ಕೊರಟಗೆರೆ : ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ರವರು ಮುಖ್ಯಮಂತ್ರಿಯಾಗಲಿ ಎಂದು ಹೊಸ ವರ್ಷದ ಮೊದಲ ದಿನವೇ ಕ್ಯಾಮೇನಹಳ್ಳಿ ಆಂಜಿನೇಯ ಸ್ವಾಮಿ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಮತ್ತು ಮುಖಂಡರು ವಿಶೇಷ ಪೂಜೆ ಸಲ್ಲಿಸಿ 108 ತೆಂಗಿನ ಕಾಯಿ ಹೊಡೆದು ಹರಕೆಯನ್ನು ತೀರಿಸಿದ್ದಾರೆ.
ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವಥನಾರಾಯಣ ಮಾತನಾಡಿ, ಡಾ.ಜಿ.ಪರಮೇಶ್ವರರವರು 8 ವರ್ಷಗಳ ಕಾಲ ಕೆ.ಪಿ.ಸಿ.ಸಿ ಅದ್ಯಕ್ಷರಾಗಿ ಸೇವೆಸಲ್ಲಿಸಿದ್ದಾರೆ, 2013ರಲ್ಲಿ ಮತ್ತು 2018 ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮವಹಿಸಿದ್ದಾರೆ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯಾಗಿಲ್ಲ ಈಗ ಸಿದ್ದಾರಾಮಯ್ಯ ನವರು ಮುಖ್ಯಮಂತ್ರಿ ಸ್ಥಾನದಿಂದ ಬದಲಾದರೆ ಡಾ.ಜಿ.ಪರಮೇಶ್ವರ ರವರನ್ನೇ ಮುಖ್ಯಮಂತ್ರಿ ಮಾಡುವಂತೆ ಲಕ್ಷಾಂತರ ಜನರ ಕೂಗಾಗಿದೆ ಅದರಿಂದ ಹೊಸವರ್ಷದ ದಿನದಂದು ನಾವು ಕ್ಯಾಮೆನಹಳ್ಳಿ ಆಂಜಿನೇಯಸ್ವಾಮಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸದ್ದೇವೆ ಎಂದರು.
ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಅರಕರೆ ಶಂಕರ್ ಮಾತನಾಡಿ, ಡಾ.ಜಿ.ಪರಮೇಶ್ವರ ರವರು ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಇದ್ದು ಎಲ್ಲಾ ಜನಾಂಗದ ನಾಯಕರಾಗಿದ್ದು ಕಳಂಕ ರಹಿತ ಸ್ವಚ್ಚ ರಾಜಕಾರಣಿಯಾಗಿದ್ದಾರೆ, 2023ರ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರೆಂಟಿ ಸಮಿತಿ ಅಧ್ಯಕ್ಷರಾಗಿ ಸರ್ಕಾರ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ, ಡಾ.ಜಿ.ಪರಮೇಶ್ವರ ರವರ 40 ವರ್ಷಗಳ ರಾಜಕೀಯ ಜೀವನದಲ್ಲಿ ಶಾಸಕರಾಗಿ, ವಿವಿಧ ಖಾತೆಗಳ ಸಚಿವರಾಗಿ, ಕಾಂಗ್ರೆಸ್ ಪಕ್ಷದ ರಾಜ್ಯ ಮತ್ತು ರಾಷ್ಟೀಯ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ ಈಗ ಸಿ.ಎಂ. ಬದಲಾವಣೆ ಕೂಗು ಕೇಳಿಬರುತ್ತಿದೆ ಕಾಂಗ್ರೆಸ್ ಪಕ್ಷದ ವರಿಷ್ಠರು ಡಾ.ಜಿ.ಪರಮೇಶ್ವರ ರವರ ಸೇವೆ, ವ್ಯಕ್ತಿತ್ವ, ಅರ್ಹತೆ ಗುರುತಿಸಿ ಮುಖ್ಯಮಂತ್ರಿ ಮಾಡಲೇಬೇಕು ಎಂದರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಎ.ಡಿ.ಬಲರಾಮಯ್ಯ, ಮಹಿಳಾ ಅಧ್ಯಕ್ಷೆ ಜಯಮ್ಮ, ಮುಖಂಡರಾದ ಮಹಾಲಿಂಗಪ್ಪ, ಜಯರಾಮ್, ಎಲ್.ರಾಜಣ್ಣ, ಕೆ.ಆರ್. ಓಬಳರಾಜು, ಟಿ.ಸಿ.ರಾಮಯ್ಯ, ಉಮಾಶಂಕರ್, ವಿನಯ್ ಕುಮಾರ್, ಕಾರ್ ಮಹೇಶ್, ಉಮೇಶ್(ಗೋಟು) ನಾರಾಯಣಪ್ಪ, ವೆಂಕಟಪ್ಪ, ನರಸಿಂಹಮೂರ್ತಿ, ಸೇರಿದಂತೆ ಹಲವರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


