nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ

    November 26, 2025

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    November 26, 2025

    ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ

    November 26, 2025
    Facebook Twitter Instagram
    ಟ್ರೆಂಡಿಂಗ್
    • ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ
    • ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ
    • ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ
    • ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ
    • ನ.27: ಬೆಳ್ಳಾವಿಯಲ್ಲಿ ಶ್ರೀ ಕನಕದಾಸರ ಜಯಂತಿ: ಕನ್ನಡ ರಾಜ್ಯೋತ್ಸವ
    • ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ
    • ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
    • ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ
    ತುಮಕೂರು November 26, 2025

    ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ

    By adminNovember 26, 2025No Comments3 Mins Read

    ತುಮಕೂರು:   ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಕರ್ನಾಟಕ ರಾಜ್ಯ ಸರ್ಕಾರವು 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು ಎಐಡಿಎಸ್ ಓ ತುಮಕೂರು ಜಿಲ್ಲಾ ಸಮಿತಿ ಆರೋಪಿಸಿದೆ.

    ಈ ಸಂಬಂಧ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಗ್ರಾಮ ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 6,000 ಕೆಪಿಎಸ್ ಮ್ಯಾಗ್ನೆಟ್ ಶಾಲೆಯನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರವು ಹೊಂದಿದೆ. ಮೊದಲ ಹಂತದಲ್ಲಿ ರಾಜ್ಯದ 800 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳೆಂದು ಗುರುತಿಸಲಾಗಿದೆ.( ಗಣಿಬಾಧಿತ ಜಿಲ್ಲೆಗಳಲ್ಲಿ 100, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ 200 ಹಾಗೂ ಇತರೆ ಭಾಗದಲ್ಲಿ 500) ದಿ. 15/10/2025ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಈ ಕುರಿತು ಆದೇಶಿಸಲಾಗಿದೆ ಎಂದು ಅವರು ಹೇಳಿದರು.


    Provided by
    Provided by

    ಈ ಯೋಜನೆಯನ್ನು Pilot Project ಅಡಿ ಜಾರಿಗೊಳಿಸಲು ರಾಮನಗರದ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಹೊಂಗನೂರಿನಿಂದ 6 ಕಿಮೀ ವ್ಯಾಪ್ತಿಯೊಳಗಿರುವ, 77 ವಿದ್ಯಾರ್ಥಿಗಳಿರುವ ಹೊಡಿಕೆ ಹೊಸಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ, 82 ವಿದ್ಯಾರ್ಥಿಗಳಿರುವ ಕನ್ನಿ ದೊಡ್ಡಿ  ಶಾಲೆ, 31 ವಿದ್ಯಾರ್ಥಿಗಳಿರುವ ಅಮ್ಮಳ್ಳಿ ದೊಡ್ಡಿ ಶಾಲೆ , 100 ವಿದ್ಯಾರ್ಥಿಗಳಿರುವ ಸಂತೆಮೊಗೇನಹಳ್ಳಿ ಶಾಲೆ, 20 ವಿದ್ಯಾರ್ಥಿಗಳಿರುವ ಮೊಗೇನಹಳ್ಳಿ ದೊಡ್ಡಿ, 80 ವಿದ್ಯಾರ್ಥಿಗಳಿರುವ ಸುಣ್ಣಘಟ್ಟ ಶಾಲೆಗಳನ್ನು ಹೊಂಗನೂರಿನ  KPSಗೆ  ತುರ್ತಾಗಿ  ವಿಲೀನಗೊಳಿಸಿ ಕ್ರಮಕೈಗೊಳ್ಳಲು ಆದೇಶ (ದಿ: 23/10/2025) ನೀಡಲಾಗಿದೆ. ತತ್ಪರಿಣಾಮ, ಯಾವುದೇ ಕಾರಣಕ್ಕೂ ತಮ್ಮ ಊರಿನ ಶಾಲೆಗಳನ್ನು ಮುಚ್ಚಲು ಬಿಡುವುದಿಲ್ಲ ಮತ್ತು ಅದೇ ಶಾಲೆಗಳನ್ನು ಅಭಿವೃದ್ಧಿಪಡಿಸಿ ಊರಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಬೇಕೆಂದು ಸುತ್ತ ಹಳ್ಳಿಗಳ ಗ್ರಾಮಸ್ಥರು ಹೋರಾಟ ನಡೆಸುತ್ತಿದ್ದಾರೆ. ಇದೇ ರೀತಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಡಿ ರಾಜ್ಯದ 40,000ಕ್ಕೂ ಅಧಿಕ ಶಾಲೆಗಳು ವಿಲೀನಗೊಳ್ಳುತ್ತವೆ. ಸಮುದಾಯ, ಹಳ್ಳಿಗಳ ನಡುವಿನ ಶಾಲೆ ಊರು ದಾಟಿ ಪಕ್ಕದೂರಿಗೆ ಹೋಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

    ಇದಿಷ್ಟೇ ಅಲ್ಲದೆ, ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರುಗಳು, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ, ಸೇವಾ ನಿಯಮಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ. ಕೇವಲ ಶಾಲೆಗಳಷ್ಟೇ ಅಲ್ಲದೆ ರಾಜ್ಯದ ಸಾವಿರಾರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಕೂಡ ಮುಚ್ಚುವ ಅಪಾಯಕ್ಕೆ ಸಿಲುಕಿವೆ ಎಂದು ಆರೋಪಿಸಿದರು.

    ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಎಂಬ ಸರ್ಕಾರದ ಸ್ಪಷ್ಟನೆ ಮತ್ತು ಮಾಧ್ಯಮಗಳೆದುರಿಗೆ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು, ಹೇಳುತ್ತಿರುವ ಮಾತು ಸತ್ಯಕ್ಕೆ ದೂರವಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯಾವ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯನ್ನಾಗಿ ಮಾಡಬೇಕು ಮತ್ತು ಆ ಶಾಲೆಗೆ ಯಾವ ಯಾವ ಶಾಲೆಗಳನ್ನು ಸೇರಿಸಬೇಕು ಎಂಬುದರ ಪೂರ್ಣ ಪಟ್ಟಿಯನ್ನು ಈಗಾಗಲೇ ಸಿದ್ಧಗೊಳಿಸಲಾಗಿದೆ. ಶಾಲೆಗಳ ಅಭಿವೃದ್ಧಿಯ ಹೆಸರಲ್ಲಿ ರಾಜ್ಯದ ಜನತೆಯನ್ನು ವಂಚಿಸಿ ಬಡ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಸಿದುಕೊಳ್ಳುವ ಸರ್ಕಾರದ ಘೋರ ಹುನ್ನಾರ ಇದಾಗಿದೆ. ಮುಚ್ಚುತ್ತಿರುವ 40,000 ಸರ್ಕಾರಿ ಶಾಲೆಗಳ ಪಟ್ಟಿ ಸಂಪೂರ್ಣ ಪಟ್ಟಿಯನ್ನು ಎಐಡಿಎಸ್‌ ಓ ನಾಡಿನ ಜನತೆಯ ಮುಂದೆ ಇಟ್ಟು, ಕೆಪಿಎಸ್-ಮ್ಯಾಗ್ನೆಟ್ ಯೋಜನೆಯ ಕರಾಳ ವಾಸ್ತವವನ್ನು ಬಯಲಿಗೆಳೆದಿದೆ! ಈಗ ಸರ್ಕಾರದ ಉತ್ತರವೇನು ಎಂಬುದು ನಾಡಿನ ಪ್ರಶ್ನೆ ಎಂದರು.

    ವಿಲೀನದ ನೆಪದಲ್ಲಿ ಮುಚ್ಚುವ ಶಾಲಾ ಕಟ್ಟಡಗಳನ್ನು ಇತರ ಕೆಲಸಗಳಿಗೆ ವಿನಿಯೋಗಿಸಲು ಸರ್ಕಾರವು ಮುಂದಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಮಸೂದೆ ಮಂಡಿಸುವುದಾಗಿ ಹೇಳಿದೆ. ಪ್ರತಿಷ್ಠಿತ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಸರ್ಕಾರಿ ಶಾಲಾ ಕಟ್ಟಡಗಳನ್ನು ಸ್ವಸಹಾಯ ಗುಂಪುಗಳಿಗೆ ನೀಡಲಾಗುವುದೆಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಒಂದೇ ಒಂದು ಶಾಲೆಯನ್ನು ಮುಚ್ಚದಿದ್ದ ಮೇಲೆ ಸರ್ಕಾರಿ ಶಾಲೆಗಳನ್ನು ಬೇರೆ ಉದ್ದೇಶಕ್ಕೆ ವಿನಿಯೋಗಿಸುವ ಪ್ರಶ್ನೆ ಎಲ್ಲಿಂದ ಉದ್ಭವಿಸುತ್ತದೆ?  ಈ ದೇಶದಲ್ಲಿ ಶಿಕ್ಷಣಕ್ಕಾಗಿ ಧ್ವನಿಯೆತ್ತಿದ ಮಹಾನ್ ನವೋದಯ ಚಿಂತಕರಾದ ಈಶ್ವರ್ ಚಂದ್ರ ವಿದ್ಯಾಸಾಗರ್, ಜ್ಯೋತಿರಾವ್ ಪುಲೆ, ಸಾವಿತ್ರಿಬಾಯಿ ಫುಲೆ  ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿಗಳಾದ ಭಗತ್ ಸಿಂಗ್– ನೇತಾಜಿ ಸುಭಾಷ್ ಚಂದ್ರ ಬೋಸ್, ನಮ್ಮ ನಾಡಿನ ಕುವೆಂಪು, ಕುದ್ಮುಲ್ ರಂಗರಾವ್, ಪಂಡಿತ್ ತಾರಾನಾಥ್ ಮುಂತಾದ ಮಹನೀಯರ ಆಶಯಗಳಿಗೆ ವಿರುದ್ಧವಾಗಿ ಸರ್ಕಾರವು ಶಿಕ್ಷಣದ ಮೇಲೆ ಪ್ರಹಾರ ನಡೆಸಿದೆ. ಇದರ ವಿರುದ್ಧ ಪ್ರಬಲ ಹೋರಾಟವನ್ನು ಬೆಳೆಸಲು ಮತ್ತು ಎಲ್ಲ ರೀತಿಯ ತ್ಯಾಗಕ್ಕೆ ಸಿದ್ದರಾಗಲು ನಾಡಿನ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಹಾಗೂ ಶಿಕ್ಷಣ ಪ್ರೇಮಿ ಜನತೆಗೆ ಸರ್ಕಾರವು ಸವಾಲು ಎಸಗಿದೆ. ಇತಿಹಾಸದ ಎಲ್ಲ ಮಹಾನ್ ವ್ಯಕ್ತಿಗಳ ಕರೆಗೆ ಓಗೊಟ್ಟು ಸರ್ಕಾರಿ ಶಾಲೆಗಳನ್ನು ಉಳಿಸುವ ಹೋರಾಟಕ್ಕೆ ಮುಂದಾಗುವಂತೆ ಎಐಡಿಎಸ್ ಓ ಮುಖಂಡರು ಕರೆ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನ.27: ಬೆಳ್ಳಾವಿಯಲ್ಲಿ ಶ್ರೀ ಕನಕದಾಸರ ಜಯಂತಿ: ಕನ್ನಡ ರಾಜ್ಯೋತ್ಸವ

    November 26, 2025

    ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ

    November 25, 2025

    ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ

    November 25, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ

    November 26, 2025

    ಸರಗೂರು:  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಜನ್ಮದಿನವನ್ನು  ಮಂಗಳವಾರದಂದು ಹುಲ್ಲಳ್ಳಿ ಯೋಜನಾ ಕಚೇರಿಯ ಮುಳ್ಳೂರು…

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    November 26, 2025

    ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ

    November 26, 2025

    ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ

    November 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.