nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ಡಿಸೆಂಬರ್ 13—14ರಂದು ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ

    December 11, 2025

    ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್

    December 11, 2025

    ಗುಬ್ಬಿ | ಡಿ.12ರಂದು ಅಡಿಕೆ ಬೆಳೆ: ರೈತರಿಗೆ ತರಬೇತಿ

    December 11, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ಡಿಸೆಂಬರ್ 13—14ರಂದು ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ
    • ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್
    • ಗುಬ್ಬಿ | ಡಿ.12ರಂದು ಅಡಿಕೆ ಬೆಳೆ: ರೈತರಿಗೆ ತರಬೇತಿ
    • ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್
    • ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ
    • ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್
    • ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!
    • ನಾವು ಏಕೆ ಹೀಗೆ? ಯೋಚಿಸುತ್ತಾ ಹೋದರೆ | ಹೀಗೊಂದು ಚಿಂತನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ
    ಕೊರಟಗೆರೆ December 10, 2025

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    By adminDecember 10, 2025No Comments2 Mins Read
    koratagere

    ಕೊರಟಗೆರೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ರವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕೆಂದು ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ  ಡಾ.ಜಿ.ಪರಮೇಶ್ವರ ರವರ  ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ವಿವಿಧ  ಮಠಾಧೀಶರುಗಳು, ಸಾರ್ವಜನಿಕರು ಬೃಹತ್ ಪ್ರತಿಭಟನಾ ರ‍್ಯಾಲಿ ಪಟ್ಟಣದಲ್ಲಿ ನಡೆಸಿದರು.

    ಕರ್ನಾಟಕ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗುತ್ತಿದ್ದಂತೆ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಸಾವಿರಾರು ಡಾ.ಜಿ.ಪರಮೇಶ್ವರ ರವರ ಅಭಿಮಾನಿಗಳು ಬೃಹತ್ ಮೆರವಣಿಗೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಕೊರಟಗೆರೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಪ್ರಧಾನ ರಸ್ತೆ ಮೂಲಕ ಮುಖ್ಯ ಬಸ್‌ ಸ್ಟ್ಯಾಂಡ್ ವೃತ್ತದವರೆಗೆ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು.


    Provided by
    Provided by

    ಯುವಕರು ಬೈಕ್ ರ‍್ಯಾಲಿಯೊಂದಿಗೆ ರಾಜ್ಯದ ಮೊದಲ ದಲಿತ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ರರೇ ಆಗಬೇಕು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾದರೆ ಮೊದಲ ಆದ್ಯತೆ ಡಾ.ಜಿ.ಪರಮೇಶ್ವರ್ ರವರಿಗೆ ನೀಡಬೇಕೆಂದು ಘೋಷಣೆ ಕೂಗಿದರು, ಮೆರವಣಿಗೆಯಲ್ಲಿ ಮಹಿಳೆಯರು ಬಹುದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಡಾ.ಜಿ.ಪರಮೇಶ್ವರರವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲೇ ಬೇಕು, ಕಾಂಗ್ರೆಸ್ ಪಕ್ಷಕ್ಕಾಗಿ ಅವರು ಸಾಕಷ್ಟು ದುಡಿದಿದ್ದಾರೆ, ತ್ಯಾಗ ಮಾಡಿದ್ದಾರೆ, ಸಜ್ಜನ ರಾಜಕಾರಣಿಯಾದ ಅವರನ್ನು ದಲಿತ ನಾಯಕ ಎಂಬುವ ಕಾರಣಕ್ಕೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಹೊರಗಿಡಲಾಗಿದೆ, ಇದು ಸಂವಿಧಾನಕ್ಕೆ ಮಾಡಿರುವ ಮೋಸವಾಗಿದ್ದು ಡಾ.ಜಿ.ಪರಮೇಶ್ವರ ರವರನ್ನು ಕೂಡಲೆ ಮುಖ್ಯಮಂತ್ರಿ ಮಾಡಬೇಕೆಂದು ಆಗ್ರಹಿಸಿದರು.

    ಈ ಸಂದರ್ಭದಲ್ಲಿ ವಿವಿಧ ಮಠಾಧೀಶರುಗಳು ಆಗ್ರಹಿಸಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಣೆಯ ಕೂಗು ಜೋರಾಗಿ ಕೇಳಿ ಬರುತ್ತಿದೆ, ಕರ್ನಾಟಕದಲ್ಲಿ ಇಲ್ಲಿಯವರೆಗೂ ದಲಿತರು ಮುಖ್ಯಮಂತ್ರಿಯಾಗಿಲ್ಲ ಡಾ.ಜಿ.ಪರಮೇಶ್ವರ ರವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ದುಡಿದಿದ್ದಾರೆ, ಅವರ ಸೇವಾಮನೂಭಾವ, ಸಜ್ಜನಿಕೆ, ಉತ್ತಮ ರಾಜಕಾರಣಿ ಎನ್ನುವ ಅಭಿಪ್ರಾಯದೊಂದಿಗೆ ದೆಹಲಿಯ ವರೀಷ್ಠರು ಅವರನ್ನು ದಲಿತ ಮುಖ್ಯಮಂತ್ರಿ ಎನ್ನುವ ನ್ಯಾಯದೊಂದಿಗೆ ಇವರನ್ನು ಪರಿಗಣಿಸಬೇಕು, ತುಮಕೂರು ಜಿಲ್ಲೆಯ ಪ್ರಬಲ ನಾಯಕರಾದ ಡಾ.ಜಿ.ಪರಮೇಶ್ವರ ಮುಖ್ಯಮಂತ್ರಿಯಾದರೆ ತುಮಕೂರು ಜಿಲ್ಲೆಗೂ ಸಹ ಆದ್ಯತೆ ನೀಡಿದಂತಾಗುತ್ತದೆ ಅವರ ಮೇಲೆ ಪ್ರೀತಿ ಇರುವ, ಆಶೀರ್ವಾದ ಇರುವ, ಮುಖ್ಯಮಂತ್ರಿ ಆಗಬೇಕು ಎಂಬ ಅಭಿಲಾಷೆ ಇರುವ ಹಲವು ಸ್ವಾಮೀಜಿಗಳು ಅವರ ಪರ ಬೆಂಬಲವಾಗಿ ರ‍್ಯಾಲಿಯಲ್ಲಿ ಭಾಗವಹಿಸಿದ್ದಾರೆ. ಇದನ್ನು ರಾಜ್ಯ ಸರ್ಕಾರ ಮತ್ತು ದೆಹಲಿಯ ವರಿಷ್ಠರು ಗಂಭೀರವಾಗಿ ಪರಿಗಣಿಸಿ ಡಾ.ಜಿ.ಪರಮೇಶ್ವರ ರವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲೇಬೇಕು ಎಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ಆಟವಿ ಮಠದ ಶಿವಲಿಂಗ ಮಹಾ ಸ್ವಾಮೀಜಿ, ಆದಿ ಜಾಂಬವ ಮಠದ ಷಡಕ್ಷರಿ ಮಹಾ ಮುನಿ ಸ್ವಾಮೀಜಿ, ಬಸವ ಮಹಾಲಿಂಗ ಸ್ವಾಮೀಜಿ, ನವಗ್ರಹ ಲಕ್ಷ್ಮೀಶ್ವರಿ ಮಠದ ನಾಗೇಂದ್ರ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಶ್ವತ್ಥನಾರಾಯಣ, ಅರಕೆರೆ ಶಂಕರ್, ಮಹಿಳಾ ಅಧ್ಯಕ್ಷೆ ಜಯಮ್ಮ, ಮಂಜುಳಾ,  ಕವಿತಾ, ವೆಂಕಟೇಶ್, ಕೆಪಿಸಿಸಿ ಸದಸ್ಯರುಗಳಾದ ಪ್ರಸನ್ನಕುಮಾರ್, ಎ.ಡಿ.ಬಲರಾಮಯ್ಯ, ರಜಾಕ್‌ಸಾಬ್, ಮಹಾಲಿಂಗಪ್ಪ, ಬೂಚನಹಳ್ಳಿ ಬಿ.ಎಸ್.ದಿನೇಶ್, ಓಬಳರಾಜು, ಕೆ.ವಿ.ಮಂಜುನಾಥ್, ಗಣೇಶ್, ಕೆಂಪಣ್ಣ, ವಿನಯ್‌ ಕುಮಾರ್, ಗೊಂದಿಹಳ್ಳಿ ರಂಗರಾಜು, ಭೈರೇಶ್, ಕಾರ್ ಮಹೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಶಿಕ್ಷಕ ನೇಣುಬಿಗಿದು ಆತ್ಮಹತ್ಯೆಗೆ ಶರಣು!

    December 9, 2025

    ಕೊರಟಗೆರೆ | ತಾಲ್ಲೂಕು ಕುರುಬ ಸಂಘದ ನೂತನ ಅಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯ ಆಯ್ಕೆ

    December 8, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ಡಿಸೆಂಬರ್ 13—14ರಂದು ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ

    December 11, 2025

    ತುಮಕೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಅಕ್ಷಯ ಡೆವಲಪ್ ಮೆಂಟ್ ಫೌಂಡೇಷನ್ ಮಧುಗಿರಿ ಇವರ ಸಂಯುಕ್ತಾಶ್ರಯದಲ್ಲಿ ಡಿ.13 ಮತ್ತು 14…

    ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್

    December 11, 2025

    ಗುಬ್ಬಿ | ಡಿ.12ರಂದು ಅಡಿಕೆ ಬೆಳೆ: ರೈತರಿಗೆ ತರಬೇತಿ

    December 11, 2025

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.