ತುಮಕೂರು: ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವ ಚಿತ್ರವನ್ನು ತೆರವುಗೊಳಿಸಿ ಅವಮಾನಿಸಿದ ನ್ಯಾಯಾಧೀಶ್ ಮಲ್ಲಿಕಾರ್ಜುನ ಗೌಡ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿಧಾನ ಸೌಧ ಚಲೋ, ಬೆಂಗಳೂರು ಚಲೋ ಬೃಹತ್ ಪ್ರತಿಭಟನೆ ನಡೆಯಿತು.
ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಅವರು ಈ ಸಂದರ್ಭದಲ್ಲಿ ಮಾತನಾಡಿ, ರಾಯಚೂರು ಜಿಲ್ಲಾ ಪ್ರಧಾನ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಪಾಟೀಲ್ ರಾಯಚೂರು ನ್ಯಾಯಾಲಯದ ಆವರಣದಲ್ಲಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರವನ್ನು ತೆಗೆಸಿ ಅವಮಾನ ಮಾಡಿದ್ದಾರೆ. ಈ ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ತೀರ್ವ ಗೊಂಡಿದ್ದು ಇದನ್ನು ರಾಜ್ಯ ಸರ್ಕಾರವಾಗಲಿ ಅಥವಾ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಲಿ ಗಂಭೀರವಾಗಿ ಪರಿಗಣಿಸದೆ ಆರೋಪಿ ನ್ಯಾಯಾಧೀಶರ ಮೇಲೆ ದೂರು ದಾಖಲಿಸದೆ ಇರುವುದರಿಂದ ರಾಜ್ಯದ ಅಂಬೇಡ್ಕರ್ ಅನುಯಾಯಿಗಳಲ್ಲಿ ಮತ್ತಷ್ಟು ಆಕ್ರೋಶ ಭುಗಿಲೆದ್ದಿದೆ ಎಂದರು.
ರಾಜ್ಯದಲ್ಲಿನ ಎಲ್ಲ ದಲಿತ ಸಂಘಟನೆಗಳು ಒಟ್ಟಿಗೆ ಸೇರಿ ಸಂವಿಧಾನ ಸಂರಕ್ಷಣೆ ಮಹಾ ಒಕ್ಕೂಟ ವೆಂಬ ಐಕ್ಯ ವೇದಿಕೆಯನ್ನು ಹುಟ್ಟಿಹಾಕಿ, ಈ ಒಕ್ಕೂಟದ ಅಡಿಯಲ್ಲಿ ಬೆಂಗಳೂರಿನ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋ ರಾಲಿಯನ್ನು ಹಮ್ಮಿಕೊಂಡಿತ್ತು ರಾಜ್ಯದ ಎಲ್ಲ ಜಿಲ್ಲೆ ತಾಲೂಕುಗಳ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.
ಮಲ್ಲಿಕಾರ್ಜುನ ಗೌಡರನ್ನು ಬಂಧಿಸಲು ಸ್ಪಷ್ಟ ಭರವಸೆ ನೀಡಬೇಕು ಇಲ್ಲವಾದರೆ ನಮ್ಮ ಐಕ್ಯಹೋರಾಟವನ್ನು ಮತ್ತಷ್ಟು ತೀರ್ವ ಹಂತಕ್ಕೆ ವಿಸ್ತರಿಸುವ ಮೂಲಕ ನಿರ್ಣಯವನ್ನು ತೆಗೆದುಕೊಳ್ಳಲಾಗುವುದು ಎಂದರು.
ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ತುಮಕೂರು ಜಿಲ್ಲಾ ಸಮಿತಿ, ಸಾವಿತ್ರಿಬಾಯಿ ಫುಲೆ ಸ್ವಸಹಾಯ ಮಹಿಳಾ ಸಂಘ, ರಾಮದೇವಿ ಸ್ವಸಹಾಯ ಮಹಿಳಾ ಸಂಘ ಮೊದಲಾದ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದವು
ಈ ಸಂದರ್ಭದಲ್ಲಿ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷರಾದ ನಟರಾಜು ಜಿ.ಎಲ್., ಗೌರವ ಅಧ್ಯಕ್ಷರಾದ ಎಂ.ರಾಮಯ್ಯ, ಮಹಿಳಾ ಜಿಲ್ಲಾಧ್ಯಕ್ಷರು ಎಂ.ಎನ್. ಮಂಜುಳಾ ಹಾಗೂ ನಾಗರತ್ನ ಶಾರದಾ ಶಶಿಕಲಾ ವೀಣಾ ನೇತ್ರಾವತಿ ನರಸಮ್ಮ ಕೆಂಪಮ್ಮ ನಾಗಮ್ಮ ಪ್ರೇಮ ಉಪಸ್ಥಿತರಿದ್ದರು.
ವರದಿ: ಎ.ಎನ್. ಪೀರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB