nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    • ಮಹಿಳಾ ಪಿಎಸ್ ಐಗೆ ಬಿಜೆಪಿ ಶಾಸಕನ ಪುತ್ರಿಯಿಂದ ಕಪಾಳಮೋಕ್ಷ: ವಿಡಿಯೋ ವೈರಲ್, ಎಫ್ ಐಆರ್ ದಾಖಲಾಗಿದ್ದರೂ ಆಗಿಲ್ಲ ಬಂಧನ
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು |  ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ
    ಜಿಲ್ಲಾ ಸುದ್ದಿ November 10, 2025

    ಸರಗೂರು |  ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ

    By adminNovember 10, 2025No Comments2 Mins Read

    ಸರಗೂರು:  ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಿ ಜನರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡಿ ಬ್ರಾಹ್ಮಣ್ಯವಾದಿ ಆರ್ ಎಸ್ ಎಸ್ ಅಧಿಕಾರವನ್ನು ಅನುಭವಿಸುತ್ತಿದೆ ಎಂದು ಆರೋಪಿಸಿ ತಾಲೂಕಿನ ತಹಶೀಲ್ದಾರ್ ಕಚೇರಿ ಬಳಿ  ದಸಂಸ (ಅಂಬೇಡ್ಕರ್ ವಾದ) ಸಂಘಟನೆ ಶಾಂತಿಯುತ  ಪ್ರತಿಭಟನೆ ನಡೆಸಿತು.

    ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ   ದಸಂಸ (ಅಂಬೇಡ್ಕರ್ ವಾದ) ಸಂಘಟನೆ ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು,  ಡಾ.ಬಾಬಾ ಸಾಹೇಬ ಅಂಬೇಡ್ಕರರವರು ಯಾವುದೆ ಕಾರಣಕ್ಕೂ ಆರ್ ಎಸ್ ಎಸ್  ಹಾಗೂ ವಿಶ್ವ ಹಿಂದೂ ಮಹಾಸಭಾದಂತಹ ಸಂಘಟನೆಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬಾರದೆಂದು. ರಾಜಕೀಯ ಪರಿಶಿಷ್ಟ ಜಾತಿಗಳ ಒಕ್ಕೂಟದ ಪ್ರಣಾಳಿಕೆಯಲ್ಲಿ ಎಚ್ಚರಿಕೆ ನೀಡಿದ್ದರು. ಆರ್‌ ಎಸ್‌ಎಸ್ ಅಪಾಯಕಾರಿ ಸಂಘಟನೆ ಎಂದೂ ಘೋಷಿಸಿದ್ದರು. ಆ ಮೂಲಕ ಮನುವಾದಿಗಳು ಮನುಸ್ಮೃತಿಯನ್ನು ಪೂಜಿಸಿ ಭಾರತದ ಸಂವಿಧಾನವನ್ನು ಅಂದಿನಿಂದಲು ತಿರಸ್ಕಾರದ ಮನೊಭಾವದಿಂದಲೇ  ನೋಡುತ್ತಾ ಬಂದಿರುತ್ತಾರೆ. ಸಂವಿಧಾನದ   ಮೇಲೆ ಯುದ್ಧ ಸಾರಿರುವ ಆರ್‌ ಎಸ್‌ ಎಸ್ ಮತ್ತು ಬಿಜೆಪಿಯವರ  ಆಟ ಅತಿರೇಖಾವಾಗಿದೆ ಎಂದರು.

    ಗ್ಯಾರಂಟಿ ಯೋಜನೆ ಸಮಿತಿ ಸದಸ್ಯ ಲಂಕೆ ದೇವರಾಜು ಮಾತನಾಡಿ, ಮುಂಗಡವಾಗಿ ಅನುಮತಿ ಇಲ್ಲದೆ ತನಗೆ ಬೇಕಾದ ಸ್ಥಳಗಳಲ್ಲಿ ಪಥ ಸಂಚಲನ ಮಾಡಿ ತೊಂದರೆ ಕೊಡುವುದನ್ನು ಸಚಿವರಾದ ಪ್ರಿಯಾಂಕ ಖರ್ಗೆ ರವರು, ಅನುಮತಿ ಇಲ್ಲದೆ ಸರಕಾರಿ ಇತರೆ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅವಕಾಶ ಕೊಡಬಾರದೆಂದು ಸರಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ  ಒಬ್ಬ ಮನುವಾದಿ ಆರ್‌ ಎಸ್‌ ಎಸ್ ಕಾರ್ಯಾಕರ್ತ ಪ್ರಿಯಾಂಕ ಖರ್ಗೆ ರವರನ್ನು ವಾಟ್ಸಾಪ್ ನಲ್ಲಿ ಅಶ್ಲೀಲ ಶಬ್ದ ಬಳಸಿ  ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. ಇಂತಹ  ಕೀಳು ಮಟ್ಟದ ಮನಸ್ಥಿತಿ  ಹೊಂದಿರುವ ಆರ್‌ ಎಸ್ ಎಸ್ ಸಂಘಟನೆಯನ್ನು ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿದರು.

    ಸರಗೂರು ತಾಲ್ಲೂಕಿನ ಬಿ ಮಟಕರೆ ಗ್ರಾಪಂ ವ್ಯಾಪ್ತಿಯ ಬೇಗೂರು ಸರ್ವೇ ನಂಬರ್ 6 ರಲ್ಲಿ ದರಕಾಸ್ತು ಮುಖಾಂತರ ಸಾಗುವಳಿ ಮಂಜೂರಾಗಿದ್ದು, ಸುಮಾ, ಲತಾ , ಎಂಬುವ ದಲಿತ ಹೆಣ್ಣುಮಕ್ಕಳು ಅನುಭವ ಇದ್ದು ಇದನ್ನು ಕಾಡಬೇಗೂರು ಗ್ರಾಮದ ದಾಸಪ್ಪ ಬೀನ್ ಗೋವಿಂದಪ್ಪ ಎಂಬುವವರು ತುಂಬಾ ಕಿರುಕುಳ ನೀಡುತಿದ್ದು ಇವರ ಮೇಲೆ  ಎಸ್ಸಿ ಎಸ್ಟಿ ಪ್ರಕರಣ ದಾಖಲಾಗಬೇಕೆಂದು ಒತ್ತಾಯಿಸುತ್ತೇವೆ ಎಂದರು.

    ಹಕ್ಕೊತ್ತಾಯಗಳು:

    ದೇಶದಲ್ಲಿ ಕೋಮುದ್ವೇಷ ತುಂಬಿ, ಜಾತಿ ಜಾತಿಗಳ ನಡುವೆ ಕೋಮು ಗಲಭೆ ಎಬ್ಬಿಸುವ ನೋಂದಣಿ ಇಲ್ಲದ ಆರ್ ಎಸ್ ಎಸ್ ಸಂಘಟನೆಯನ್ನು ಸರಕಾರ ರದ್ದುಗೊಳಿಸಬೇಕು.

    ಸಚಿವರಾದ  ಪ್ರಿಯಾಂಕ ಖರ್ಗೆಯವರಿಗೆ ಕರೆಮಾಡಿ ಅಶ್ಲೀಲ ಪದ ಬಳಸಿ,  ಜೀವ ಬೆದರಿಕೆ ಹಾಕಿದವರನ್ನು ಕಾನೂನು ಪ್ರಕಾರ ಜೀವ ಶಿಕ್ಷೆಗೆ ಗುರಿ ಪಡೆಸಬೇಕು.

    ಉದ್ದೇಶ ಪೂರ್ವಕವಾಗಿ ಚಿತ್ತಾಪುರನ್ನು ಗುರಿಯಾಗಿ ಇಟ್ಟುಕೊಂಡು ಪಥಸಂಚಲನ ಮಾಡಲು ಹೊರಟ ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಸರಕಾರ ಅನುಮತಿ ನೀಡಬಾರದು.

    ಸುಪ್ರೀಂ ಕೋರ್ಟ್  ಮುಖ್ಯನ್ಯಾಯಾಧೀಶರಾದ ಬಿ.ಆರ್.ಗವಾಯಿಯವರ ಮೇಲೆ ಶೂ ಎಸೆದ ವಕೀಲನನ್ನು ಬಂಧಿಸಿ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು.

    ಆರ್ ಎಸ್ ಎಸ್ ಬ್ಯಾನ್ ಮಾಡಿಲ್ಲ ಎಂದ ಕಾಲದಲ್ಲಿ ರಾಜ್ಯಾದ್ಯಂತ ಪ್ರಗತಿಪರ ಸಂಘಟನೆಗಳು ಜೊತೆಗೂಡಿ ಬೃಹತ್ ಸಮಾವೇಶ ಮಾಡಲಾಗುವುದು ಎಂದು ದಸಂಸ (ಅಂಬೇಡ್ಕರ್ ವಾದ) ಸಂಘಟನೆ ಎಚ್ಚರಿಸಿದರು.

    ಈ ಸಂದರ್ಭದಲ್ಲಿ ಸಂಘಟನೆಕಾರರು ಹಾದನೂರು ಚಂದ್ರ, ಕೃಷ್ಣಕುರ್ಣೇಗಾಲ, ಶಿವರಾಜು ಚೌಂಗಗೌಡನಹಳ್ಳಿ, ಕೂಲ್ಯ ಮಹದೇವಸ್ವಾಮಿ, ಮಹದೇವ, ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಮಹೇಶ್, ಗ್ಯಾರಂಟಿ ಯೋಜನೆ ಸಮಿತಿ ಸದಸ್ಯ ಲಂಕೆ ದೇವರಾಜು, ಪರಶಿವ, ಭಾಗಿಯಾಗಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ತುಮಕೂರು: ಮಹಿಳೆಯೊಬ್ಬರನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು…

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.