ತುಮಕೂರು: ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರದ ಪಾಲಿನ ಶೇ.60ರಷ್ಟು ಮೊತ್ತದ ವಿದ್ಯಾರ್ಥಿ ವೇತನ ಪಡೆಯಲು ಎಲ್ಲಾ ಅರ್ಹ ವಿದ್ಯಾರ್ಥಿಗಳ ಆಧಾ ಆಧಾರಿತ ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ ಎಂದು ತುಮಕೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು ಬಯೋಮೆಟ್ರಿಕ್ ಇ–ದೃಢೀಕರಣಕ್ಕೆ ಒಳಪಡದೇ ಇದ್ದಲ್ಲಿ ಕೇಂದ್ರದ ಪಾಲಿನ ಶೇ.60ರಷ್ಟು ಮೊತ್ತ ಪಡೆಯುವಲ್ಲಿ ವಂಚಿತರಾಗಲಿದ್ದಾರೆ.
ಈ ಹಿನ್ನೆಲೆಯಲ್ಲಿ ತುಮಕೂರು ತಾಲ್ಲೂಕಿನ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳು ನವೆಂಬರ್ 15ರೊಳಗಾಗಿ ಸಹಾಯಕ ನಿರ್ದೇಶಕ(ಗ್ರೇಡ್–1)ರ ಕಚೇರಿ, ತುಮಕೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ಇ–ದೃಢೀಕರಣವನ್ನು ಮಾಡಿಸಬೇಕೆಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


