ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ, ದಬ್ಬೆಘಟ್ಟ ಗ್ರಾಮದಲ್ಲಿ ಕರ್ನಾಟಕ ಸರ್ಕಾರದ ಮಹತ್ವಾಕಾoಕ್ಷೆಯ ” ಗ್ರಾಮ್ ಒನ್” ಕೇಂದ್ರವನ್ನು ಉದ್ಘಾಟಿಸಲಾಯಿತು.
ನಾಡಕಚೇರಿಯಲ್ಲಿ ಸಿಗಬಹುದಾದ ಎಲ್ಲಾ ಮೂಲಭೂತ ಸೌಕರ್ಯಗಳ ಅರ್ಜಿಯನ್ನು ಇಲ್ಲಿ ಸಲ್ಲಿಸ ಬಹುದಾಗಿದೆ. ಜನರು ನಾಡಕಚೇರಿಯಲ್ಲಿ, ಅಥವಾ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಸರತಿಯ ಸಾಲಿನಲ್ಲಿ ನಿಂತು ಕಾಯಬೇಕಾದ ಪರಿಸ್ಥಿತಿ ಇನ್ನು ಮುಂದೆ ಇರುವುದಿಲ್ಲ.
ಈ ಸೇವೆಯನ್ನು ಉದ್ಘಾಟಿಸಿದ ಮಾತನಾಡಿದ ಪ್ರಕಾಶ್, ಸರ್ಕಾರಿ ಕೆಲಸದ ದಿನಗಳಲ್ಲಿ ನಿರಂತರವಾಗಿ ನಾವು ಸೇವೆಯನ್ನು ಒದಗಿಸಲು ಬದ್ಧರಾಗಿದ್ದು, ಸರ್ಕಾರದ ಮಹತ್ವಾಕಾoಕ್ಷೆಯ ಸೇವೆಯನ್ನು ಸರ್ಕಾರದ ನಿಯಮಮಾವಳಿಗಳ ಮೂಲಕ ಸರ್ಕಾರಿ ನಿಗದಿತ ಶುಲ್ಕವನ್ನು ಪಡೆದು ಸೇವೆಯನ್ನು ಒದಗಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಅವರ ತಂದೆ ನಂಜಪ್ಪ,ತಾಯಿ ರoಗಮ್ಮ ಪಟೇಲ್ ನಾಗರಾಜ್ , ದಲಿತ ಸಂಚಾಲಕರಾದ ಬಿ.ಪುರ ತಮ್ಮಯ್ಯ , ಶಿವರಾಂ ಎಲೆಕೊಪ್ಪಇತರರು ಹಾಜರಿದ್ದರು.
ವರದಿ: ಸುರೇಶ್ ಬಾಬು ಎಂ., ತುರುವೇಕೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB