nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    • ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
    • ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
    • ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
    • ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ | ತಾಲ್ಲೂಕು ಕುರುಬ ಸಂಘದ ನೂತನ ಅಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯ ಆಯ್ಕೆ
    ಕೊರಟಗೆರೆ December 8, 2025

    ಕೊರಟಗೆರೆ | ತಾಲ್ಲೂಕು ಕುರುಬ ಸಂಘದ ನೂತನ ಅಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯ ಆಯ್ಕೆ

    By adminDecember 8, 2025No Comments3 Mins Read

    ಕೊರಟಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಪ್ತರಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದ ಕೊರಟಗೆರೆ  ತಾಲ್ಲೂಕು ಕುರುಬ ಸಂಘದ ಅಧ್ಯಕ್ಷರಾದ ಮೈಲಾರಪ್ಪನವರ ಅಕಾಲಿಕ ಮರಣದಿಂದ ತೆರವಾದಂತ ಸ್ಥಾನಕ್ಕೆ ಹಾಲಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಕುರುಡುಗಾನಹಳ್ಳಿ ರಂಗಯ್ಯನವರನ್ನ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

    ಕೊರಟಗೆರೆ ಪಟ್ಟಣದ ಬೈಲಾಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಕನಕ ಭವನದ ಬಳಿ 26 ಜನ ಸದಸ್ಯರು ಸರ್ವಾನುಮತದಿಂದ ಹಾಲಿ ಉಪಾಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯನವರನ್ನ ಆಯ್ಕೆ ಮಾಡಲಾಗಿದೆ.


    Provided by
    Provided by

    ಕೊರಟಗೆರೆ ತಾಲೂಕು ಕುರುಬ ಸಂಘದ ಅಧ್ಯಕ್ಷರಾಗಿದ್ದ ಮೈಲಾರಪ್ಪನವರ ಅಕಾಲಿಕ ಮರಣದಿಂದ ತೆರವಾಗಿದ್ದ ಸ್ಥಾನಕ್ಕೆ ಭಾನುವಾರ ಆಯ್ಕೆ ಪ್ರಕ್ರಿಯೆ ಜರುಗಿ 39 ಸದಸ್ಯ ಬಲವಿರುವ ತಾಲೂಕು ಕುರುಬ ಸಂಘದಲ್ಲಿ 29 ಜನ ಸದಸ್ಯರು ಒಂದು ಕಡೆ ಸೇರಿ ಸರ್ವಾನುಮತದಿಂದ ಆಯ್ಕೆ ಪ್ರಕ್ರಿಯೆ ನಡೆಸಿದ್ದಾರೆ.

    ನೂತನ ಅಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯ ಮಾತನಾಡಿ, ತಾಲೂಕು ಕುರುಬ ಸಂಘಕ್ಕೆ ಈ ಹಿಂದಿನ ಅಧ್ಯಕ್ಷರಾದ ಮೈಲಾರಪ್ಪ 2 ಎಕ್ರೆ ಜಮೀನು ತಂದಿದ್ದು, ಮೂರ್ನಾಲ್ಕು ಕೋಟಿ ರೂಪಾಯಿ ಅಂದಾಜು ಮೊತ್ತದಲ್ಲಿ ಬಹು ದೊಡ್ಡ ಮಟ್ಟದ ಭವನ ನಿರ್ಮಾಣ ಕಾರ್ಯ ಪೂರ್ಣಗೊಳಿಸುವ ಮಹದಾಸೆ ಹೊಂದಿದ್ದು, ಹಿರಿಯರ ಮಾರ್ಗದರ್ಶನದಲ್ಲಿ ಹಿರಿಯರು ಹಾಗೂ ಕಿರಿಯರ ಸಹಕಾರದೊಂದಿಗೆ ಕನಕ ಭವನ ಪೂರ್ಣಗೊಳಿಸುವುದರ ಜೊತೆ ಜೊತೆಯಲ್ಲಿ ಸಮಾಜದ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು,

    ತಾಲ್ಲೂಕು ಕುರುಬ ಸಂಘದ ಗೌರವಾಧ್ಯಕ್ಷರಾದಂತ ಲಾರಿ ಮಲ್ಲಯ್ಯ ಮಾತನಾಡಿ, ತಾಲೂಕು ಕುರುಬ ಸಂಘದ ಹಾಲಿ ಅಧ್ಯಕ್ಷ ಮೈಲಾರಪ್ಪ ಇತ್ತೀಚಿಗೆ ಮರಣ ಹೊಂದಿದ್ದು, ಆ ಹುದ್ದೆಗೆ ಹಿರಿತನ ಸೇರಿದಂತೆ ಮೈಲಾರಪ್ಪನವರ ಜೊತೆ ಜೊತೆಯಲ್ಲಿ ಜಮೀನು ಮಂಜೂರು ಮಾಡುವ ಸಂದರ್ಭದಲ್ಲಿ ಅವಿರತ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲಿ ಕನಕ ಭವನ ಸಹ ಪೂರ್ಣಗೊಳಿಸುವಂತಹ ವಿಶ್ವಾಸ ನಮ್ಮಲ್ಲಿದೆ ಈ ವಿಚಾರದಲ್ಲಿ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಕುರುಡುಗಾನಹಳ್ಳಿ ರಂಗಯ್ಯ ಹೆಚ್ಚು ಆಸಕ್ತಿ ವಹಿಸಿಕೊಂಡು ಪೂರ್ಣಗೊಳಿಸಬೇಕು ಎಂದರು.

    ತಾಲೂಕು ಕುರುಬ ಸಂಘದ ಪ್ರಧಾನ ಕಾರ್ಯದರ್ಶಿಯಾದ ರಂಗಶಾಮಯ್ಯ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಈ ಹಿಂದೆ  ರಂಗಯ್ಯ ನವರ ಕೊಡುಗೆ ಅಪಾರವಾಗಿದ್ದು, ಮುಂದಿನ ದಿನಗಳಲ್ಲಿ ಕನಕ ಭವನ ಪೂರ್ಣಗೊಳಿಸುವ ವಿಚಾರ ಸೇರಿದಂತೆ ಸಮಾಜದ ಶೈಕ್ಷಣಿಕ ಶ್ರೇಯೋಭಿವೃದ್ಧಿಗೆ ಹೆಚ್ಚು ಶ್ರಮವಹಿಸಬೇಕು, ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ಗುರುತಿಸಿ ಆತ್ಮಸ್ಥೈರ್ಯ ತುಂಬುವುದರ ಜೊತೆಗೆ ಸಮಾಜದ ಅಭಿವೃದ್ಧಿಗೆ ಹೆಚ್ಚು ಶ್ರಮಿಸುವಂತಾಗಬೇಕು ಎಂದರು.

    ಸಮಾಜದ ಮುಖಂಡರಾದಂತಹ ಗಂಗರಂಗಯ್ಯ ಮಾತನಾಡಿ, ಅಧ್ಯಕ್ಷರಾದವರು ಸಮಾಜದ ಶ್ರೇಯ ಅಭಿವೃದ್ಧಿಗೆ ಹೆಚ್ಚು ಶ್ರಮಿಸಬೇಕು, ಈ ಕೆಲಸ ನೂತನ ಅಧ್ಯಕ್ಷರಾದ ರಂಗಯ್ಯನವರಿಂದ ಸಾಧ್ಯ ಎಂಬ ಮನಸ್ಥಿತಿಯಿಂದ ಎಲ್ಲರೂ ಒಗ್ಗೂಡಿ  ನೂತನವಾಗಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ, ಇವರ ಆಯ್ಕೆ ಪ್ರಕ್ರಿಯೆ ಹಿಂದೆ ಹಿರಿತನ ಹಾಗೂ ಈ ಹಿಂದೆ ಸಮಾಜಕ್ಕೆ ಹೆಚ್ಚು ತೊಡಗಿಸಿಕೊಂಡಿದ್ದರಿಂದ 39 ಸದಸ್ಯರಲ್ಲಿ 29 ಸದಸ್ಯರು ಸರ್ವಾನು ಮತದಿಂದ ಆಯ್ಕೆ ಮಾಡಿದ್ದಾರೆ ತಾಲೂಕ ಅಧ್ಯಕ್ಷರ ಜವಾಬ್ದಾರಿ ಅರಿತು ಸಮಾಜದ ಶ್ರೇಯ ಅಭಿವೃದ್ಧಿಗೆ ಹೆಚ್ಚು ಶ್ರಮವಿಸಬೇಕು ಎಂದರು.

     

    ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶೀ ಟಿ.ಡಿ.ರಂಗಶಾಮಯ್ಯ, ಖಜಾಂಚಿ ಚಿಕ್ಕಹನುಮಯ್ಯ, ಉಪಾಧ್ಯಕ್ಷ ಮಲ್ಲಿಕಾರ್ಜುನ ನಿರ್ದೇಶಕರುಗಳಾದ ಸಿದ್ದಲಿಂಗಪ್ಪ ರಂಗಾಪುರ, ಡಿ.ರಂಗಯ್ಯ,  ಹನುಮಂತರಾಯಪ್ಪ, ರಂಗಧಾಮಯ್ಯ, ಗೋವಿಂದರಾಜು ನಾಗರಹಳ್ಳಿ, ಚಿಕ್ಕನಾಗಪ್ಪ, ಕೆಂಚಪ್ಪ, ಮುದ್ದಣ್ಣ , ಸಿದ್ದಪ್ಪ ವಿವೇಕಾನಂದ ಸ್ಕೂಲ್, ಹರೇ ಚಂದ್ರಪ್ಪ, ರಾಮಕೃಷ್ಣಯ್ಯ, ಗೋವಿಂದರಾಜು , ನಾಗರಾಜು, ರಂಗನಾಥ್ ಕ್ರಾಸ್, ವಿಜಯ ನರಸಿಂಹ, ವೇಣುಗೋಪಾಲ್ (ಎಲ್ ಐಸಿ)   ರಂಗಸ್ವಾಮಯ್ಯ, ರಂಗನಾಥ ಕೆ.ಎಂ., ಕೆಂಪ ರಂಗಯ್ಯ , ವೀರಭದ್ರಯ್ಯ , ತಿಮ್ಮರಾಜು ಬೇಕರಿ, ತಿಮ್ಮರಾಜು ಕನಕ ಫ್ಯಾಷನ್ ಮುಖಂಡರಾದ  ಸಾಹುಕಾರ್ ನಾರಾಯಣಪ್ಪ, ಬಿಸಿ ದೇವರಾಜು, ಗ್ರಾಮ .ಪಂ ಅಧ್ಯಕ್ಷ ಜಗನ್ನಾಥ್, ನಟರಾಜು ಸಿ.ಎಸ್., ಗಂಗರಾಜು ಕಂಟ್ರಾಕ್ಟರ್,  ರಾಮಮೂರ್ತಿ, ರಮೇಶ್ ಡ್ರೈವರ್, ನಾಗರಾಜು ದೈಹಿಕ ಶಿಕ್ಷಕರು, ಗುರುಪ್ರಸಾದ್, ಮಲ್ಲೇಶ್ , ಪ್ರಸನ್ನ, ರವಿ (ಕೊಬ್ಬರಿ) ಲಕ್ಷ್ಮಪ್ರಸಾದ್ ಸಿ.ಆರ್.,  ಶಿವು, ನಂಜುಂಡಯ್ಯ, ಡಿ.ಕೆ.ಶ್ರೀನಿವಾಸ್, ವೀರನಾಗಯ್ಯ, ದೊಡ್ಡಯ್ಯ, ಲಕ್ಷ್ಮಣ್, ಪವನ್ ಶ್ರೀ ರಾಮಯ್ಯ, ಬಜ್ಜನಹಳ್ಳಿ ಅಕ್ಕಣ್ಣ, ಬಿಜಿ ವೀರಣ್ಣ ಹನುಮಂತರಾಜು , ಶಂಕರ್, ಅರೇಲಿಂಗಯ್ಯ  ಶಿವಕುಮಾರ್, ಸೇರಿದಂತೆ ಹಲವು ಸಮಾಜದ ಮುಖಂಡರುಗಳು ಹಾಜರಿದ್ದರು.

    ವಿವಿಧ ಮುಖಂಡರಿಂದ ಸನ್ಮಾನ

    ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಮಹಾಲಿಂಗಪ್ಪ, ತಾಲೂಕು ಜೆಡಿಎಸ್ ಅಧ್ಯಕ್ಷ ಕಾಮರಾಜು, ಪಿಆರ್‌ ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ, ಟಿ ಏ ಪಿ ಸಿ ಎಂ ಎಸ್ ಅಧ್ಯಕ್ಷ ಈಶ್ವರಪ್ಪ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ  ಎಲ್ ಐಸಿ ರಾಜಣ್ಣ ಸೇರಿದಂತೆ ಹಲವು ಮುಖಂಡರು ಸನ್ಮಾನಿಸಿ ಶುಭಕೋರಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026

    ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ನಾಯಕತ್ವ ಬದಲಾವಣೆಯ ಹೈಡ್ರಾಮಾ ಇದೀಗ ಕ್ಲೈಮ್ಯಾಕ್ಸ್ ಹಂತ…

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026

    ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.