nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ

    January 14, 2026

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ:  ಕೊರಟಗೆರೆ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ

    January 14, 2026
    Facebook Twitter Instagram
    ಟ್ರೆಂಡಿಂಗ್
    • ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ
    • ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ
    • ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ:  ಕೊರಟಗೆರೆ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ
    • ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ
    • ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ
    • ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ
    ತುಮಕೂರು January 14, 2026

    ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ

    By adminJanuary 14, 2026No Comments2 Mins Read
    handi jogis

    ತುಮಕೂರು: ಜಿಲ್ಲೆಯಲ್ಲಿ ಹಂದಿಜೋಗಿಸ್ ಜನಾಂಗದ ಜಾತಿ ಪ್ರಮಾಣಪತ್ರಗಳನ್ನು ಇತರೆ ಜನಾಂಗದವರು ಸುಳ್ಳು ದಾಖಲಾತಿಗಳನ್ನು ನೀಡಿ, ಅಕ್ರಮವಾಗಿ ಅಲೆಮಾರಿ ಪರಿಶಿಷ್ಟ ಜಾತಿಗೆ ಸೇರಿದ ಹಂದಿಜೋಗಿಸ್ ಜನಾಂಗದ ಜಾತಿ ಪ್ರಮಾಣಪತ್ರಗಳನ್ನು ಪಡೆದುಕೊಂಡು ಹಂದಿಜೋಗಿಸ್ ಜನಾಂಗಕ್ಕೆ ಸೇರಬೇಕಾದ  ಸರ್ಕಾರದ ಸೌಲಭ್ಯಗಳು ಮತ್ತು ಸವಲತ್ತುಗಳನ್ನು ಪಡೆದುಕೊಳ್ಳುತ್ತಿದ‍್ದಾರೆ ಇದರಿಂದ ನಿಜವಾದ ಹಂದಿಜೋಗಿಸ್ ಜನಾಂಗದವರಿಗೆ ತೊಂದರೆಯಾಗುತ್ತಿದೆ ಎಂದು ತುಮಕೂರು ಜಿಲ್ಲಾ ಹಂದಿಜೋಗಿಸ್ ಸಂಘ ಜಂಟಿ ನಿರ್ದೇಶಕರು ತುಮಕೂರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕಛೇರಿಗೆ ಮನವಿ ಸಲ್ಲಿಸಿದ್ದಾರೆ.

    ನಿಜವಾದ ಹಂದಿಜೋಗಿಸ್ ಜನಾಂಗದವರ ಅನಕ್ಷರತೆ, ಬಡತನ  ಮತ್ತು ತಮ್ಮ ಜನಾಂಗದ ಬಗ್ಗೆ ಧ್ವನಿ ಎತ್ತದ  ನಾಯಕರಿಲ್ಲದ ಕಾರಣ  ಕಳೆದ 08 ವರ್ಷಗಳಿಂದ ತುಮಕೂರು ಜಿಲ್ಲೆಯಲ್ಲಿ ಇತರೆ ಜನಾಂಗದವರು ಅಂದರೆ  ಅತಿ ಹೆಚ್ಚಾಗಿ ಹೇಳವ ಜನಾಂಗದವರು ಹಂದಿ ಸಾಕುವ ಮತ್ತು ಹಂದಿ ಮಾರಾಟ ಮಾಡುವ ಹೆಸರಿನಲ್ಲಿ ನಾವೇ ಹಂದಿಜೋಗಿಸ್ ಗಳೆಂದು ಜಾತಿ ಪ್ರಮಾಣ ಪತ್ರಗಳನ್ನು ಪಡೆದುಕೊಂಡು ನಿಜವಾದ ಹಂದಿಜೋಗಿಸ್ ಜನಾಂಗದವರ ಮೇಲೆ ದೌರ್ಜನ್ಯಗಳನ್ನು ಮಾಡುತ್ತಿದ್ದು ನಿಜವಾದ ಅಲೆಮಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.


    Provided by
    Provided by

    ಮನವಿಯ ಪ್ರಮುಖ ಅಂಶಗಳು:

    1. ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಸಾತೇನಹಳ್ಳಿಯ ನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ವೆನಂ 49ರಲ್ಲಿ ಹಂದಿಜೋಗಿಸ್ ಜನಾಂಗಕ್ಕೆ ಮೀಸಲಾಗಿದ್ದ 02 ಎಕರೆ ಜಮೀನಿನಲ್ಲಿ ಅಕ್ರಮ ನಿವೇಶನಗಳನ್ನು ಪಡೆದುಕೊಂಡಿರುತ್ತಾರೆ, ಗುಬ್ಬಿ ತಾಲ್ಲೂಕಿನ ಗುಬ್ಬಿ ಪೊಲೀಸ್ ಠಾಣೆಯ 100 ಮೀಟರ್ ಬಳಿ ಇರು ಬಂಗ್ಲೊಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇವರ ಶಾಲಾ ದಾಖಲಾತಿಗಳಲ್ಲಿ ಹೆಳವ ಜಾತಿ ಇರುತ್ತದೆ, ಆದರೆ ಸಾತೇನಹಳ್ಳಿ ಸರ್ಕಾರಿ ಕಿರಿಯ/ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇವರ ಮಕ್ಕಳ ದಾಖಲಾತಿಯಲ್ಲಿ ಹಂದಿಜೋಗಿಸ್ ಎಂದು ದಾಖಲಿಸಿರುತ್ತಾರೆ.
    2. ತುಮಕೂರು ಜಿಲ್ಲೆ ಅಮಲಾಪುರ ಸರ್ವೆ ನಂ 31 ರಲ್ಲಿ ಹಂದಿಜೋಗಿಸ್ ಜನಾಂಗಕ್ಕೆ ಮೀಸಲಾಗಿದ್ದ 01 ಎಕರೆ ಜಮೀನಿನಲ್ಲಿ ಅಕ್ರಮ ನಿವೇಶನಗಳನ್ನು ಸುಳ್ಳು ಜಾತಿ ದಾಖಲಾತಿಗಳನ್ನು ನೀಡಿ ಪಡೆದುಕೊಂಡಿರುತ್ತಾರೆ ಇದನ್ನು ಪರಿಶೀಲಿಸಲು ತಮ್ಮಲ್ಲಿ ಮನವಿ.

    3.ಅಲೆಮಾರಿ ಬುಡಕಟ್ಟು ಅಭಿವೃದ್ದಿ ಮಹಾಸಭಾ ತುಮಕೂರು ಜಿಲ್ಲಾಧ್ಯಕ್ಷೆ ಶ್ರೀಮತಿ ರಾಮಕ್ಕ ಮೂಲತಃ ಹೆಳವ ಸಮುದಾಯಕ್ಕೆ ಸೇರಿದವರಾಗಿದ್ದು  ಇವರೇ ಸದರಿ ಸುಳ್ಳು ಜಾತಿ ಪ್ರಮಾಣ ಪತ್ರದ ಸೂತ್ರದಾರರಾಗಿರುತ್ತಾರೆ.

    1. ಸದರಿ ಜಾತಿಯ ಪ್ರಮಾಣ ಪತ್ರಗಳು ಚಿಕ್ಕನಾಯಕನಹಳ್ಳಿ ಮತ್ತು ಸಿರಾ ತಾಲ್ಲೂಕಿನಲ್ಲಿಯೂ ಅಕ್ರಮವಾಗಿ ಪಡೆದುಕೊಂಡಿರುತ್ತಾರೆ.

    ಈ ಬಗ್ಗೆ ಈಗಾಗಲೇ ತುಮಕೂರು ಜಿಲ್ಲಾಧಿಕಾರಿಗಳಿಗೆ, ಮತ್ತು ಜಂಟಿ ನಿರ್ದೇಶಕರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ತುಮಕೂರು ಹಾಗೂ ಉಪ ಪೊಲೀಸ್ ಅಧೀಕ್ಷಕರು ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯ ತುಮಕೂರು  ಮತ್ತು ವಿವಿಧ ತಾಲ್ಲೂಕಿನ ತಹಶೀಲ್ದಾರರಿಗೆ ಮನವಿ ನೀಡಿ ಸರಿಪಡಿಸಲು ಕೋರಿರುತ್ತದೆ. ಧ್ವನಿ ಇಲ್ಲದ ಸಮುದಾಯವಾದ್ದರಿಂದ ಯಾರು ಸಹ ಕ್ರಮ ಕೈಗೊಂಡಿರುವುದಿಲ್ಲ.  ದಯಮಾಡಿ ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಅಕ್ರಮವಾಗಿ ಅಥವಾ ಸುಳ್ಳು ದಾಖಲಾತಿಗಳನ್ನು ನೀಡಿ ಪಡೆದಿರುವ ಹಂದಿಜೋಗಿಸ್  ಜಾತಿ  ಪ್ರಮಾಣ ಪತ್ರಗಳು ರದ್ದಾಗಬೇಕು ಮತ್ತು ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

    ಈ ಸಂದರ್ಭದಲ್ಲಿ ತುಮಕೂರು  ಜಿಲ್ಲಾ ಹಂದಿಜೋಗಿಸ್ ಸಂಘದ ಅಧ್ಯಕ್ಷ ಮುಕುಂದ, ಉಪಾಧ್ಯಕ್ಷ ಶ್ರೀನಿವಾಸ್ , ಕಾರ್ಯದರ್ಶಿ ಚಂದ್ರಶೇಖರ್ ವೇಣು, ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ

    January 13, 2026

    ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ

    January 13, 2026

    ನಮ್ಮೂರ  ಶಾಲೆಗಳನ್ನು  ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ

    January 10, 2026

    Leave A Reply Cancel Reply

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಶಬರಿಮಲೆ: ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಇಂದು ಶಬರಿಮಲೆಯ ಪೊನ್ನಂಬಲಮೇಡು ಬೆಟ್ಟದಲ್ಲಿ ಗೋಚರಿಸಲಿರುವ ದಿವ್ಯ ‘ಮಕರ ಜ್ಯೋತಿ’ಯನ್ನು ಕಣ್ತುಂಬಿಕೊಳ್ಳಲು ದೇಶದಾದ್ಯಂತದ…

    ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ

    January 14, 2026

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ:  ಕೊರಟಗೆರೆ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ

    January 14, 2026

    ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ

    January 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.