದ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ, ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸಲಾಯಿತು. ಇದೇ ವೇಳೆ ಉಪ ತಹಶೀಲ್ದಾರ್ ಸುಮತಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಪ್ರತಿಭಟನೆಯನ್ನುದ್ದೇಶಿ ಶ್ರೀವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಮಾತನಾಡಿ, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನ ನಂದಾಪುರಿ ಸ್ವಾಮೀಜಿ ರವರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸತತ ಎಂಟು ದಿನಗಳಿಂದ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದು, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಹೋರಾಟ ಮಾಡುತ್ತಿರುವ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ರವರ ಹೋರಾಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿ ಶೀಘ್ರವಾಗಿ ಸರ್ಕಾರ ಪರಿಶಿಷ್ಟ ಪಂಗಡದ ಶೇಕಡ 3ರಿಂದ 7.5 ಪರಿಶಿಷ್ಟ ಜಾತಿಯ ಸಮುದಾಯಗಳಿಗೆ 15ರಿಂದ 18 ಪರ್ಸೆಂಟ್ ಹೆಚ್ಚಿಸುವಂತೆ ರಾಜನಹಳ್ಳಿ ಶ್ರೀಗಳ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಶಿವಮೊಗ್ಗ ಸಿದ್ಧಾರೂಢ ಶ್ರಮದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ , ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸದಿದ್ದರೆ ರಾಜನಹಳ್ಳಿಯ ಶ್ರೀಗಳ ನೇತೃತ್ವದಲ್ಲಿ ಬೃಹತ್ ಹೋರಾಟ ಸರ್ಕಾರ ವಿರುದ್ಧ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು
ಪ್ರತಿಭಟನೆಯಲ್ಲಿ ಪಾವಡ ತಾಲೂಕು ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷರಾದ ಪಾಳೆಗಾರ ಲೋಕೇಶ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ರಾಜ್, ಕಾರ್ಯದರ್ಶಿ ಭಾಸ್ಕರ್ ನಾಯಕ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಲಕ್ಷ್ಮೀನಾರಾಯಣ, ಶ್ರೀರಾಮ ಸೇನೆ ಅಧ್ಯಕ್ಷ ಕವಲಗೇರಿ ರಾಮಾಂಜಿನಪ್ಪ, ಹೋಬಳಿ ಅಧ್ಯಕ್ಷರುಗಳಾದ ಓಂಕಾರ್ ನಾಯಕ, ಕನ್ನಮೇಡಿ ಸುರೇಶ್, ಮಹಿಳಾ ಘಟಕದ ಅಧ್ಯಕ್ಷೆ ಅಂಬಿಕಾ ರಮೇಶ್, ಶ್ರೀ ಶಕ್ತಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಜಯಮ್ಮ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ್ ನಾಯಕ, ಮಂಜುಳಮ್ಮ ಮುಖಂಡರಾದ ನಲಿ ಗಾನ ಹಳ್ಳಿ ಬಿ.ಎಸ್.ಪಿ. ಮಂಜುನಾಥ್, ಬೋರ ನಾಯಕ, ಈರಣ್ಣ, ಹನುಮಂತಿ, ನಾಗರಾಜನಾಯಕ, ಕರಿಯಮ್ಮನ ಪಾಳ್ಯ ಗೋಪಾಲ್ ಭರತ್ ಪಾಳೆಗಾರ, ಅನಂತಯ್ಯ, ವೆಂಕಟೇಶ್, ನಾಗೇಂದ್ರ ಹಾಗೂ ಮಹಿಳಾ ಮುಖಂಡರಾದ ಸರೋಜಮ್ಮ, ಶೋಭಾ, ಉಷಾರಾಣಿ, ಲಕ್ಷ್ಮೀದೇವಮ್ಮ, ಪುಷ್ಪ ಮುಂತಾದವರು ಭಾಗವಹಿಸಿದ್ದರು.
ವರದಿ: ರಾಮಪ್ಪ ಸಿ.ಕೆ.ಪುರ. ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB