nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!

    December 26, 2025

    ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ  ಸಂಕಲ್ಪ ಯಾತ್ರೆ

    December 26, 2025

    ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ

    December 26, 2025
    Facebook Twitter Instagram
    ಟ್ರೆಂಡಿಂಗ್
    • ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!
    • ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ  ಸಂಕಲ್ಪ ಯಾತ್ರೆ
    • ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ
    • ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು
    • ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ
    • ಮಹಾರಾಜವಾಡಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ಜನಸ್ನೇಹಿ ಆಡಳಿತಕ್ಕೆ ಮುನ್ನುಡಿ
    • ಬೀದರ್: ಔರಾದ್ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬದ ಸಡಗರ
    • ತುಮಕೂರಿನಲ್ಲಿ ಡ್ರೀಮ್ ಡೀಲ್ ಲಕ್ಕಿ ಡ್ರಾ: 53 ಜನರಿಗೆ ಭರ್ಜರಿ ಬಹುಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಸಚಿವ ಈಶ್ವರ ಖಂಡ್ರೆ
    ಜಿಲ್ಲಾ ಸುದ್ದಿ October 31, 2025

    ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಸಚಿವ ಈಶ್ವರ ಖಂಡ್ರೆ

    By adminOctober 31, 2025No Comments3 Mins Read
    eshwar khandre

    ಬೀದರ್: ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ನೆರೆ ಹಾವಳಿಯಿಂದಾಗಿ ಬೆಳೆ ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ 15 ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ ಬೆಳೆ ಹಾನಿ ಪರಿಹಾರ ಜಮಾ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

    ಬೀದರ್‌ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ʼ2025–26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತಲೂ ಹೆಚ್ಚುವರಿಯಾಗಿ ಮಳೆಯಾಗಿ ಹಾಗೂ ಮಹಾರಾಷ್ಟ್ರ ರಾಜ್ಯದಿಂದ ಮಾಂಜ್ರಾ ನದಿಗೆ ಧನೆಗಾಂವ ಆಣೆಕಟ್ಟಿನಿಂದ ನೀರು ಹರಿಸಿರುವುದರಿಂದ ಪ್ರವಾಹ ಉಂಟಾಗಿ ಜಿಲ್ಲಾದ್ಯಂತ ಒಟ್ಟು 1,67,202 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆʼ ಎಂದರು.


    Provided by
    Provided by

    ʼಬೆಳೆ ಹಾನಿಯಾದ ಬಗ್ಗೆ ಜಿಲ್ಲಾಡಳಿತ ಅತ್ಯಂತ ಶ್ರಮ ವಹಿಸಿ ಸಮೀಕ್ಷೆ ಕಾರ್ಯಕೈಗೊಂಡಿದ್ದು, ಪರಿಹಾರ ತಂತ್ರಾಂಶದಲ್ಲಿ ನಮೂದಿಸಿರುವ 1.68 ಲಕ್ಷ ಹೆಕ್ಟೇರ್‌ ಬೆಳೆ ಹಾನಿಯ ಎನ್‌ ಡಿಆರ್‌ ಎಫ್‌ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ಅಂದಾಜು ಪರಿಹಾರ ಮೊತ್ತು ಒಟ್ಟು ₹143.34 ಕೋಟಿಯಾಗಿದೆʼ ಎಂದು ವಿವರಿಸಿದರು.

    ʼಅ.30ರೊಳಗಾಗಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ ಜಮೆ ಆಗಲಿದೆ ಎಂದು ಕೆಲ ದಿನಗಳ ಹಿಂದೆ ನಾನು ಮಾತು ಕೊಟ್ಟಿದ್ದೆ, ಕೊಟ್ಟ ಮಾತಿನಂತೆ ಈಗಾಗಲೇ ರೈತರ ಖಾತೆಗೆ ಪರಿಹಾರ ಪಾವತಿಸುವ ಕಾರ್ಯ ಶುರುವಾಗಿದ್ದು, ಮುಂದಿನ ಮೂರು ದಿನಗಳಲ್ಲಿ ಎಲ್ಲರ ರೈತರ ಖಾತೆಗೆ ನೇರವಾಗಿ ಬೆಳೆ ಹಾನಿ ಪರಿಹಾರ ಹಣ ಬರುತ್ತದೆʼ ಎಂದು ಸ್ಪಷ್ಟಪಡಿಸಿದರು

    ಜಿಲ್ಲಾದ್ಯಂತ ಮಳೆ-ನೆರೆಗೆ ಹಾನಿಯಾದ ಬೆಳೆ ಹಾನಿ ವಿವರ :

    ಮೊದಲ ಹಂತದಲ್ಲಿ ಎಸ್‌ ಡಿಆರ್‌ ಎಫ್ ಮಾನದಂಡ ಪ್ರಕಾರ ₹143.34 ಕೋಟಿ ಮಂಜೂರಾತಿಯಾಗಿದೆ, ಈಗಾಗಲೇ ₹17.25 ಕೋಟಿ ಬಿಡುಗಡೆಯಾಗಿದ್ದು, ಇಂದು (ಅ.31) ಸಂಜೆಯವರೆಗೆ ರೈತರ ಖಾತೆಗೆ ಹಣ ಜಮೆಯಾಗುತ್ತದೆʼ ಎಂದು ತಿಳಿಸಿದರು.

    ʼಬೆಳೆ ಹಾನಿಯಾದ ಪ್ರತಿ ಹೆಕ್ಟೇರ್‌ ₹8,500 ಹೆಚ್ಚುವರಿ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿರುವ ಹಣವನ್ನು ಮುಂದಿನ 15 ದಿನಗಳ ಒಳಗಾಗಿ ರೈತರ ಖಾತೆಗೆ ಜಮೆ ಆಗಲಿದೆ. ಇದು ಒಟ್ಟು ₹130 ಕೋಟಿ ಹಣ ಆಗಲಿದೆ. ಎಲ್ಲಾ ಸೇರಿ ಒಟ್ಟು ₹300 ಕೋಟಿ ಹಣ ಜಿಲ್ಲೆಯ ರೈತರ ಖಾತೆಗೆ ಇಂದಿನಿಂದ ಮುಂದಿನ 15 ದಿನಗಳ ಒಳಗಾಗಿ ಸಿಗಲಿದೆʼ ಎಂದರು.

    ʼಜಿಲ್ಲೆಯಲ್ಲಿ ಒಟ್ಟು 4.32 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಮುಂಗಾರು ಬಿತ್ತನೆಯಾಗಿತ್ತು, ಅದರಲ್ಲಿ 1.69 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ. ರೈತರಿಗೆ ಬೆಳೆ ಹಾನಿ ಪರಿಹಾರ ವಿತರಣೆ ಮಾಡುವಲ್ಲಿ ರಾಜ್ಯದಲ್ಲಿಯೇ ಬೀದರ್‌ ಜಿಲ್ಲೆಯಲ್ಲಿ ಪ್ರಥಮವಾಗಿದೆ. ಜಿಲ್ಲೆಯಲ್ಲಿ ಮಳೆ ಮತ್ತು ನೆರೆಯಿಂದ ಒಟ್ಟು ₹672.16 ಕೋಟಿ ಮೌಲ್ಯದ ಆಸ್ತಿ–ಪಾಸ್ತಿ ಹಾನಿಯಾಗಿದೆʼ ಎಂದರು.

    ಬೆಳೆ ವಿಮೆ :ಬೀದರ್ ಜಿಲ್ಲೆಯ ಮುಂಗಾರು ಹಂಗಾಮಿನಲ್ಲಿ ಸುಮಾರು 2,04,019  ಪ್ರಸ್ತಾವನೆಗಳನ್ನು PMFBY ಯೋಜನೆಯಡಿಯಲ್ಲಿ ನೋಂದಾಯಿಸಲಾಗಿದೆ. ಒಟ್ಟು 1,22,061 ಹೆಕ್ಟೇರ್ ಪ್ರದೇಶ ಬೆಳೆಯು ವಿಮೆಯಡಿ ನೋಂದಾವಣಿಯಾಗಿದೆ. ಅದರಲ್ಲಿ ಸೋಯಾಅವರೆ 56,004, ತೊಗರಿ 42,139, ಉದ್ದು 9,135, ಹೆಸರು 13,624 ಹಾಗೂ ಹತ್ತಿ 647 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ವಿಮೆ ಮಾಡಿಸಲಾಗಿದೆ.

    ಸ್ಥಳಿಯ ಪ್ರಕೃತಿ ವಿಕೋಪದಡಿ ಜಿಲ್ಲೆಯಲ್ಲಿ ಒಟ್ಟು 88,836 ವಿಮೆ ನೋಂದಣಿ ಮಾಡಿಸಿದ ರೈತರಿಂದ ಹೆಚ್ಚಿನ ಮಳೆಯಾಗಿದ ಕುರಿತು ಟೋಲ್‌ ಫ್ರೀ ಸಂಖ್ಯೆಯಿಂದ ದೂರುಗಳನ್ನು ದಾಖಲಿಸಲಾಗಿ‌, ಅದರಲ್ಲಿ ಸೋಯಾ ಅವರೆ ಬೆಳೆಗೆ 36,389 ದೂರು ದಾಖಲಾಗಿದ್ದು, ತೊಗರಿ ಬೆಳೆಗೆ 34,564, ಹೆಸರು ಬೆಳೆಗೆ 9,905 ಹಾಗೂ ಉದ್ದು ಬೆಳೆಗೆ 7,264 ದೂರುಗಳು ದಾಖಲಾಗಿದೆ, ಅದರ ಸಮೀಕ್ಷೆಯು ಕೊನೆಯ ಹಂತದಲ್ಲಿದೆʼ ಎಂದು ಮಾಹಿತಿ ನೀಡಿದರು

    ʼಸಂರಕ್ಷಣೆ ತಂತ್ರಾಂಶದಲ್ಲಿ ಬೆಳೆ ನಷ್ಟದ ಅಂದಾಜು ಕುರಿತು ಪರಿಹಾರ ಲೆಕ್ಕಾಚಾರ ಮಾಡಲಾಗಿ ಬೆಳೆ ವಿಮೆಯಡಿ ನೋಂದಾಯಿಸಲಾದ ರೈತರಿಗೆ ಮುಂದಿನ ತಿಂಗಳಿನಲ್ಲಿ ಆಧಾರ ಸಂಖ್ಯೆಯ ಮೂಲಕ ನೇರ ಸಹಾಯ  ಧನವನ್ನು ರೈತರಿಗೆ ವರ್ಗಾಯಿಸಲಾಗುವುದುʼ ಎಂದು ತಿಳಿಸಿದರು

    ʼ42,139  ಹೆಕ್ಟೇರ್ ತೊಗರಿ ಬೆಳೆ ವಿಮೆ ಮಾಡಿದ ಪ್ರದೇಶಕ್ಕೆ 34,564  ರೈತರು ಹೆಚ್ಚಿನ ಮಳೆಯಿಂದಾಗಿ ಬೆಳೆ ನಷ್ಟದ ಕುರಿತು ಆನ್‌ ಲೈನ್‌ ನಲ್ಲಿ ಟೋಲ್ ಫ್ರೀ ಸಂಖ್ಯೆಯಿಂದ ದೂರುಗಳನ್ನು ದಾಖಲಿಸಿದ್ದು, ಈ ನಿಟ್ಟಿನಲ್ಲಿ ತೊಗರಿ ಬೆಳೆಗೆ ವಿಮೆ ಮಾಡಿದ ರೈತರಿಗೆ ಅನುಕೂಲವಾಗುವಂತೆ  ಬೆಳೆ ನಷ್ಟದ ಬಗ್ಗೆ ಮಧ್ಯೆ ಋತುವಿನ ಪ್ರತಿಕೂಲ ಪರಿಸ್ಥಿತಿ ಸೌಲಭ್ಯ ಒದಗಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆʼ ಎಂದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಹಾರಾಜವಾಡಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ಜನಸ್ನೇಹಿ ಆಡಳಿತಕ್ಕೆ ಮುನ್ನುಡಿ

    December 26, 2025

    ಬೀದರ್: ಔರಾದ್ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬದ ಸಡಗರ

    December 26, 2025

    ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ

    December 25, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!

    December 26, 2025

    ಪಾವಗಡ : ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು ಹಾಗೂ…

    ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ  ಸಂಕಲ್ಪ ಯಾತ್ರೆ

    December 26, 2025

    ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ

    December 26, 2025

    ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು

    December 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.