ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಯಸಂದ್ರ ಗ್ರಾಮದಲ್ಲಿ “ಗ್ರಾಮಒನ್” ನೂತನ ನಾಗರಿಕ ಸೇವಾ ಕೇಂದ್ರಕ್ಕೆ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಮಂಗಳಗೌರಮ್ಮಹೊನ್ನಪ್ಪನವರ, ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಸತೀಶ್ ಕುಮಾರ್, ನಾಡಕಚೇರಿ ಉಪತಹಶೀಲ್ದಾರ್ ಗಿರೀಶ್ ರವರ ಅಮೃತಹಸ್ತದಿಂದ ಚಾಲನೆ ನೀಡಲಾಯಿತು.
ಈ ವೇಳೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್ ಮಾತನಾಡಿ, ದೇಶದಲ್ಲಿ ಯಾವುದೇ ಪಕ್ಷದ ಸರ್ಕಾರಗಳು ಇರಲಿ, ಜನಪರ ಯೋಜನೆಗಳನ್ನು ಜಾರಿಗೆ ತರುತ್ತೀವೆ. ಎಲ್ಲಾ ಸರ್ಕಾರಗಳು ಸಹ ದೇಶದ ಕ್ರಿಯಾಶೀಲತೆ ಸರ್ಕಾರಗಳಾಗಿದ್ದು, ಗ್ರಾಮೀಣ ಪ್ರದೇಶಗಳಿಗೆ ಹಲವು ರೀತಿಯ ಅಭಿವೃದ್ಧಿ ಯೋಜನೆಗಳನ್ನು ರೂಪಿಸುತ್ತೀವೆ. ಗ್ರಾಮ ಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರ ತೆರೆದು, ಇದೀಗ ಕಂದಾಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಗ್ರಾಮ ಒನ್ ನಾಗರೀಕ ಸೇವಾ ಕೇಂದ್ರವನ್ನು ಪ್ರಾರಂಭಿಸಿದೆ.
ಈಗಾಗಲೇ ನೆಮ್ಮದಿ ಕೇಂದ್ರವನ್ನು ಸ್ಥಾಪಿಸಿ 35 ಸರ್ಕಾರಿ ಸೇವೆಗಳನ್ನು ನೀಡುತ್ತಿದ್ದು, ಇದೀಗ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮಒನ್ ಕೇಂದ್ರಗಳನ್ನು ನೀಡುವುದರ 56 ಇಲಾಖೆಯ 750ಕ್ಕೂ ಹೆಚ್ಚಿನ ಸರ್ಕಾರಿ ಸೇವೆಗಳನ್ನು ನೀಡುವುದರ ಮೂಲಕ ಗ್ರಾಮೀಣ ಪ್ರದೇಶದ ಜನತೆಗೆ ಹತ್ತಿರವಾಗಿ ಸೇವೆಯನ್ನು ಮಾಡುವುದು ಸ್ಪಷ್ಟಪಡಿಸಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಲು ಮನವಿ ಮಾಡಿದರು.
ಹೋಬಳಿಯ ರಾಜಸ್ವ ನಿರೀಕ್ಷಕ ಪರಮೇಶ್ ಮಾತನಾಡಿ, ಸರ್ಕಾರವು ಜಾರಿಗೆ ತಂದಿರುವ ಹಲವು ಜನಪರ ಯೋಜನೆಗಳಲ್ಲಿ ಮುಂದುವರೆದು ಈಗ ಗ್ರಾಮಮಟ್ಟದಲ್ಲಿ ಗ್ರಾಮಒನ್ ಸೇವಾ ಕೇಂದ್ರವನ್ನು ಪ್ರಾರಂಭಿಸಿದೆ. ಇಂತಹ ಸೇವೆಗಳು ಸಾರ್ವಜನಿಕರಿಗೆ ಅನುಕೂಲವಾಗಲಿದ್ದು, ಸೇವಾಕೇಂದ್ರದ ಕಾರ್ಯನಿರ್ವಾಹಕರು ಮುಖ್ಯವಾಗಿ ಯಾವುದೇ ಸರಕಾರಿ ಸೇವೆಗಳ ಅರ್ಜಿಯನ್ನು ಸಲ್ಲಿಸುವ ಮೊದಲು ಅರ್ಜಿಗಳಿಗೆ ನೀಡಿರುವ ಮೂಲ ಅಧಿಕೃತ ದಾಖಲಾತಿಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಮೂಲ ದಾಖಲಾತಿಗಳನ್ನು ಪರಿಶೀಲಿಸಿದ ನಂತರವೇ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಸಂದರ್ಭಗಳಲ್ಲಿ ಯಾವುದೇ ಗೊಂದಲಗಳು ಉಂಟಾದಾಗ, ಸಂಬಂಧಪಟ್ಟ ಕಂದಾಯ ಇಲಾಖೆ ಅಧಿಕಾರಿಗಳನ್ನು, ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳನ್ನು ಕೂಡಲೇ ಸಂಪರ್ಕಿಸಿ ಮಾಹಿತಿಗಳನ್ನು ಪಡೆದುಕೊಳ್ಳಬೇಕು. ಸ್ಥಳೀಯವಾಗಿ ನಮ್ಮ ಇಲಾಖೆ ಗ್ರಾಮಒನ್ ಸೇವಾ ಕೇಂದ್ರಕ್ಕೆ ಪ್ರತಿ ಸಂದರ್ಭದಲ್ಲೂ ಸಹ ಸರ್ಕಾರಿ ಸೇವೆಗಳ ಕುರಿತು ಮಾಹಿತಿಗಳನ್ನು ನೀಡುವುದರ ಮೂಲಕ ಸಹಕರಿಸುವುದಾಗಿ ಸಲಹೆ ನೀಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ರಾದ ಶ್ರೀಮತಿಮಂಗಳಗೌರಮ್ಮ ಮತ್ತು ಉಪ ತಹಶೀಲ್ದಾರ್ ಗಿರೀಶ್ ರವರು ನೂತನ ಸೇವಾ ಕೇಂದ್ರಕ್ಕೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಿಗರಾದ ಅಣ್ಣಪ್ಪ. ದಿಲೀಪ್. ಸಿಬ್ಬಂದಿಗಳಾದ ಗಂಗಾಧರ್ ಸಿಬ್ಬಂದಿ ವರ್ಗ. ಗ್ರಾ.ಪಂ ಪಿ.ಡಿ.ಒ. ಶ್ರೀನಿವಾಸಮೂರ್ತಿ. ಸಿಬ್ಬಂದಿ ವರ್ಗ. ಮತ್ತು ಗ್ರಾಮದ ಹಿರಿಯ ಮುಖಂಡರಾದ ಅಬೂಬಕರ್. ಪ್ರಕಾಶ್. ಸುಬ್ರಮಣ್ಯ. ಪಾರ್ಥಸಾರಥಿ. ಹೊನ್ನಪ್ಪ. ತಬ್ರೇಜ್ ಸೇರಿದಂತೆ ಸೇವಾಕೇಂದ್ರದ ಕಾರ್ಯನಿರ್ವಾಹಕ ಮಹಮ್ಮದ್ ಜುಬೇರ್ ಮುಂತಾದ ಗಣ್ಯರು ಉಪಸ್ಥಿತರಿದ್ದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ರಹಮತ್ ಉಲ್ಲಾ ರವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
ವರದಿ: ಸಚಿನ್ ಮಾಯಸಂದ್ರ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB