nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

    February 17, 2026

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026
    Facebook Twitter Instagram
    ಟ್ರೆಂಡಿಂಗ್
    • “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ
    • ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ
    • ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು
    • ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು
    • ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ
    • ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ
    • ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
    ಸಿರಾ January 1, 2026

    ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ

    By adminJanuary 1, 2026No Comments2 Mins Read
    sira

    ಶಿರಾ: ಗ್ರಾಮ ಪಂಚಾಯಿತಿಗಳಲ್ಲಿ ರಾಜಕೀಯ ಇರಬಾರದು. ಪಕ್ಷಾತೀತವಾಗಿ ಅಭಿವೃದ್ಧಿ ಆಗಬೇಕು. ಶಾಸಕರಿಗೆ ಇರುವಷ್ಟು ಅಧಿಕಾರ ಗ್ರಾಮ ಪಂಚಾಯಿತಿ ಸದಸ್ಯರಿಗೂ ಇದೆ. ಈ ನಿಟ್ಟಿನಲ್ಲಿ ಗ್ರಾಮಸಭೆಗಳನ್ನು ಪಂಚಾಯಿತಿ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಬೇಕು. ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು ಎಂದು ದೆಹಲಿ ವಿಶೇಷ ಪ್ರತಿನಿಧಿ ಡಾ. ಟಿ.ಬಿ.ಜಯಚಂದ್ರ ಹೇಳಿದರು.

    ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಹುಯಿಲ್‌ದೊರೆ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಹಾಗೂ ಎಸ್ ರಂಗನಹಳ್ಳಿ, ದೇವಿ ತಾಂಡ ಗ್ರಾಮಗಳ ಅಂಗನವಾಡಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.


    Provided by
    Provided by

    ತಾಲೂಕಿನಲ್ಲಿ ಹೆಚ್ಚು ಗ್ರಾಮ ಪಂಚಾಯಿತಿ ಕಟ್ಟಡಗಳು ನಿರ್ಮಾಣವಾಗುತ್ತಿವೆ. ಇದುವರೆಗೂ ಸುಮಾರು 17 ಗ್ರಾಪಂ ನೂತನ ಕಟ್ಟಡಗಳು ಪೂರ್ಣಗೊಂಡಿವೆ. ಇದು ರಾಜ್ಯದಲ್ಲಿಯೇ ಮಾದರಿ ಕೆಲಸವಾಗಿದ್ದು, ನೂತನ ಪಂಚಾಯಿತಿ ಕಟ್ಟಡಗಳಿಗೆ ಸರ್ಕಾರದಿಂದ 25 ಲಕ್ಷ ಅನುದಾನ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದರು.

    ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ ಗ್ರಾಮ ಲೆಕ್ಕಿಗರು, ಪಂಚಾಯಿತಿ ಅಧಿಕಾರಿಗಳು ಒಂದೇ ಸ್ಥಳದಲ್ಲಿ ಇರುವಂತಾಗಬೇಕು. ಗ್ರಾಮ ಪಂಚಾಯಿತಿ ಕೆಲಸ ಹಾಗೂ ಕಂದಾಯ ಇಲಾಖೆಯ ಕೆಲಸಗಳು ಒಟ್ಟಿಗೆ ಸಿಗುವಂತಾದಾಗ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.

    ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಗ್ರಾಮೀಣ ಪ್ರದೇಶದ ರೈತರಿಗೆ, ಕೂಲಿ ಕಾರ್ಮಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಪ್ರಪಂಚದಲ್ಲಿಯೇ ಮಾದರಿಯಾದ ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದು ಗ್ರಾಮಗಳಲ್ಲಿ 100 ದಿನಗಳ ಉದ್ಯೋಗ ಖಾತರಿ ನೀಡಿದ್ದರು. ಆದರೆ ಈ ಯೋಜನೆಯನ್ನು ಕೇಂದ್ರ ಸರ್ಕಾರ ಬದಲಾಯಿಸಲು ಮುಂದಾಗಿದೆ. ನರೇಗಾ ಯೋಜನೆಯ ಹೆಸರು ಬದಲಾಯಿಸಿ ಸಂತೋಷ ಆದರೆ ಆ ಯೋಜನೆಯ ಶಕ್ತಿ ಕುಂದಿಸಬೇಡಿ ಎಂದು ಜಯಚಂದ್ರ ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ ಸುರೇಶ್‌ಬಾಬು ಮಾತನಾಡಿ ಗ್ರಾಪಂ ವ್ಯಾಪ್ತಿಯ ಸಮಸ್ಯೆಗಳನ್ನು ಬಗೆಹರಿಸಲು ಕ್ರಮವಹಿಸಬೇಕು. ಜನರೊಂದಿಗೆ ಚರ್ಚಿಸಿ ನಿರ್ಣಯ ಕೈಗೊಂಡರೆ ಸಮಸ್ಯೆ ಬಗೆಹರಿಸಲು ಸಾಧ್ಯ. ಗ್ರಾಮೀಣ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪಟ್ಟಿ ಮಾಡಿ ಬಗೆಹರಿಸಲು ಮುಂದಾಗಬೇಕು. ಅಧಿಕಾರಿಗಳು ಜವಾಬ್ದಾರಿ ನಿಭಾಯಿಸಿ, ಅಧಿಕಾರ ಸದುಪಯೋಗಪಡಿಸಿಕೊಳ್ಳಬೇಕು. ಜನರನ್ನು ಗೌರವ, ಪ್ರೀತಿಯಿಂದ ಕಾಣಬೇಕು ಎಂದರು. ಬುಕ್ಕಾಪಟ್ಟಣ ಹೋಬಳಿಯಲ್ಲಿ ರಸ್ತೆಗಳ ಅಭಿವೃದ್ಧಿಗೆ 37 ಕೋಟಿ ವಿಶೇಷ ಅನುದಾನ ತಂದು ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ರಾಜ್ಯ ಸರ್ಕಾರವು ಭಾಗ್ಯಗಳ ಜೊತೆ ಅಭಿವೃದ್ಧಿ ಕೆಲಸ ಮಾಡಬೇಕು. ಭಾಗ್ಯಗಳ ಹೆಸರಿನಲ್ಲಿ ಅಭಿವೃದ್ಧಿ ಕೆಲಸ ಕುಂಠಿತಗೊಂಡಿದೆ ಎಂದರು.

    ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಎಸ್ ಆರ್ ಗೌಡ ಮಾತನಾಡಿ ಶಾಸಕರಾದ ಟಿ.ಬಿ.ಜಯಚಂದ್ರ ಹಾಗೂ ಸಿ.ಬಿ.ಸುರೇಶ್‌ಬಾಬು ಅವರು ಚಿಕ್ಕನಾಯಕನಹಳ್ಳಿ ಕ್ಷೇತ್ರದ ಬುಕ್ಕಾಪಟ್ಟಣ ಹೋಬಳಿಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕು. ಕ್ಷೇತ್ರಕ್ಕೆ ಶಾಶ್ವತ ನೀರಾವರಿ ಯೋಜನೆಗಳು ಲಭ್ಯವಾಗುವಂತೆ ಕ್ರಿಯಾಶೀಲ ಪ್ರಯತ್ನ ಮಾಡಬೇಕು ಎಂದರು.

    ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ರಾಜಮ್ಮ ಚಂದ್ರನಾಯ್ಕ, ಉಪಾಧ್ಯಕ್ಷೆ ಲಕ್ಷ್ಮಿ ತಿಮ್ಮಯ್ಯ, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೇರೆ ಮಹೇಶ್, ತಾಪಂ ಇಒ ಹರೀಶ್, ತಾಪಂ ಮಾಜಿ ಅಧ್ಯಕ್ಷ ಮಂಜುನಾಥ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕನಕಪ್ಪ ಮೂಲಸಕ್ರಿ, ಗ್ರಾ.ಪಂ. ಸದಸ್ಯರಾದ ಪುಟ್ಟಮ್ಮ, ಭೀಮಣ್ಣ, ಆರ್ ಭೂತಣ್ಣ, ಮಹಾಲಕ್ಷ್ಮಿ, ಮಾರಣ್ಣ, ಜಯಮ್ಮ, ರಾಜಣ್ಣ, ಮಹಮ್ಮದ್ ಸಫಿ ಉಲ್ಲಾ, ದಿವಾಕರ್, ತಾಪಂ ಮಾಜಿ ಸದಸ್ಯೆ ಮಂಜುಳಾ ಶೇಷಾನಾಯ್ಕ ಸೇರಿದಂತೆ ಅನೇಕ ಪ್ರಮುಖರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ

    February 5, 2026

    ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ

    February 1, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    ಬೆಂಗಳೂರು:  ಭಾರತದ ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಜೈನ್ (ಡೀಮ್ಡ್ –ಟು–ಬಿ) ವಿಶ್ವವಿದ್ಯಾಲಯವು “ಸಾಮಾಜಿಕ ಮೌಲ್ಯಗಳ ಕುಸಿತ ಮತ್ತು ಅದರ…

    ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

    February 17, 2026

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು

    February 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.