nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮೂರ ಶಾಲೆ ಉಳಿಸಿ:  ಎಐಡಿಎಸ್‌ ಓ, ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ
    ತುಮಕೂರು December 27, 2025

    ನಮ್ಮೂರ ಶಾಲೆ ಉಳಿಸಿ:  ಎಐಡಿಎಸ್‌ ಓ, ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ

    By adminDecember 27, 2025No Comments2 Mins Read
    aidso

    ತುಮಕೂರು:  ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ತುಮಕೂರು ತಾಲೂಕಿನ ಡಿ ಕೊರಟಗೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಚ್ಚುತ್ತಿರುವುದನ್ನು ವಿರೋಧಿಸಿ, ಶಾಲೆ ಉಳಿಸಲು ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಪ್ರತಿಭಟನೆ ನಡೆಸಲಾಯಿತು.

    ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್‌ ಓ ಜಿಲ್ಲಾ ಜಿಲ್ಲಾ ಕಾರ್ಯದರ್ಶಿಗಳಾದ ಲಕ್ಕಪ್ಪ ಮಾತನಾಡಿ, ಬರಿ ಗ್ರಾಮ ಪಂಚಾಯಿತಿಗೊಂದು ಕೆಪಿಎಸ್ ಮ್ಯಾಗ್ನೆಟ್ ಶಾಲೆ ಮಾಡಿ ಶಾಲೆಯನ್ನು ಮುಚ್ಚುತ್ತಿರುವ ಸರ್ಕಾರವು ಗ್ರಾಮದ ಬಡ ರೈತ–ಕಾರ್ಮಿಕರ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.


    Provided by
    Provided by

    ಮುಂದುವರೆದು ಮಾತನಾಡುತ್ತಾ, ಬಸವೇಗೌಡನಪಾಳ್ಯ, ಬಿದರಕಟ್ಟೆ, ಕಳ್ಳಿಪಾಳ್ಯ, ಬೊಮ್ಮನಹಳ್ಳಿ,, ಚಿಕ್ಕ ಕೊರಟಗೆರೆ ಮತ್ತು ಡಿ ಕೊರಟಗೆರೆ  ಗ್ರಾಮಗಳ ಸರ್ಕಾರಿ ಶಾಲೆಗಳನ್ನು ಮುಚ್ಚಿ  ಮಸ್ಕಲ್ ಗ್ರಾಮ ಪಂಚಾಯತಿಯ ಮ್ಯಾಗ್ನೆಟ್ ಶಾಲೆಗೆ ಸೇರಿಸಿ ಮಕ್ಕಳನ್ನು ದೂರದ ಶಾಲೆಗೆ  ಕಳುಹಿಸಲಾಗುತ್ತದೆ. ಉಚಿತ ಬಸ್‌ ಸೌಲಭ್ಯ ಹೊರೆಯನ್ನು ಎಸ್‌ ಡಿಎಂಸಿ  ಗೆ ವಹಿಸಿ, ಮ್ಯಾಗ್ನೆಟ್ ಶಾಲೆಯ ನಿರ್ವಹಣೆ ಹೊರಗುತ್ತಿಗೆ ನೀಡಲಾಗುತ್ತಿದೆ. ಇದು ಕ್ರಮೇಣವಾಗಿ ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸಿ, ಬಡ ಮಕ್ಕಳನ್ನು ಶಾಶ್ವತವಾಗಿ ದೂರ ತಳ್ಳುವ ಹುನ್ನಾರ ಮಾಡುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿದರು.

    ಗ್ರಾಮಸ್ಥರಾದ ನಾಗರಾಜು ಅವರು ಮಾತನಾಡಿ, ಸದನದಲ್ಲಿ ಶಿಕ್ಷಣ ಸಚಿವರು ಯಾವುದೇ ಒಂದು ಹಳ್ಳಿಯ ಹಾಗೂ ಸಣ್ಣ ಹಳ್ಳಿಯ ಶಾಲೆ ಸಹ ಮುಚ್ಚುವುದಿಲ್ಲ ಅಂತ ಹೇಳಿದ್ದರು ಈಗ ಅವರು ಆ ಮಾತಿನಂತೆ ನಡೆದುಕೊಳ್ಳಬೇಕು, ಶಾಲೆಗಳನ್ನು ಮುಚ್ಚಿದರೆ ನಮ್ಮ ಮಕ್ಕಳನ್ನು ದೂರದ ಊರಿಗೆ ಕಳುಹಿಸಲು ತೊಂದರೆಯಾಗುತ್ತದೆ. ಮಳೆಗಾಲದಲ್ಲಿ ಜನಸಾಮಾನ್ಯರೇ ಓಡಾಡಲು ಕಷ್ಟವಾಗುತ್ತದೆ  ಇಂತಹ ಪರಿಸ್ಥಿತಿಯಲ್ಲಿ ಮಕ್ಕಳನ್ನು ಕಳಿಸುವುದು ಸಾಧ್ಯವಾಗದ ಮಾತು, ಒಂದು ವೇಳೆ ನೀವು ಶಾಲೆಯನ್ನು ಮುಚ್ಚಲು ಬಂದದ್ದೇ ಆದರೆ ನಾವು ಪ್ರತಿಭಟನೆಯ ಮೂಲಕ ನಮ್ಮೂರಿನ ಶಾಲೆಗಳನ್ನು ಉಳಿಸಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನಾವು ಬೆಳಗ್ಗೆಯಿಂದ ಸಂಜೆವರೆಗೆ ದುಡಿಯುವ ಜನ, ನಮ್ಮ ಚಿಕ್ಕಮಕ್ಕಳನ್ನು 2 ಕಿಲೊಮೀಟರ್ ದೂರ ಇರುವ ಮಸ್ಕಲ್ ಶಾಲೆಗೆ ಕಳುಹಿಸಲು ಖಂಡಿತಾ  ಸಾಧ್ಯವಿಲ್ಲ. ಅಲ್ಲದೆ ಹೆಣ್ಣು ಮಕ್ಕಳನ್ನು ದೂರದ ಊರಿಗೆ ಕಳುಹಿಸುವುದು ಕಷ್ಟ , ಈ ಯೋಜನೆ ಖಂಡಿತವಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಕುತ್ತು ತರುತ್ತದೆ ಎಂದು ಗ್ರಾಮಸ್ಥರು ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದರು.

    ಪ್ರತಿಭಟನೆಯ ನಂತರ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಲಾಯಿತು.  ಪ್ರತಿಭಟನೆಯಲ್ಲಿ  ಎಐಡಿಎಸ್ ಓ ತುಮಕೂರು ಜಿಲ್ಲಾ ಕಾರ್ಯದರ್ಶಿ ಮಂಡಳಿಯ ಸದಸ್ಯರಾದ ಭರತ್ ಎಸ್. ಹಾಗೂ ಗ್ರಾಮದ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    Leave A Reply Cancel Reply

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.