nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ
    • 77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ
    • ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ
    • 77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು
    • “ಹೊಸ ಮಸೂದೆ ಜಾರಿ ಅಸಾಧ್ಯ; ಅದಕ್ಕೆ ಹಣ ನೀಡುವವರು ಯಾರು?”: ಕೇಂದ್ರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ
    • ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ
    • ತುಮಕೂರು: ಲಾರಿ — ಕಾರು ಮಧ್ಯೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು
    • ನಾರಾಯಣ ನೇತ್ರಾಲಯದಿಂದ ದೃಷ್ಟಿ ವಿಶೇಷ ಚೇತನರಿಗೆ ಹೊಸ ಸಾಧನ: ಎಐ ಕನ್ನಡಕ: ‘ಸ್ಮಾರ್ಟ್ ವಿಷನ್ ಗ್ಲಾಸಸ್ ಅಲ್ಟ್ರಾ’ ಲೋಕಾರ್ಪಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನಲ್ಲಿ ಉದ್ಘಾಟನೆಗೆ ಸಿದ್ಧಗೊಂಡ ಜಿಲ್ಲಾ ಬಂಜಾರ ಭವನ
    Uncategorized December 12, 2025

    ತುಮಕೂರಿನಲ್ಲಿ ಉದ್ಘಾಟನೆಗೆ ಸಿದ್ಧಗೊಂಡ ಜಿಲ್ಲಾ ಬಂಜಾರ ಭವನ

    By adminDecember 12, 2025No Comments2 Mins Read
    banjara bhavana

    ತುಮಕೂರು: ಜಿಲ್ಲೆಯಲ್ಲಿರುವ ಲಂಬಾಣಿ (ಬಂಜಾರ) ಸಮುದಾಯಕ್ಕೆ ದಶಕಗಳಿಂದಲೂ ಒಂದು ಸ್ವಂತ ಸಮುದಾಯ ಭವನದ ಅಗತ್ಯವಿತ್ತು.  ಅನೇಕ ವರ್ಷಗಳ ಹೋರಾಟದ ಫಲವಾಗಿ, ತುಮಕೂರು ನಗರದ ಸರಸ್ವತಿಪುರಂನಲ್ಲಿ ಬೃಹತ್ ಮತ್ತು ಭವ್ಯವಾದ ಜಿಲ್ಲಾ ಬಂಜಾರ ಭವನ ಶನಿವಾರ ಉದ್ಘಾಟನೆಗೆ ಸಿದ್ಧಗೊಂಡಿದೆ. ಜಿಲ್ಲೆಯಲ್ಲೇ ತಮ್ಮದೇಯಾದ ಆದ ಪ್ರಾಬಲ್ಯವನ್ನು ಹೊಂದಿರುವ ಬುಡಕಟ್ಟು ಲಂಬಾಣಿ ಸಮುದಾಯ,  ಸಂಸ್ಕೃತಿ, ಕಲೆ, ಪರಂಪರೆ ಮತ್ತು ಐತಿಹಾಸಿಕ ಹೆಗ್ಗಳಿಕೆಗಳನ್ನು ಗಮನಿಸಿದಾಗ, ಇಂತಹ ಭವನವು ಬಹುಕಾಲದಿಂದ ಬೇಕಾಗಿತ್ತು.

    ಭಾರತದ ಶ್ರೀಮಂತ ಸಂಸ್ಕೃತಿಯಲ್ಲಿ ಬಂಜಾರ ಸಮುದಾಯವು ವಿಶಿಷ್ಟ ಸ್ಥಾನವಹಿಸಿದೆ. ಅವರ ಉಡುಗೆ–ತೊಡುಗೆ, ಹಾಡು–ನೃತ್ಯ, ಕಸೂತಿ ಕಲೆ ಹಾಗೂ ಸಂಗೀತ ಎಲ್ಲವೂ ಅನನ್ಯತೆ ಹೊಂದಿವೆ. ಪರಂಪರೆಯ ಮೌಲ್ಯಗಳನ್ನು ಕಾಪಾಡಿಕೊಂಡು ಬದುಕುತ್ತಿರುವ ಈ ಜನಾಂಗ, ಸಾಮಾಜಿಕ ಮತ್ತು ಆರ್ಥಿಕ ಹಿನ್ನಡೆಯ ನಡುವೆಯೂ ತನ್ನ ಗುರುತನ್ನು ಉಳಿಸಿಕೊಂಡಿದೆ. ಜಿಲ್ಲೆಯ ಬಹುತೇಕ ತಾಂಡಗಳಲ್ಲಿ ವಾಸವಾಗಿರುವ ಜನರು ರಾಜಕೀಯ ಮತ್ತು ಶೈಕ್ಷಣಿಕವಾಗಿಯೂ ಹಿಂದುಳಿದ ಸ್ಥಿತಿಯಲ್ಲಿ ಇದ್ದರೂ ಸಹ ಇತ್ತೀಚಿನ ದಿನಗಳಲ್ಲಿ ಸಂಘಟನೆ ಮತ್ತು ಜಾಗೃತಿಯ ಚಟುವಟಿಕೆಗಳು ವೇಗ ಪಡೆದಿವೆ.


    Provided by
    Provided by

    ಸ್ವಾತಂತ್ರ್ಯ ನಂತರ 75 ವರ್ಷಗಳಾದರೂ ಜಿಲ್ಲಾ ಮಟ್ಟದಲ್ಲಿ ಸಮುದಾಯಕ್ಕೆ ಭವನ ಸ್ಥಾಪಿಸಲು ಸಾಧ್ಯವಾಗಿರಲಿಲ್ಲ. 2012–13ರಲ್ಲಿ ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘದ ಮಾರ್ಗದರ್ಶನದಲ್ಲಿ ಜಿಲ್ಲಾ ಸಂಘವನ್ನು ಸ್ಥಾಪಿಸಲಾಗಿತ್ತು. ಅದರ ಪ್ರಯತ್ನದಿಂದ ಸಿಎ ನಿವೇಶನ ದೊರೆಯಿತು. ನಂತರ 2016–17ರಲ್ಲಿ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಮುಖಾಂತರ ರಾಜ್ಯ ಸರ್ಕಾರವು ಮೂರು ಕೋಟಿ ರೂ. ಅನುದಾನ ಮಂಜೂರು ಮಾಡಿತು. ಇದರೊಂದಿಗೆ ಭವ್ಯ ಬಂಜಾರ ಭವನದ ಕನಸು ನನಸಾಯಿತು.

     ಭವನದಲ್ಲಿ ಏನೇನಿದೆ..?

    ಮೂರು ಅಂತಸ್ತಿನ ಕಟ್ಟಡದಲ್ಲಿ ಒಂದು ಕಲ್ಯಾಣ ಮಂಟಪ, 13 ಕೊಠಡಿಗಳು,ಸುಸಜ್ಜಿತ ಶೌಚಾಲಯ, 200 ಜನ ಒಮ್ಮೆಲೇ ಕುಳಿತು ಊಟ ಮಾಡಲು ಭೋಜನಾಲಯ, ಹಾಗೂ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ತುಮಕೂರು ಹಾಸನ ಚಿಕ್ಕಬಳ್ಳಾಪುರ ಜಿಲ್ಲೆಗಳ ವಲಯ ಕಚೇರಿ, ಜಿಲ್ಲಾ ಬಂಜಾರ ಸಂಘದ ಕಚೇರಿಗಳನ್ನು ಹೊಂದಿದೆ, ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ಬಂಜಾರ ಭವನ ರೂಪ ಪಡೆದುಕೊಂಡಿದ್ದು ಇಲ್ಲಿನ ಅಗತ್ಯಗಳು ಹೀಗಿವೆ ಅಂಗವಿಕಲರು ಮತ್ತು ವೃದ್ಧರಿಗೆ ಅನುಕೂಲ ಆಗುವ ರೀತಿಯಲ್ಲಿ ಲಿಫ್ಟ್ ವ್ಯವಸ್ಥೆ, ಭವನದ ಮುಂಭಾಗದಲ್ಲಿ ಗಣಪತಿ ವಿಗ್ರಹ, ಜನರೇಟರ್, ಅಡುಗೆ ಮಾಡಲು ಪಾತ್ರೆ ಸಾಮಗ್ರಿಗಳು ಅಗತ್ಯವಿದೆ.

    ಯಾವ ಕಾರ್ಯಕ್ರಮಕ್ಕ ಬಳಕೆ?

    ಪ್ರಮುಖವಾಗಿ ಸರ್ಕಾರಿ ಕಾರ್ಯಕ್ರಮಗಳು, ನಿಗಮದ ಕಾರ್ಯಕ್ರಮಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಶಿಬಿರಗಳಿಗೆ, ಧಾರ್ಮಿಕ ಕಾರ್ಯಕ್ರಮಗಳಿಗೆ, ಬಂಜಾರ ಸಮುದಾಯದ ಕಸೂತಿ ಬಟ್ಟೆಗಳ ತಯಾರಿಕಾ ಶಿಬಿರಕ್ಕೆ, ಸಮುದಾಯದ ಕಾರ್ಯಕ್ರಮಗಳಿಗೆ ಅವಕಾಶ ಇದೆ.

    ಬಂಜಾರ ಸಂಘದ ಜಿಲ್ಲಾಧ್ಯಕ್ಷ  ನಾರಾಯಣ್ ನಾಯ್ಕ ಡಿ. ಮಾತನಾಡಿ,  ಬಂಜಾರ ಸಮುದಾಯದ ಬಹುದಿನಗಳ ಕನಸು ನನಸಾಗಿದೆ, ಭವನದ ನಿರ್ಮಾಣಕ್ಕೆ ಶ್ರಮಿಸಿದ ನಾಯಕರಿಗೆ ಮತ್ತು ಅಧಿಕಾರಿಗಳು ಸಮುದಾಯದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ತುಮಕೂರು ಜಿಲ್ಲಾ ಬಂಜಾರ ಲಂಬಾಣಿ ಸೇವಾಲಾಲ್ ಸೇವಾ ಸಂಘದ ಸಹಯೋಗದಲ್ಲಿ ಡಿಸೆಂಬ‌ರ್ 13ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರಸ್ವತಿಪುರಂನಲ್ಲಿ “ಜಿಲ್ಲಾ ಬಂಜಾರ ಭವನದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ”ವನ್ನು ಹಮ್ಮಿಕೊಳ್ಳಲಾಗಿದೆ.

    ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಉಪಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರ ಗೌರವ ಉಪಸ್ಥಿತಿಯಲ್ಲಿ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು.

    ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸಂಘ–ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಜನಪ್ರತಿನಿಧಿಗಳು, “ನಾಯಕ್, ಡಾವೋ, ಕಾರ್‌ ಭಾರಿ” ಮತ್ತು ಸಮುದಾಯ ಮುಖಂಡರು ತಮ್ಮ ತಾಂಡಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳಲಿದ್ದಾರೆ.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ

    December 21, 2025

    ಪೊಲೀಸ್ ಠಾಣೆ ಆವರಣದಲ್ಲಿ ಕಾರಿನೊಳಗೆ ಅವಿತುಕೊಂಡ ಚಿರತೆ

    December 12, 2025

    Leave A Reply Cancel Reply

    Our Picks

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    ಗುಬ್ಬಿ: ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ವತಿಯಿಂದ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾವಿರಾರು ಹಿಂದೂ ಸಮಾಜದ ಮುಖಂಡರುಗಳು…

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026

    77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು

    January 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.