nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌
    ತುಮಕೂರು November 16, 2025

    ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌

    By adminNovember 16, 2025No Comments2 Mins Read
    science and society

    ತುಮಕೂರು: ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸುವ ಅಗತ್ಯವಿದೆ ಎಂದು ಕರ್ನಾಟಕ ವಿಜ್ಞಾನ ಹಾಗೂ ತಂತ್ರಜ್ಞಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎ.ಎಚ್‌.ರಾಜಾಸಾಬ್‌ ಪ್ರತಿಪಾದಿಸಿದರು.

    ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ಸಮಾಜ’ ಕುರಿತು ವಿಚಾರ ಸಂಕಿರಣದಲ್ಲಿ ಮಾತನಾಡಿದರು.

    ಸ್ವಾತಂತ್ರ್ಯದ ನಂತರ ದೇಶದ ಜನರ ಹಸಿವು ನೀಗಿಸಲು ಹಸಿರು ಕ್ರಾಂತಿ ಆರಂಭವಾಯಿತು. ಇದರ ಪರಿಣಾಮವಾಗಿ ಭಾರತ ಆಹಾರ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಿದೆ. ಆದರೆ ಅಂತರ್ಜಲದ ಅತಿಯಾದ ಬಳಕೆ, ರಾಸಾಯನಿಕ, ಹೈಬ್ರಿಡ್ ತಳಿ, ಕೀಟನಾಶಕ ಬಳಕೆಯ ಪರಿಣಾಮವಾಗಿ ಪರಿಸರ ನಾಶವಾಗಿದೆ. ಕುಡಿಯುವ ನೀರು ವಿಷವಾಗಿದೆ. ಇದೆಲ್ಲವನ್ನೂ ಗಮನಿಸಿದರೆ ಪರಿಸರ ಸ್ನೇಹಿ ಸಂಶೋಧನೆಗಳಿಗೆ ಒತ್ತು ನೀಡಬೇಕಿದೆ ಎಂದು ಹೇಳಿದರು.

    ಕೃತಕ ಬುದ್ಧಿಮತ್ತೆ (ಎಐ) ಸಾಕಷ್ಟು ಸಮಸ್ಯೆಗಳನ್ನು ತಂದೊಡ್ಡುತ್ತಿದೆ. ವಿದ್ಯಾರ್ಥಿಗಳು ಬರೆದ ಸಂಶೋಧನಾ ಪ್ರಬಂಧಗಳಲ್ಲಿ ಯಾವುದು ಅಸಲಿ, ಯಾವುದು ನಕಲು ಎಂಬುದನ್ನು ಕಂಡುಹಿಡಿಯಲು ಹೊಸ ಸಂಶೋಧನೆ ಮಾಡುವಂತಹ ದುಃಸ್ಥಿತಿಗೆ ತಲುಪಿದ್ದೇವೆ ಎಂದು ಆತಂಕ ವ್ಯಕ್ತಪಡಿಸಿದರು.

    ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ರಾಮಕೃಷ್ಣಾರೆಡ್ಡಿ, ‘ಎ.ಐ.ನಿಂದ ಉದ್ಯೋಗ ನಷ್ಟ ಎನ್ನುವುದಕ್ಕಿಂತ, ಅಗತ್ಯಕ್ಕೆ ತಕ್ಕಂತೆ ಕೌಶಲ ರೂಢಿಸಿಕೊಂಡರೆ ಹೆಚ್ಚು ದಿನ ಉಳಿಯಲು ಸಾಧ್ಯ. ಕಾಲೇಜುಗಳಲ್ಲಿ ಗುಣಮಟ್ಟ ಹೆಚ್ಚಳಕ್ಕೆ ಒತ್ತು ನೀಡಲಾಗಿದ್ದು, ಇದಕ್ಕಾಗಿ 20 ಸಂಸ್ಥೆಗಳ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಅಜೀಂ ಪ್ರೇಮಜಿ ಫೌಂಡೇಷನ್ ಸಹಯೋಗದಲ್ಲಿ ಬೆಂಗಳೂರು ವಿಭಾಗದ 28 ಸಾವಿರ ವಿದ್ಯಾರ್ಥಿನಿಯರಿಗೆ ವಾರ್ಷಿಕ 730 ಸಾವಿರ ವಿದ್ಯಾರ್ಥಿ ವೇತನ ನೀಡುವ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಮಾಹಿತಿ ನೀಡಿದರು.

    ಪದವಿ ಕಾಲೇಜು ಉಪನ್ಯಾಸಕರಿಗೆ ಸಾಕಷ್ಟು ಸೌಲಭ್ಯ ಕೊಡಲಾಗಿದೆ. ಆದರೆ ಆಧಾರ್ ಆಧಾರಿತ ಬಯೋಮೆಟ್ರಿಕ್ ಮಾಡುವಂತಹ ದುಃಸ್ಥಿತಿ ಬಂದಿದ್ದು ವಿಪರ್ಯಾಸ ಎಂದು ವಿಷಾದಿಸಿದರು.

    ವಿಜ್ಞಾನಿ ವಿ.ಶೋಭಾ, ಕುವೆಂಪು ವಿ.ವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ಕಾಲೇಜು ಪ್ರಾಂಶುಪಾಲರಾದ ಪ್ರೊ.ಟಿ.ಡಿ.ವಸಂತ, ಐಕ್ಯೂಎಸಿ ಸಂಯೋಜಕರಾದ ಕೆ.ವಿ.ಅನುಸೂಯ, ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಿಇಒ ಆರ್.ಆನಂದ, ಸಂಘಟನಾ ಕಾರ್ಯದರ್ಶಿ ಫಾತಿಮ ಜಬೀನ್, ವಿಚಾರ ಸಂಕಿರಣದ ಸಂಯೋಜಕ ಎನ್.ಡಾ.ಯೋಗೀಶ್, ಬಿ.ಆರ್.ರೇಣುಕಾ ಪ್ರಸಾದ್‌ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!

    July 29, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಮಳೆ ಕೊರತೆ, ಬರದ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ರೈತರು ಬೆಳೆ ನಷ್ಟ ತಪ್ಪಿಸಿಕೊಳ್ಳಲು ಫಸಲ್ ಬಿಮಾ (ವಿಮಾ) ಯೋಜನೆಯಡಿ…

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.