nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗಿಗಳಿಗೆ ಮಹತ್ವದ ಮಾಹಿತಿ: ಕಾರ್ಮಿಕರ ಭವಿಷ್ಯ ನಿಧಿ: ದಾಖಲಾತಿ ವಿವರಗಳು ಇಲ್ಲಿದೆ

    December 12, 2025

    ಬೀದರ್: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ

    December 12, 2025

    ಪೊಲೀಸ್ ಠಾಣೆ ಆವರಣದಲ್ಲಿ ಕಾರಿನೊಳಗೆ ಅವಿತುಕೊಂಡ ಚಿರತೆ

    December 12, 2025
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗಿಗಳಿಗೆ ಮಹತ್ವದ ಮಾಹಿತಿ: ಕಾರ್ಮಿಕರ ಭವಿಷ್ಯ ನಿಧಿ: ದಾಖಲಾತಿ ವಿವರಗಳು ಇಲ್ಲಿದೆ
    • ಬೀದರ್: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ
    • ಪೊಲೀಸ್ ಠಾಣೆ ಆವರಣದಲ್ಲಿ ಕಾರಿನೊಳಗೆ ಅವಿತುಕೊಂಡ ಚಿರತೆ
    • ತುಮಕೂರಿನಲ್ಲಿ ಉದ್ಘಾಟನೆಗೆ ಸಿದ್ಧಗೊಂಡ ಜಿಲ್ಲಾ ಬಂಜಾರ ಭವನ
    • ಲಂಚ  ಪಡೆಯುತ್ತಿದ್ದ ವೇಳೆ ಡಿಐಸಿ ಜಂಟಿ ನಿರ್ದೇಶಕ ಲೋಕಾಯಕ್ತರ ಬಲೆಗೆ!
    • ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಅಡ್ಡಿ: ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ
    • ಚಿಕ್ಕನಾಯಕನಹಳ್ಳಿಯಲ್ಲಿ 2,800 ಕೋ.ರೂ. ಯೋಜನೆ ಕಾಮಗಾರಿ ಪ್ರಗತಿ: ಡಿ.ಕೆ.ಶಿವಕುಮಾರ್
    • ತಿಪಟೂರು  | ಡಿಸೆಂಬರ್ 16ರಂದು ಪತ್ರ ಬರಹಗಾರರಿಂದ ಬೆಳಗಾವಿ ಚಲೋ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನಲ್ಲಿ ಉದ್ಘಾಟನೆಗೆ ಸಿದ್ಧಗೊಂಡ ಜಿಲ್ಲಾ ಬಂಜಾರ ಭವನ
    Uncategorized December 12, 2025

    ತುಮಕೂರಿನಲ್ಲಿ ಉದ್ಘಾಟನೆಗೆ ಸಿದ್ಧಗೊಂಡ ಜಿಲ್ಲಾ ಬಂಜಾರ ಭವನ

    By adminDecember 12, 2025No Comments2 Mins Read
    banjara bhavana

    ತುಮಕೂರು: ಜಿಲ್ಲೆಯಲ್ಲಿರುವ ಲಂಬಾಣಿ (ಬಂಜಾರ) ಸಮುದಾಯಕ್ಕೆ ದಶಕಗಳಿಂದಲೂ ಒಂದು ಸ್ವಂತ ಸಮುದಾಯ ಭವನದ ಅಗತ್ಯವಿತ್ತು.  ಅನೇಕ ವರ್ಷಗಳ ಹೋರಾಟದ ಫಲವಾಗಿ, ತುಮಕೂರು ನಗರದ ಸರಸ್ವತಿಪುರಂನಲ್ಲಿ ಬೃಹತ್ ಮತ್ತು ಭವ್ಯವಾದ ಜಿಲ್ಲಾ ಬಂಜಾರ ಭವನ ಶನಿವಾರ ಉದ್ಘಾಟನೆಗೆ ಸಿದ್ಧಗೊಂಡಿದೆ. ಜಿಲ್ಲೆಯಲ್ಲೇ ತಮ್ಮದೇಯಾದ ಆದ ಪ್ರಾಬಲ್ಯವನ್ನು ಹೊಂದಿರುವ ಬುಡಕಟ್ಟು ಲಂಬಾಣಿ ಸಮುದಾಯ,  ಸಂಸ್ಕೃತಿ, ಕಲೆ, ಪರಂಪರೆ ಮತ್ತು ಐತಿಹಾಸಿಕ ಹೆಗ್ಗಳಿಕೆಗಳನ್ನು ಗಮನಿಸಿದಾಗ, ಇಂತಹ ಭವನವು ಬಹುಕಾಲದಿಂದ ಬೇಕಾಗಿತ್ತು.

    ಭಾರತದ ಶ್ರೀಮಂತ ಸಂಸ್ಕೃತಿಯಲ್ಲಿ ಬಂಜಾರ ಸಮುದಾಯವು ವಿಶಿಷ್ಟ ಸ್ಥಾನವಹಿಸಿದೆ. ಅವರ ಉಡುಗೆ–ತೊಡುಗೆ, ಹಾಡು–ನೃತ್ಯ, ಕಸೂತಿ ಕಲೆ ಹಾಗೂ ಸಂಗೀತ ಎಲ್ಲವೂ ಅನನ್ಯತೆ ಹೊಂದಿವೆ. ಪರಂಪರೆಯ ಮೌಲ್ಯಗಳನ್ನು ಕಾಪಾಡಿಕೊಂಡು ಬದುಕುತ್ತಿರುವ ಈ ಜನಾಂಗ, ಸಾಮಾಜಿಕ ಮತ್ತು ಆರ್ಥಿಕ ಹಿನ್ನಡೆಯ ನಡುವೆಯೂ ತನ್ನ ಗುರುತನ್ನು ಉಳಿಸಿಕೊಂಡಿದೆ. ಜಿಲ್ಲೆಯ ಬಹುತೇಕ ತಾಂಡಗಳಲ್ಲಿ ವಾಸವಾಗಿರುವ ಜನರು ರಾಜಕೀಯ ಮತ್ತು ಶೈಕ್ಷಣಿಕವಾಗಿಯೂ ಹಿಂದುಳಿದ ಸ್ಥಿತಿಯಲ್ಲಿ ಇದ್ದರೂ ಸಹ ಇತ್ತೀಚಿನ ದಿನಗಳಲ್ಲಿ ಸಂಘಟನೆ ಮತ್ತು ಜಾಗೃತಿಯ ಚಟುವಟಿಕೆಗಳು ವೇಗ ಪಡೆದಿವೆ.


    Provided by
    Provided by

    ಸ್ವಾತಂತ್ರ್ಯ ನಂತರ 75 ವರ್ಷಗಳಾದರೂ ಜಿಲ್ಲಾ ಮಟ್ಟದಲ್ಲಿ ಸಮುದಾಯಕ್ಕೆ ಭವನ ಸ್ಥಾಪಿಸಲು ಸಾಧ್ಯವಾಗಿರಲಿಲ್ಲ. 2012–13ರಲ್ಲಿ ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘದ ಮಾರ್ಗದರ್ಶನದಲ್ಲಿ ಜಿಲ್ಲಾ ಸಂಘವನ್ನು ಸ್ಥಾಪಿಸಲಾಗಿತ್ತು. ಅದರ ಪ್ರಯತ್ನದಿಂದ ಸಿಎ ನಿವೇಶನ ದೊರೆಯಿತು. ನಂತರ 2016–17ರಲ್ಲಿ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಮುಖಾಂತರ ರಾಜ್ಯ ಸರ್ಕಾರವು ಮೂರು ಕೋಟಿ ರೂ. ಅನುದಾನ ಮಂಜೂರು ಮಾಡಿತು. ಇದರೊಂದಿಗೆ ಭವ್ಯ ಬಂಜಾರ ಭವನದ ಕನಸು ನನಸಾಯಿತು.

     ಭವನದಲ್ಲಿ ಏನೇನಿದೆ..?

    ಮೂರು ಅಂತಸ್ತಿನ ಕಟ್ಟಡದಲ್ಲಿ ಒಂದು ಕಲ್ಯಾಣ ಮಂಟಪ, 13 ಕೊಠಡಿಗಳು,ಸುಸಜ್ಜಿತ ಶೌಚಾಲಯ, 200 ಜನ ಒಮ್ಮೆಲೇ ಕುಳಿತು ಊಟ ಮಾಡಲು ಭೋಜನಾಲಯ, ಹಾಗೂ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ತುಮಕೂರು ಹಾಸನ ಚಿಕ್ಕಬಳ್ಳಾಪುರ ಜಿಲ್ಲೆಗಳ ವಲಯ ಕಚೇರಿ, ಜಿಲ್ಲಾ ಬಂಜಾರ ಸಂಘದ ಕಚೇರಿಗಳನ್ನು ಹೊಂದಿದೆ, ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ಬಂಜಾರ ಭವನ ರೂಪ ಪಡೆದುಕೊಂಡಿದ್ದು ಇಲ್ಲಿನ ಅಗತ್ಯಗಳು ಹೀಗಿವೆ ಅಂಗವಿಕಲರು ಮತ್ತು ವೃದ್ಧರಿಗೆ ಅನುಕೂಲ ಆಗುವ ರೀತಿಯಲ್ಲಿ ಲಿಫ್ಟ್ ವ್ಯವಸ್ಥೆ, ಭವನದ ಮುಂಭಾಗದಲ್ಲಿ ಗಣಪತಿ ವಿಗ್ರಹ, ಜನರೇಟರ್, ಅಡುಗೆ ಮಾಡಲು ಪಾತ್ರೆ ಸಾಮಗ್ರಿಗಳು ಅಗತ್ಯವಿದೆ.

    ಯಾವ ಕಾರ್ಯಕ್ರಮಕ್ಕ ಬಳಕೆ?

    ಪ್ರಮುಖವಾಗಿ ಸರ್ಕಾರಿ ಕಾರ್ಯಕ್ರಮಗಳು, ನಿಗಮದ ಕಾರ್ಯಕ್ರಮಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಶಿಬಿರಗಳಿಗೆ, ಧಾರ್ಮಿಕ ಕಾರ್ಯಕ್ರಮಗಳಿಗೆ, ಬಂಜಾರ ಸಮುದಾಯದ ಕಸೂತಿ ಬಟ್ಟೆಗಳ ತಯಾರಿಕಾ ಶಿಬಿರಕ್ಕೆ, ಸಮುದಾಯದ ಕಾರ್ಯಕ್ರಮಗಳಿಗೆ ಅವಕಾಶ ಇದೆ.

    ಬಂಜಾರ ಸಂಘದ ಜಿಲ್ಲಾಧ್ಯಕ್ಷ  ನಾರಾಯಣ್ ನಾಯ್ಕ ಡಿ. ಮಾತನಾಡಿ,  ಬಂಜಾರ ಸಮುದಾಯದ ಬಹುದಿನಗಳ ಕನಸು ನನಸಾಗಿದೆ, ಭವನದ ನಿರ್ಮಾಣಕ್ಕೆ ಶ್ರಮಿಸಿದ ನಾಯಕರಿಗೆ ಮತ್ತು ಅಧಿಕಾರಿಗಳು ಸಮುದಾಯದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ತುಮಕೂರು ಜಿಲ್ಲಾ ಬಂಜಾರ ಲಂಬಾಣಿ ಸೇವಾಲಾಲ್ ಸೇವಾ ಸಂಘದ ಸಹಯೋಗದಲ್ಲಿ ಡಿಸೆಂಬ‌ರ್ 13ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರಸ್ವತಿಪುರಂನಲ್ಲಿ “ಜಿಲ್ಲಾ ಬಂಜಾರ ಭವನದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ”ವನ್ನು ಹಮ್ಮಿಕೊಳ್ಳಲಾಗಿದೆ.

    ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಉಪಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರ ಗೌರವ ಉಪಸ್ಥಿತಿಯಲ್ಲಿ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು.

    ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸಂಘ–ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಜನಪ್ರತಿನಿಧಿಗಳು, “ನಾಯಕ್, ಡಾವೋ, ಕಾರ್‌ ಭಾರಿ” ಮತ್ತು ಸಮುದಾಯ ಮುಖಂಡರು ತಮ್ಮ ತಾಂಡಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳಲಿದ್ದಾರೆ.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪೊಲೀಸ್ ಠಾಣೆ ಆವರಣದಲ್ಲಿ ಕಾರಿನೊಳಗೆ ಅವಿತುಕೊಂಡ ಚಿರತೆ

    December 12, 2025

    ಲಂಕೆ ಗ್ರಾಮ ಮಾದರಿ ಗ್ರಾಮ ಮಾಡಲು ಪ್ರಯತ್ನ: ಶಾಸಕ ಅನಿಲ್ ಚಿಕ್ಕಮಾದು

    December 8, 2025

    ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ

    November 29, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಉದ್ಯೋಗಿಗಳಿಗೆ ಮಹತ್ವದ ಮಾಹಿತಿ: ಕಾರ್ಮಿಕರ ಭವಿಷ್ಯ ನಿಧಿ: ದಾಖಲಾತಿ ವಿವರಗಳು ಇಲ್ಲಿದೆ

    December 12, 2025

    ತುಮಕೂರು:  ಉದ್ಯೋಗದಾತರ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ಇದರ ಹಿಂದಿನ ಪಾವತಿಗಳನ್ನು ಕ್ರಮಬದ್ಧಗೊಳಿಸಲು ನವೆಂಬರ್ 1ರಿಂದ ಏಪ್ರಿಲ್ 30ರವರೆಗೆ…

    ಬೀದರ್: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ

    December 12, 2025

    ಪೊಲೀಸ್ ಠಾಣೆ ಆವರಣದಲ್ಲಿ ಕಾರಿನೊಳಗೆ ಅವಿತುಕೊಂಡ ಚಿರತೆ

    December 12, 2025

    ತುಮಕೂರಿನಲ್ಲಿ ಉದ್ಘಾಟನೆಗೆ ಸಿದ್ಧಗೊಂಡ ಜಿಲ್ಲಾ ಬಂಜಾರ ಭವನ

    December 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.