nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ
    ಪಾವಗಡ January 17, 2026

    ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ

    By adminJanuary 17, 2026No Comments3 Mins Read
    arasikere

    ಪಾವಗಡ : ಸ್ಥಳೀಯ ಇತಿಹಾಸ ಅಧ್ಯಯನದ ಪೂರ್ಣವಾಗದಿದ್ದರೆ ರಾಷ್ಟ್ರೀಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ ಎಂದು ಸಂಶೋಧಕರಾದ ಡಾ.ಡಿ.ಎನ್.ಯೋಗೀಶ್ವರಪ್ಪ ತಿಳಿಸಿದರು.

    ತಾಲ್ಲೂಕಿನ ಅರಸೀಕೆರೆ ಗ್ರಾಮದ ಶತಮಾನ ಸೇವೆ ಪೂರೈಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಹೊ.ಮ.ನಾಗರಾಜು ರವರ ನಿಡುಗಲ್ಲು ಸೀಮೆಯ ಅರಸೀಕೆರೆ ಕೃತಿಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು,  ಸ್ಥಳೀಯ ಐತಿಹಾಸಿಕ ಅಂಶಗಳು ರಾಷ್ಟ್ರೀಯ ಇತಿಹಾಸಕ್ಕೆ ಪೂರಕವಾಗಿರುತ್ತವೆ. ಸೂಕ್ಷ್ಮ ತರಹದ ಅಧ್ಯಯನಗಳು ಇಂದಿನ ದಿನಮಾನಗಳಲ್ಲಿ ಅವಶ್ಯಕವಾಗಿವೆ. ಸೂಕ್ಷ್ಮ ಅಧ್ಯಯನಗಳಲ್ಲಿ ಸಂಶೋಧಕ ಆಕರಗಳ ಸಮಸ್ಯೆ, ಕತೆ ಕವನ ಇತ್ಯಾದಿ ಮೌಖಿಕ ಸಾಹಿತ್ಯದಿಂದ ಐತಿಹಾಸಿಕ ಅಂಶಗಳನ್ನು ಹೆಕ್ಕಿ ತೆಗೆಯುವ ಸಮಸ್ಯೆಗಳಿಗೆ ಗುರಿಯಾಗುವುದು ಸಹಜ. ಆದಾಗ್ಯೂ ಅವುಗಳನ್ನು ಮೀರಿ ನಿಖರವಾದ ವಿಷಯಗಳನ್ನು ಕಟ್ಟಿಕೊಡುವವರೆ ಸಂಶೋಧಕ ಎಂದರು.


    Provided by
    Provided by

    ಹೊ.ಮ.ನಾಗರಾಜು ರವರು ಇತಿಹಾಸ ಅಕಾಡೆಮಿಯ ಸದಸ್ಯರಾದ ನಂತರ ದಾಖಲಾಗದ ಐತಿಹಾಸಿಕ ವಿಷಯಗಳನ್ನು ಪ್ರಬಂಧಗಳ ರೂಪದಲ್ಲಿ ಮಂಡನೆ ಮಾಡುತ್ತಿದ್ದು, ನಿಖರವಾದ ಅಂಶಗಳು ಕಂಡುಬರುತ್ತಿವೆ. ಇವರು  ನಿಡುಗಲ್ಲು ಸೀಮೆಯ ಅರಸೀಕೆರೆ ಎನ್ನುವ ಪ್ರಸ್ತುತ ಕೃತಿಯಲ್ಲಿ ಸ್ಥಳೀಯ ಇತಿಹಾಸವನ್ನು ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಬಹುದು. ಪಾವಗಡ ತಾಲ್ಲೂಕು ಇತಿಹಾಸ ಸಂಶೋಧಕರಿಗೆ ಮಾಹಿತಿ ಕಣಜ ಇದ್ದಂತೆ. ಆದರೆ ಸಂಶೋಧನೆಯ ಆಸಕ್ತರ ಸಂಖ್ಯೆ ಕಡಿಮೆ ಇದೆ. ಇತ್ತೀಚಿನ ಯುವ ಸಂಶೋಧಕರು ವಿಶ್ವವಿದ್ಯಾಲಯದ ಉದ್ದೇಶಕ್ಕಾಗಿ ಸಂಶೋಧನೆ ಚಟುವಟಿಕೆಗಳನ್ನು ಮಾಡುತ್ತಿದ್ದು, ಬಹುತೇಕ ಕಟ್ ಅಂಡ್ ಪೇಸ್ಟ್ ಗಳಲ್ಲಿ ಮುಳುಗಿದ್ದಾರೆ. ಅಂತಹವರಿಂದ ನೈಜ ಇತಿಹಾಸ ಹೊರಬರಲು ಸಾಧ್ಯವಿಲ್ಲ. ಯುವ ಸಂಶೋದಕರು ಕ್ಷೇತ್ರ ಕಾರ್ಯದ ಮೂಲಕ ಸಾಗಬೇಕು ಎಂದರು.

    ತಾಲ್ಲೂಕಿನಲ್ಲಿರುವ ಬೆರಳೆಣಿಕೆಯಷ್ಟು ಸಂಶೋಧಕರಲ್ಲಿ ಹೊ.ಮ.ನಾಗರಾಜು ಒಬ್ಬರಾಗಿದ್ದು, ಈಗಾಗಲೇ ಹಲವು ಕೃತಿಗಳನ್ನು ರಚಿಸಿದ್ದು, ಮತ್ತಷ್ಟು ಮೌಲ್ಯಯುತ ಕೃತಿಗಳು ಇವರಿಂದ ಮೂಡಿಬರಲಿ ಎಂದರು.

    ತಾಲ್ಲೂಕು ಕಸಾಪ ಅಧ್ಯಕ್ಷ ಕಟ್ಟನರಸಿಂಹಮೂರ್ತಿ ಕೃತಿಯನ್ನು ಕುರಿತು ಮಾತನಾಡುತ್ತಾ, ಒಂದು ಗ್ರಾಮಕ್ಕೆ ಸಂಬಂಧಿಸಿದ ಇತಿಹಾಸ, ಧರ್ಮ ಸಂಸ್ಕೃತಿ ಜಾನಪದ ಅಂಕಿ ಅಂಶಗಳಾದಿಯಾಗಿ ಗ್ರಾಮಕ್ಕೆ ಸಂಬಂಧಿಸಿದ ಸಮಗ್ರ ವಿಷಯವನ್ನು ಒಳಗೊಂಡ ಕೃತಿಯನ್ನು ಹೊ.ಮ.ನಾಗರಾಜು  ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ರಚಿಸಿರುವ ನಿಡುಗಲ್ಲು ಸೀಮೆಯ ಅರಸೀಕೆರೆ ಕೃತಿಯಲ್ಲಿ ಸ್ಥಳೀಯ ಇತಿಹಾಸ, ಸ್ಥಳನಾಮ, ಸಮುದಾಯ, ಸಂಘಟನೆ, ದೇವಾಲಯಗಳು, ಕಲೆಗಳು, ಆಚರಣೆಗಳು, ಶಿಕ್ಷಣ ಸಂಸ್ಥೆಗಳು, ಕಲಾವಿದರು, ವೀರಗಲ್ಲುಗಳು,  ಕೋಟೆ ಅವಶೇಷಗಳ ವಿಷಯ ಸ್ಪಷ್ಟವಾಗಿ ಮೂಡಿಬಂದಿದೆ. ಗ್ರಾಮದಲ್ಲಿ ವಿಶೇಷವಾಗಿ ಕಂಡುಬರುವ ಗಲ್ಲೆಬಾನ ಆಚರಣೆ, ಗಂಟೆಬಟ್ಲು ಸಂಪ್ರದಾಯ, ಬಸವಣ್ಣ, ಗುಜ್ಜಾರಪ್ಪ ಜಾತ್ರೆ ರಥೋತ್ಸವ, ಹಂಪಣ್ಣನ ಕೆರೆಯಲ್ಲಿ ಸಮಾರಾಧನೆ, ತಾಯಿ ಮುದ್ದಮ್ಮ ವೀರನಾಗಪ್ಪ ದಸರಾ ಉತ್ಸವ, ಭೂತಪ್ಪನ ಕವಳಸೇವೆ, ಶನಿಮಹಾತ್ಮಸ್ವಾಮಿ ಕತೆ ಓದಿಸುವ ಸಂಪ್ರದಾಯ ಇತ್ಯಾದಿಗಳನ್ನು ಕೃತಿಯಲ್ಲಿ ಕಟ್ಟಿಕೊಡಲಾಗಿದೆ ಎಂದರು.

    ಗ್ರಾಮದ ಮಣ್ಣು, ಹವಾಮಾನ, ಪರಿಸರ, ಪ್ರಕೃತಿ ಜೀವ ಸಂಕುಲ, ನಿಖರವಾಗಿ ಮೂಡಿಬಂದಿವೆ. ಗ್ರಾಮಪಂಚಾಯಿತಿ, ಪೋಲೀಸ್ ಠಾಣೆ, ಹಾಲು ಉತ್ಪಾದಕರ ಸಂಘ, ಬ್ಯಾಂಕ್, ವ್ಯಾಪಾರ ವಹಿವಾಟು ಇನ್ನಿತರೆ ದತ್ತಾಂಶಗಳು ಒಳಗೊಂಡಿವೆ. ಆದಾಗಿ ಇದೊಂದು ಸಂಗ್ರಹಯೋಗ್ಯ ಕೃತಿಯಾಗಿದ್ದು, ಪ್ರತಿಯೊಬ್ಬರೂ ತಮ್ಮ ಗ್ರಾಮದ ಇತಿಹಾಸ ತಿಳಿಯಲು ಸೂಕ್ತವಾಗಿದ್ದು, ಪ್ರತಿಯೊಬ್ಬ ಈ ಕೃತಿಯನ್ನು ಕೊಂಡು ಓದಿ ಸಂಗ್ರಹಿಸಿಕೊಳ್ಳಬೇಕು ಎಂದರು.

    ಕೃತಿ ಲೇಖಕರಾದ ಹೊ.ಮ.ನಾಗರಾಜು ಮಾತನಾಡಿ, ಅರಸೀಕೆರೆ ಗ್ರಾಮವು ಸುಮಾರು ಒಂದು ಸಾವಿರ ವರ್ಷಗಳಿಗೂ ಅಧಿಕ ಇತಿಹಾಸವನ್ನು ಹೊಂದಿದೆ. ಇಲ್ಲಿ ಕೋಟೆ, ಕೊತ್ತಲು, ವೀರಗಲ್ಲು, ಶಾಸನ ದೇವಾಲಯ ಇತ್ಯಾದಿ ಅವಶೇಷಗಳು ಕಂಡುಬರುತ್ತಿವೆ. ಸುಮಾರು 2–3 ವರ್ಷಗಳ ಕಾಲ ಕ್ಷೇತ್ರಕಾರ್ಯ ಮತ್ತು ಮಾಹಿತಿ ಸಂಗ್ರಹ ಮಾಡಿ ಕೃತಿಯನ್ನು ರಚಿಸಿದ್ದೇನೆ. ಅರಸೀಕೆರೆ ನನ್ನ ತಾಯಿ ತವರು ಆಗಿರುವುದರಿಂದ ಈ ಗ್ರಾಮದ ಬಗ್ಗೆ ನನಗೆ ಹೆಚ್ಚು ಒಲವು ಇದೆ. ಈ ಕೃತಿ ರಚನೆಯ ವೇಳೆ ಹಲವರು ನನ್ನೊಂದಿಗೆ ಮಾಹಿತಿಯನ್ನು ಹಂಚಿಕೊಂಡು ಅನುಕೂಲ ಮಾಡಿದ್ದು, ಅವರಿಗೆ ಋಣಿಯಾಗಿರುತ್ತೇನೆ ಎಂದರು.

    ನಿವೃತ್ತ ಸಾರಿಗೆ ಇಲಾಖೆ ಅಧಿಕಾರಿ ಬಿ.ತಿಪ್ಪೇಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಐ.ಎ.ನಾರಾಯಣಪ್ಪ ಸಿದ್ದಲಿಂಗಪ್ಪ, ಲೋಕೇಶ್ ಪಾಳೇಗಾರ್, ಅ.ಮು.ತಿಪ್ಪೇಸ್ವಾಮಿ, ರೇಣುಕಾ ರಾಜ್, ಚನ್ನಮಲ್ಲಿಕಾರ್ಜುನ ಮಾತನಾಡಿದರು.

    ಕಾರ್ಯಕ್ರಮದಲ್ಲಿ ಸ್ಥಳೀಯ ವಿಕಾಸ್ ಪ್ರಕಾಶನದ  ಎನ್.ಈಶ್ವರಪ್ಪ ರವರನ್ನು ಹಾಗೂ ಸಾಕಮ್ಮ, ಲಕ್ಷ್ಮಿದೇವಮ್ಮ, ಬೀದಿಮನೆ ಬಸಪ್ಪ, ಆನಂದ, ನಿಂಗಪ್ಪ ಇತರರನ್ನು ಸನ್ಮಾನಿಸಲಾಯಿತು.

    ಮುಖ್ಯಶಿಕ್ಷಕ ಹೆಚ್.ಸಿದ್ದೇಶ್ವರ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಎಸ್.ಡಿ.ಎಸ್.ಸಿ. ಅಧ್ಯಕ್ಷ ಸತೀಶ್ ಕುಮಾರ್, ರಾಜಣ್ಣ, ದೊಡ್ಡಣ್ಣ, ಬಸವರಾಜಪ್ಪ, ಮಿಲ್ಟ್ರಿ ಹನುಮಂತರಾಯಪ್ಪ, ರಮೇಶ, ರಘುನಂದನ್, ಎ.ಪಿ.ಮಲ್ಲಿಕಾರ್ಜುನ, ಬ್ಯಾಡನೂರು ಚನ್ನಬಸಣ್ಣ, ಎ.ಓ.ನಾಗರಾಜು, ರಾಮಲಿಂಗಪ್ಪ, ಆರ್.ಎನ್.ಲಿಂಗಪ್ಪ, ಚಂದ್ರಣ್ಣ.ಎಂ, ಮಂಜುನಾಥ ಶಾಸ್ತ್ರಿ, ಹರಿಕೃಷ್ಣ ಪಿ., ಮಲ್ಲೇಶಪ್ಪ, ಎ.ಮಾರಣ್ಣ, ಅಶ್ವಥನಾರಾಯಣ, ಶಿಕ್ಷಕರಾದ ಶಿವಗಂಗಮ್ಮ, ಗಾಯಿತ್ರಿ ಆರ್., ಚಂದ್ರಮೌಳಿ, ಕವಿತ, ಯಶ್ವಂತ್ ನಾಯ್ಕ, ಸುಧಾ ವಿ., ವಿಮಲ, ಅನಂತಯ್ಯ, ಸತ್ಯನಾರಾಯಣ ಚಾರಿ, ಶ್ರೀದೇವಿ, ಲಕ್ಷ್ಮಿದೇವಿ, ತಿಮ್ಮೋಜಮ್ಮ ಇತರರು ಇದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ

    February 4, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಧಾರವಾಡ :  ಇಂದು (ಮಾ.3) ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ…

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.