ಮಧುಗಿರಿ: ಮಧುಗಿರಿ ತಾಲ್ಲೂಕು ಕಂದಾಯ ಇಲಾಖೆ, ವತಿಯಿಂದ ದೊಡ್ಡೇರಿ ಹೋಬಳಿಯ ಸಿಂಗಾರವತನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ “ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆ” ಕಾರ್ಯಕ್ರಮವನ್ನು ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ವಿ.ವೀರಭದ್ರಯ್ಯ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಸರ್ಕಾರದ ಸವಲತ್ತು ಹಾಗೂ ಸೌಲಭ್ಯಗಳನ್ನು ಗ್ರಾಮದ ಸಾರ್ವಜನಿಕರು ಪಡೆಯುವ ಕಾರ್ಯಕ್ರಮವಾಗಿದೆ. ವೃದ್ದಾಪ್ಯಾ ವೇತನ, ವಿಶೇಷ ಚೇತನ ವೇತನ, ಮನಸ್ವಿನಿ, ವಿಧವಾ ವೇತನಗಳನ್ನು ಅರ್ಹ ಪಲಾನುಭವಿಗಳಿಗೆ ತಲುಪಿಸುವ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರಿಂದ ಗ್ರಾಮದ ರೈತರ, ಸಾರ್ವಜನಿಕರ ,ಸಾರಿಗೆ, ಶಾಲೆಗಳ ನಿರ್ಮಾಣ ಹಾಗೂ ID ಹಳ್ಳಿಯಲ್ಲಿ ನೂತನ ಪೊಲೀಸ್ ಠಾಣೆ ನಿರ್ಮಾಣ ಸೇರಿದಂತೆ, ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ ಕಾರ್ಯ ಕ್ರಮವಾಗಿದೆ. ID ಹಳ್ಳಿ ಹೋಬಳಿ ಅಭಿವೃದ್ದಿಗೆ 46 ಕೋಟಿ ಅನುದಾನ ಸೇರಿದಂತೆ ತಾಲೂಕಿನ ಸಮಗ್ರ ಅಭಿವೃದ್ಧಿಗೆ ರೂಪು ರೇಷೆ ಸಿದ್ದಪಡಿಸಲಾಗಿದೆ. ಸರ್ಕಾರದ ಎಲ್ಲಾ ಸವಲತ್ತುಗಳನ್ನು “ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಈ ಕಾರ್ಯಕ್ರಮ ಹೊಂದಿದೆ ಎಂದು ತಿಳಿಸಿದರು.
ಇದೇ ವೇಳೆ ಮಾನ್ಯ ಶಾಸಕರು ID ಹಳ್ಳಿ ಹೋಬಳಿಯ “ಗರಣಿ ಪಂಚಾಯತಿಯಲ್ಲಿ ಶಾಸಕರ ಅನುದಾನದಿಂದ 3 ಲಕ್ಷ ರೂ. ನೀಡುವ ಮೂಲಕ ಗರಣಿ ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡ ನಿರ್ಮಾಣ ಅಭಿವೃದ್ಧಿ ಸೇರಿದಂತೆ ತಾಲೂಕಿನ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವುದಾಗಿ ತಿಳಿಸಿದರು.
“ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆ” ಕಾರ್ಯಕ್ರಮದಲ್ಲಿ ಮಧುಗಿರಿ ತಾಲ್ಲೂಕಿನ ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ದೊಡ್ಡೇರಿ ಹೋಬಳಿ ಕಾರ್ಪೆನಾಹಳ್ಳಿ ಶಾಲೆಯ ಮಕ್ಕಳು ರಾಜ್ಯ ಮಟ್ಟಕ್ಕೆ ಅಯ್ಕೆಯಾದ ಹಿನ್ನಲೆಯಲ್ಲಿ “ಶಾಲೆ ಮಕ್ಕಳನ್ನು ಇದೇ ವೇಳೆ ಶಾಸಕರು ಅಭಿನಂದಿಸಿ ಸನ್ಮಾನಿಸಿದರು.
ವರದಿ: ದೊಡ್ಡೇರಿ ಮಹಾಲಿಂಗಯ್ಯ, ಮಧುಗಿರಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB