ಪಾವಗಡ: ಅಂಬೇಡ್ಕರ್ ಭವನದ ಮೇಲೆಯೇ ವಿದ್ಯುತ್ ತಂತಿಯೊಂದು ಹಾದು ಹೋಗಿದ್ದು, ಇದನ್ನು ತೆರವುಗೊಳಿಸಲು ಸಾಕಷ್ಟು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಇಲ್ಲಿನ ನಿವಾಸಿಗಳು ದೂರಿದ್ದಾರೆ.
ಪಾವಗಡ ತಾಲೂಕಿನ ನಿಡಿಗಲ್ ಹೋಬಳಿಯ ಸಿ.ಕೆ.ಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ತೂರು ಗ್ರಾಮದಲ್ಲಿ ಇಂತಹದ್ದೊಂದು ಸಮಸ್ಯೆ ಉದ್ಭವವಾಗಿದ್ದು, ಇಲ್ಲಿನ ಅಂಬೇಡ್ಕರ್ ಭವನದ ಮೇಲೆ ಅಪಾಯಕಾರಿ ಅಂತರದಲ್ಲಿ ವಿದ್ಯುತ್ ತಂತಿ ಹಾದು ಹೋಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಸಮಸ್ಯೆಯ ಬಗ್ಗೆ ಇಲ್ಲಿನ ನಿವಾಸಿಗಳು ಸಾಕಷ್ಟು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಕ್ರಮ ಜರಗಿಸಿಲ್ಲ ಎಂದು ಗ್ರಾಮಸ್ಥರಾದ ಹನುಮಂತರಾಯಪ್ಪ, ಸಣ್ಣಪ್ಪ, ಚಿಕ್ಕಣ್ಣ ಆಕ್ರೋಶ ವ್ಯಕ್ತಪಡಿಸಿದರು.
ವರದಿ: ನಂದೀಶ್ ಕೊತ್ತೂರ್, ನಿಡಿಗಲ್ ಹೋಬಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB