nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    • ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಟಕ, ಬದುಕನ್ನು ಕಟ್ಟಿಕೊಡುವ ಜೊತೆಗೆ ಸಾಮರಸ್ಯ ಬೆಳೆಸುತ್ತದೆ: ವೈ.ಎಂ.ಪುಟ್ಟಣ್ಣಯ್ಯ
    ಜಿಲ್ಲಾ ಸುದ್ದಿ December 19, 2025

    ನಾಟಕ, ಬದುಕನ್ನು ಕಟ್ಟಿಕೊಡುವ ಜೊತೆಗೆ ಸಾಮರಸ್ಯ ಬೆಳೆಸುತ್ತದೆ: ವೈ.ಎಂ.ಪುಟ್ಟಣ್ಣಯ್ಯ

    By adminDecember 19, 2025No Comments2 Mins Read
    saragur

    ಸರಗೂರು:  ಸಂಗೀತ, ಕಲೆ, ನೃತ್ಯ ಸೇರಿದಂತೆ ನಾನಾ ಪ್ರಕಾರಗಳನ್ನು ಒಳಗೊಂಡಿರುವ ನಾಟಕ, ಬದುಕನ್ನು ಕಟ್ಟಿಕೊಡುವ ಜತೆಗೆ ಸಾಮರಸ್ಯ ಬೆಳೆಸುತ್ತದೆ ಎಂದು  ರಂಗಭೂಮಿ ಕಲಾವಿದ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೈ.ಎಂ.ಪುಟ್ಟಣ್ಣಯ್ಯ ಅಭಿಪ್ರಾಯಪಟ್ಟರು.

    ಪಟ್ಟಣದ ಜೆಎಸ್‌ ಎಸ್‌ ಶಿವರಾತ್ರಿ ಶಿವಾನುಭವ ಮಂಗಳ ಮಂಟಪದಲ್ಲಿ ಜೆಎಸ್‌ ಎಸ್‌ ಕಲಾಮಂಟಪದಿಂದ ಶುಕ್ರವಾರದಂದು ನಡೆದ ಜೆಎಸ್‌ ಎಸ್‌ ರಂಗೋತ್ಸವ ಸಮಾರೋಪ ಸಮಾರಂಭದಲ್ಲಿ ಶ್ರೀ ಗಳ ಪೋಟೋ ಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.


    Provided by
    Provided by

    ನಾಟಕ ಒಂದು ಸಂಕೀರ್ಣ ಕಲೆಯಾಗಿದ್ದು, ಅದಕ್ಕೆ ಜಾತಿಭೇದದ ಅಡ್ಡಗೋಡೆಗಳಿಲ್ಲ. ಅದು ನಮ್ಮ ಬದುಕನ್ನು ಕಟ್ಟಿಕೊಡುವುದರ ಜತೆಗೆ ದೂರವಾಗಿರುವ ಮನಸ್ಸುಗಳನ್ನು ಒಂದು ಗೂಡಿಸಲಿದೆ. ನಾವು ಹೇಗೆ ಮಾತನಾಡಬೇಕು ಎಂಬ ಭಾಷೆ ಕಲಿಸಿಕೊಡುತ್ತದೆ. ನೀವು ಪ್ರಸ್ತುತ ಗಳಿಸುತ್ತಿರುವ ಶಿಕ್ಷ ಣ ಅಂಕಗಳಿಕೆಗೆ ಮಾತ್ರ ಸೀಮಿತವಾಗಿದ್ದು, ಅದು ಪೂರ್ಣ ಸಾಧನೆಯಲ್ಲ. ನಾಟಕ, ನೃತ್ಯ ಸೇರಿದಂತೆ ಸುಮಾರು 64 ಕಲೆಗಳಲ್ಲಿ ಯಾವುದಾದರೂ ಒಂದು ಅಥವಾ ಎರಡರಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಾಧನೆ ಮಾಡಬೇಕು. ಹಾಗಾದಾಗ ಜೀವನದಲ್ಲಿ ಪರಿಪೂರ್ಣತೆ ದೊರೆಯುತ್ತದೆ ಎಂದರು.

    ನಾಟಕಾಭಿನಯ ಭಾಷೆಯ ಸ್ಪಷ್ಟ ಉಚ್ಛಾರಣೆಗೆ ಅವಕಾಶ ಮಾಡಿಕೊಡಲಿದ್ದು, ಜ್ಞಾನ, ಬೌದ್ಧಿಕ, ದೈವಿಕ ಹಾಗೂ ವ್ಯಕ್ತಿತ್ವ ವಿಕಸನ ಮಾಡುವುದರಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಶಾಲಾ ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮಗಳು ಆಗಿಂದಾಗ್ಗೆ ನಡೆಯುತ್ತಿದ್ದರೆ, ಮಕ್ಕಳಲ್ಲಿ ರಂಗಾಸಕ್ತಿ ಬೆಳೆಯಲಿದೆ ಎಂದರು.

    ಅಧ್ಯಕ್ಷತೆ ವಹಿಸಿದ್ದ ಜೆಎಸ್ ಎಸ್ ಸಂಸ್ಥೆಗಳ ಅಧ್ಯಕ್ಷೆ ಹಾಗೂ ಸ್ನೇಹ ಸ್ತ್ರೀ ಸಮಾಜ ಅಧ್ಯಕ್ಷೆ ಸುಧಾ ಮೃತ್ಯುಂಜಯಪ್ಪ ಮಾತನಾಡಿ ಶಿಕ್ಷ ಣ ಕ್ಷೇತ್ರದಲ್ಲಿ ಕೆಲಸಮಾಡುವವರಿಗೆ ರಂಗಭೂಮಿ ಪೂರಕವಾಗಿದ್ದು, ಬೋಧನೆ ಮಾಡುವ ಜತೆಗೆ ಅಭಿನಯ ಮಾಡುವ ಸಾಮರ್ಥ್ಯ‌ ಲಭ್ಯವಾಗಲಿದೆ ಎಂದು ತಿಳಿಸಿದರು.

    ಕಲೆಗಳನ್ನು ಅಳವಡಿಸಿಕೊಂಡರೆ ಜೀವನದಲ್ಲಿ ಪರಿಪೂರ್ಣತೆ ತುಂಬಿ ವ್ಯಕ್ತಿತ್ವವನ್ನು ರೂಪಿಸುತ್ತವೆ, ಒಮ್ಮೆ ರಂಗಭೂಮಿಗೆ ಕಾಲಿಟ್ಟರೆ ಅದು ಆತ್ಮಸ್ಥೈರ್ಯವನ್ನು ತುಂಬಿ, ಕೌಶಲ್ಯತೆಯನ್ನು ಕಲಿಸುತ್ತದೆ, ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇರುತ್ತದೆ ಅದನ್ನು ಹೊರತೆಗೆಯಲು ಇಂತಹ ವೇದಿಕೆಗಳು ಅತ್ಯಗತ್ಯ ಎಂದರು.

    ಅಭಾವೀಲಿಂ ಮಹಾಸಭಾ ಮಾಜಿ ಅಧ್ಯಕ್ಷ ಹಾಗೂ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ ಭಕ್ತ ಬಳಗ ಗೌರವಾಧ್ಯಕ್ಷ ದಡದಹಳ್ಳಿ ಶಿವರಾಜಪ್ಪ, ಮುಖಾಮುಖಿ ಮಾಡಿ ಚರ್ಚೆ ನಡೆಸಿ, ಜನರ ಮನಸ್ಸಿನ ಮೇಲೆ, ಪ್ರಭಾವ ಬೀರಿ, ಒಳ್ಳೆಯದನ್ನು ಪ್ರಚುರಪಡಿಸುತ್ತದೆ. ಆದ್ದರಿಂದಲೇ ಕಲೆಗಳಲ್ಲಿ ರಂಗಭೂಮಿಗೆ ಪ್ರಮುಖ ಸ್ಥಾನವಿದೆ. ಕಲಾ ಮಂಟಪನ್ನು ಸ್ಥಾಪಿಸಿ, ವಿದ್ಯಾರ್ಥಿ ಜೀವನದಲ್ಲಿ ರಂಗಭೂಮಿ ಕಲೆಯನ್ನು ಕಲಿಸಿ, ಅದನ್ನು ಉಳಿಸಿ, ಬೆಳಸುತ್ತಿರುವ ಜೆಎಸ್‌ಎಸ್ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.

    ಯಾವುದೇ ಕ್ಷೇತ್ರದಲ್ಲಿ ಸಾಗಿದರೂ ಅಲ್ಲಿ ಪ್ರಾಮಾಣಿಕತೆ ಇರಬೇಕು, ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆದಾಗ ಪ್ರತಿಭೆಗಳು ಹೊರಬರುತ್ತವೆ, ವಿದ್ಯಾರ್ಥಿಗಳು ಸಹ ಇಂತಹ ವೇದಿಕೆಯನ್ನು ಸದುಪಯೋಗಪಡಿಸಿಕೊಂಡು ಮುಂದೆ ಬರಬೇಕು ಎಂದರು.

    ಪ್ರಾಸ್ತಾವಿಕ ಭಾಷಣ ರಂಗೋತ್ಸವ ಸಂಯೋಜಕ ಚಂದ್ರಶೇಖರ್ ಅಚಾರ್  ಮಾತನಾಡಿ, ದೇಶದಲ್ಲಿ ಶಿಕ್ಷಣದ ಜೊತೆ ರಂಗಭೂಮಿ ಶಿಕ್ಷಣವನ್ನು ಕಲಿಸುವಂತಹ ಸಂಸ್ಥೆ ಎಂದರೆ ಅದು ಜೆಎಸ್‌ ಎಸ್ ಸಂಸ್ಥೆ, ರಂಗಭೂಮಿಯಲ್ಲಿ ತೊಡಗಿಸಿಕೊಂಡವರು ಉನ್ನತ ಸ್ಥಾನಕ್ಕೇರಿದ್ದಾರೆ, ಜೊತೆಗೆ ಸಾಧನೆ ಮಾಡಿರುವವರು ಸಹ ರಂಗಭೂಮಿಯಿಂದ ಹೋದವರೆ, ಆದ್ದರಿಂದಲೇ ರಂಗಭೂಮಿ ಭೂಮಿಯಷ್ಟೇ ತೂಕದದ್ದು ಎಂದರು.

    ಈ ಸಂದರ್ಭದಲ್ಲಿ ಅಭಾವೀಲಿಂ ಮಹಾಸಭಾ ಮಾಜಿ ಅಧ್ಯಕ್ಷ ಹಾಗೂ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗವರ ಭಕ್ತ ಬಳಗ ಗೌರವಾಧ್ಯಕ್ಷ ದಡದಹಳ್ಳಿ ಶಿವರಾಜಪ್ಪ, ಬಸವ ಬಳಗ ತಾಲೂಕು ಘಟಕ ಅಧ್ಯಕ್ಷ ಹಂಚೀಪುರ ಗಣಪತಿ, ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗವರ ಭಕ್ತ ಬಳಗ ಅಧ್ಯಕ್ಷ ಮಹೇಶ್ ಮನುಗನಹಳ್ಳಿ, ಜೆಎಸ್ ಎಸ್ ಕಾಲೇಜು ಪ್ರಾಂಶುಪಾಲ ಮಹದೇವಸ್ವಾಮಿ, ಮುಖ್ಯ ಶಿಕ್ಷಕ ಜಯಣ್ಣ, ರಂಗೋತ್ಸವ ಸಂಯೋಜಕ ಚಂದ್ರಶೇಖರ್ ಅಚಾರ್, ಶಾಲಾ ಕಾಲೇಜು ಮಕ್ಕಳು ಹಾಗೂ ಶಿಕ್ಷಕರು ಇನ್ನೂ ಮುಖಂಡರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

    February 17, 2026

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ

    February 16, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ನವದೆಹಲಿ: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ (India AI Impact Expo 2026)…

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.