nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ

    December 27, 2025

    ಸರಗೂರು:  SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ

    December 27, 2025

    ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು

    December 27, 2025
    Facebook Twitter Instagram
    ಟ್ರೆಂಡಿಂಗ್
    • ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ
    • ಸರಗೂರು:  SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ
    • ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು
    • ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ
    • ನಮ್ಮೂರ ಶಾಲೆ ಉಳಿಸಿ:  ಎಐಡಿಎಸ್‌ ಓ, ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ
    • “ಕರಿಕಾಡ” ಚಿತ್ರದ “ಕಬ್ಬಿನ ಜಲ್ಲೆ” ಹಾಡಿಗೆ ವೀಕ್ಷಕ ಫಿದಾ, 2026 ಫೆಬ್ರವರಿ 6ಕ್ಕೆ ವಿಶ್ವಾದ್ಯಂತ ರಿಲೀಸ್
    • ವಿದ್ಯಾರ್ಥಿಗಳ ಕಡೆ ಕುವೆಂಪು ಭಾವಗೀತೆಗಳ ನಡೆ: ಕುವೆಂಪು ಗೀತೆಗಳಲ್ಲಿ ಮಾನವೀಯತೆ ಸ್ಪರ್ಶ
    • ಕುಣಿಗಲ್‌ ನಲ್ಲಿ ಕಸಾಪ ಭವನದ ಗ್ರಂಥಾಲಯ ಲೋಕಾರ್ಪಣೆ:  “ರಾಜಕೀಯ ಸ್ವಾರ್ಥಕ್ಕೆ ಧರ್ಮ, ಜಾತಿಗಳ ಕಂದಕ ಸೃಷ್ಟಿ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಣಿಗಲ್‌ ನಲ್ಲಿ ಕಸಾಪ ಭವನದ ಗ್ರಂಥಾಲಯ ಲೋಕಾರ್ಪಣೆ:  “ರಾಜಕೀಯ ಸ್ವಾರ್ಥಕ್ಕೆ ಧರ್ಮ, ಜಾತಿಗಳ ಕಂದಕ ಸೃಷ್ಟಿ”
    ಕುಣಿಗಲ್ December 27, 2025

    ಕುಣಿಗಲ್‌ ನಲ್ಲಿ ಕಸಾಪ ಭವನದ ಗ್ರಂಥಾಲಯ ಲೋಕಾರ್ಪಣೆ:  “ರಾಜಕೀಯ ಸ್ವಾರ್ಥಕ್ಕೆ ಧರ್ಮ, ಜಾತಿಗಳ ಕಂದಕ ಸೃಷ್ಟಿ”

    By adminDecember 27, 2025No Comments2 Mins Read
    kunigal

    ಕುಣಿಗಲ್: ಇಂದಿನ ರಾಜಕಾರಣವು ತಮ್ಮ ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಧರ್ಮ, ಧರ್ಮಗಳ ನಡುವೆ, ಜಾತಿ, ಜಾತಿಗಳ ನಡುವೆ ಎತ್ತಿಕಟ್ಟುವಂತಹ ನೀಚ ಕೆಲಸ ಮಾಡಲಾಗುತ್ತಿದೆ, ಇದಕ್ಕೆ ಕುಮ್ಮಕ್ಕು ನೀಡಿದರೆ ಡಾ. ಬಿ.ಆರ್. ಅಂಬೇಡ್ಕರ್ ಕೊಟ್ಟ ಸಂವಿಧಾನ ಇನ್ನು ಹತ್ತು ವರ್ಷದಲ್ಲಿ ಇರುವುದಿಲ್ಲ ಎಂದು ಸಾಹಿತಿ ಚಾಣಗೆರೆ ವೆಂಕಟರಾಮಯ್ಯ ಕಳವಳ ವ್ಯಕ್ತಪಡಿಸಿದರು.

    ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಗ್ರಂಥಾಲಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


    Provided by
    Provided by

    ಡಾ.ಬಿ.ಆರ್. ಅಂಬೇಡ್ಕರ್, ಪ್ರಥಮ ಪ್ರಧಾನಿ ನೆಹರು ಅವರು ದೇಶವು ಜಾತ್ಯತೀತ, ಧರ್ಮತೀತ ದೇಶವಾಗಬೇಕೆಂದು ಸಂವಿಧಾನ ಕೊಟ್ಟರು, ಡಾ. ಅಂಬೇಡ್ಕರ್ ಅವರು ಸಂವಿಧಾನ ನೀಡದಿದ್ದರೆ ಈ ದೇಶ ಉಳಿಯುತ್ತಿರಲಿಲ್ಲ, ಶೂದ್ರರು, ದಲಿತರು, ಶ್ರಮಿಕರು ಬದುಕಲು ಸಾಧ್ಯವಿರುತ್ತಿರಲಿಲ್ಲ. ಇಂದು ಮನುವಾದ, ಮನುಸ್ಮೃತಿಯನ್ನು ತಂದು ಆ ಜಾಗಕ್ಕೆ ಕೂರಿಸಲು ಪ್ರಯತ್ನಿಸಲಾಗುತ್ತಿದೆ, ಹಾಗೇನಾದರೂ ಆ ಪವಿತ್ರ ಸ್ಥಳಕ್ಕೆ ಮನುವಾದಿಗಳನ್ನು ಕೂರಿಸಿದ್ದೇ ಆದಲ್ಲಿ ಎರಡು ವರೆ ಸಾವಿರಗಳ ವರ್ಷದ ಹಿಂದಕ್ಕೆ ಹೋಗಲಿದ್ದೇವೆ ಎಂದು ಎಚ್ಚರಿಸಿದರು.

    ಕನ್ನಡ ಉಳಿದಿರುವುದು ಹಳ್ಳಿಗಳಿಂದ: ಒಂದು ಕಾಲದಲ್ಲಿ ಕುಣಿಗಲ್ ಮತ್ತು ನಾಗಮಂಗಲ ತಾಲೂಕು ಎಂದರೇ ಬೆಂಗಳೂರಿನ ಜನ ತಾತ್ಸಾರದಿಂದ ಕಾಣುತ್ತಿದ್ದರು, ಆದರೆ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ ಉಳಿದಿರುವುದು ಕುಣಿಗಲ್, ಮಾಗಡಿ, ಮದ್ದೂರು, ಮಂಡ್ಯ, ತುಮಕೂರು, ನಾಗಮಂಗಲ ತಾಲೂಕುಗಳ ಗ್ರಾಮೀಣ ಭಾಗದಲ್ಲಿ ಎಂದು ಹೇಳಿದರು.

    ಜಿಲ್ಲಾ ನಿಯೋಜಿತ ಸಾಹಿತ್ಯ ಸಮ್ಮೇಳನಾಧ್ಯಕ್ಷ ಕರಿಗೌಡ ಬೀಚನಹಳ್ಳಿ ಮಾತನಾಡಿ, ಗ್ರಂಥಾಲಯಗಳಿಗೆ ದೇಶದಲ್ಲಿ ಬಹಳಷ್ಟು ಶಕ್ತಿ ಇದೆ, ಪ್ರಪಂಚವನ್ನು ಬೆಳಗಲು ಸೂರ್ಯ ಬೇಕು, ವ್ಯಕ್ತಿ ಬದುಕು ರೂಪಿಸಿಕೊಳ್ಳಲು ಪುಸ್ತಕಗಳು ಅವಶ್ಯಕ, ಈ ನಿಟ್ಟಿನಲ್ಲಿ ಈ ಹಿಂದೆ ವಿಶ್ವವಿದ್ಯಾಲಯ ಮತ್ತು ಗ್ರಂಥಾಲಯಗಳಲ್ಲಿ ಓದುವವರ ಸಂಖ್ಯೆ ದುಪ್ಪಟ್ಟಾಗಿತ್ತು ಆದರೆ ಈಗ ವಿಶ್ವವಿದ್ಯಾಲಯಗಳಲ್ಲಿ ಅಗತ್ಯವಿರುವ ಗ್ರಂಥಾಲಯಗಳು ಇಲ್ಲ, ಓದುವವ ಸಂಖ್ಯೆ ಸಹ ಇಳಿಮುಖವಾಗಿದೆ, ಈ ನಿಟ್ಟಿನಲ್ಲಿ ಕುಣಿಗಲ್ ಗ್ರಂಥಾಲಯ ಪ್ರಾರಂಭ ಮಾಡಿರುವುದು ಸಂತಸದ ವಿಚಾರವಾಗಿದೆ ಎಂದರು.

    ಮಾಜಿ ಸಚಿವ ಡಿ. ನಾಗರಾಜಯ್ಯ ಮಾತನಾಡಿ ನಾನು ಶಾಸಕನಾಗಿದ್ದ ಅವಧಿಯಲ್ಲಿ ಕಸಾಪ ಕಟ್ಟಡದ ನೆಲ ಅಂತಸ್ತಿನ ಕಟ್ಟಡಕ್ಕೆ ಶಾಸಕರ ನಿಧಿಯಿಂದ ಅನುದಾನ ನೀಡಿದೆ, ಈಗ ಮೇಲಂತಸ್ತಿನ ಕಟ್ಟಡಕ್ಕೆ ಸಂಸದರ ನಿಧಿಯಿಂದ ಅನುದಾನ ಕೊಡಿಸಲು ಪ್ರಯತ್ನಿಸುತ್ತೇನೆ ಎಂದರು.

    ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಲಿಂಗಪ್ಪ, ಸಾಹಿತಿ ನಾರಾಯಣ ಹೊಡಾಘಟ್ಟ, ಲೇಖಕ ಸೊಂದಲಗೆರೆ ಲಕ್ಷ್ಮೀಪತಿ, ವೆಗೊಲ ಇಂಡಿಯಾ ಪ್ರೈ.ಲಿ ಪ್ರಧಾನ ವ್ಯವಸ್ಥಾಪಕ ಜಗದೀಶ್ ಟಿ. ನಾಯಕ್ ಮಾತನಾಡಿದರು. ಈ ವೇಳೆ ಲೇಖಕ ಕೆ. ಚಂದ್ರಕೃಷ್ಣಪ್ಪ ಅವರ ವಿಚಾರ ಸಾಹಿತ್ಯ ಕೃತಿ ಬಿಡುಗಡೆ ಮಾಡಲಾಯಿತು, ಲೇಖಕಿ ವೈ. ಜಿ. ವೆಂಕಟೇಶಮ್ಮ ಅವರಿಗೆ ಮಲ್ಲಮ್ಮ ಪಾಟೀಲ್ ನಾರಸೀಗೌಡ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ಸನ್ಮಾನ: ನಿಕಟ ಪೂರ್ವ ಅಧ್ಯಕ್ಷರಾದ ತಗಡೂರು ವೀರಭದ್ರಪ್ಪ, ಜಿ. ಬಿ. ಮಲ್ಲಪ್ಪ, ಕೆ. ಹೆಚ್. ವೆಂಕಟೇಶ್, ಗಾಯಿತ್ರಿ ರಾಜು, ದಿನೇಶ್ ಕುಮಾರ್, ಮತ್ತು ವೃತ್ತ ನಿರೀಕ್ಷಕ ಪ್ರಮೋದ್ ಗೌಡ, ಪ್ರಗತಿ ಹೆಚ್. ಆರ್. ಸರ್ವಿಸ್ ಪ್ರೈ. ಲಿ ಮಾಲೀಕ ನೀಲತ್ತಹಳ್ಳಿ ಜಿ. ರವಿಕುಮಾರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಸಿ. ಶಿವಣ್ಣ, ನಿವೃತ್ತ ಉಪನ್ಯಾಸಕ ವಿನಾಯಕಶಾಸ್ತ್ರಿ ಅವರನ್ನು ಸನ್ಮಾನಿಸಲಾಯಿತು.

    ಕಾರ್ಯಕ್ರಮದಲ್ಲಿ ಕಸಾಪ ಅಧ್ಯಕ್ಷ ಡಾ. ಕಪನಿಪಾಳ್ಯ ರಮೇಶ್, ಪ್ರಧಾನ ಕಾರ್ಯದರ್ಶಿಗಳಾದ ಸಿದ್ಧಲಿಂಗಸ್ವಾಮಿ, ಜಯರಾಮಯ್ಯ, ಕೋಶಾಧ್ಯಕ್ಷ ವಿ. ಎನ್. ರಾಮಣ್ಣ, ನಿರ್ದೇಶಕರಾದ ಕೆ. ಎಲ್. ಬೋರೇಗೌಡ, ಕೆ. ಆರ್. ರಂಗನಾಥ್, ದಲಿತ್ ನಾರಾಯಣ್, ಕೆ. ಎನ್. ಲೋಕೇಶ್, ಜೀವಂದರ್ ಕುಮಾರ್, ಉಮೇಶ್, ಪ್ರಸಾದ್ ನಿಡಸಾಲೆ, ಲೀಲಾವತಿ, ಪರೀಫ್ ಉಲ್ಲಾ, ಎಂ. ಡಿ. ಮೋಹನ್, ಹೋಬಳಿ ಅಧ್ಯಕ್ಷರಾದ ಶಿವಕುಮಾರಸ್ವಾಮಿ, ಲಕ್ಷ್ಮೀನಾರಾಯಣ್ ಮತ್ತಿತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕುಣಿಗಲ್ ಸಹಕಾರಿ ರಂಗಕ್ಕೆ ತಾರತಮ್ಯವಾಗಿದ್ದಲ್ಲಿ ಸರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ

    December 17, 2025

    ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ

    December 5, 2025

    ಕುಣಿಗಲ್ | 15 ಜಾನುವಾರುಗಳ ರಕ್ಷಣೆ: ಆರೋಪಿ ಬಂಧನ

    November 30, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ

    December 27, 2025

    ಸರಗೂರು:  ಸರಕಾರಿ ಭೂಮಿಗೆ ವಾರಸುದಾರರಾಗಿರುವ ಬಡ ರೈತರಿಗೆ ಸರಕಾರ ಹಕ್ಕು ನೀಡುವ ಮೂಲಕ ಅವರನ್ನು ಬದುಕಲು ಬಿಡಬೇಕು ಎಂದು ಕರ್ನಾಟಕ…

    ಸರಗೂರು:  SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ

    December 27, 2025

    ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು

    December 27, 2025

    ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ

    December 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.