ತುಮಕೂರು: ತಾಲ್ಲೂಕಿನ ಬೆಳಧರ ಸರ್ಕಾರಿ ಶಾಲೆಗೆ ಕಾಂಪೌಂಡ್ ನಿರ್ಮಿಸುವಂತೆ ಒತ್ತಾಯಿಸಿ 6 ತಿಂಗಳಿನಿಂದ ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿಯನ್ನು ಮತ್ತೆ ಶಾಲೆಗೆ ಕರೆತರುವ ಕಾರ್ಯ ಯಶಸ್ವಿಯಾಗಿದೆ.
4ನೇ ತರಗತಿ ವಿದ್ಯಾರ್ಥಿನಿ ಸಿಮ್ರಾ ಸನೋಬರ್ ಶಾಲೆಯಿಂದ ದೂರ ಉಳಿದು ಪ್ರತಿಭಟನೆ ನಡೆಸುತ್ತಿದ್ದರು. ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಹಾಗೂ ಅಧಿಕಾರಿಗಳ ತಂಡ ಸೋಮವಾರ ಬಾಲಕಿ ಮನೆಗೆ ಭೇಟಿ ನೀಡಿ ಅಹವಾಲು ಆಲಿಸಿತು.
‘ನನ್ನ ಶಾಲೆಗೆ ಭದ್ರತೆ ಬೇಕು. ಶಾಲಾ ಮೈದಾನದಲ್ಲಿ ಓಡಾಡುವ ವಾಹನಗಳಿಂದ ಕಿರಿಕಿರಿಯಾಗುತ್ತಿದೆ. ಕಾಂಪೌಂಡ್ ನಿರ್ಮಿಸಬೇಕು’ ಎಂದು ಸಿಮ್ರಾ ಮನವಿ ಮಾಡಿದರು. ‘ಶೀಘ್ರದಲ್ಲಿಯೇ ಕಾಂಪೌಂಡ್ ನಿರ್ಮಿಸಲಾಗುವುದು’ ಎಂದು ನೂರುನ್ನೀಸಾ ಭರವಸೆ ನೀಡಿದರು. ವಿದ್ಯಾರ್ಥಿನಿಯನ್ನು ಅವರ ಜತೆಯಲ್ಲಿಯೇ ಶಾಲೆಗೆ ಕರೆದುಕೊಂಡು ಬಂದರು.
ತುಮಕೂರು ತಾಲ್ಲೂಕಿನ ಬೆಳಧರ ಸರ್ಕಾರಿ ಶಾಲೆಗೆ ವಿದ್ಯಾರ್ಥಿನಿಯನ್ನು ಸೋಮವಾರ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಕರೆ ತಂದರು. ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್, ತಹಶೀಲ್ದಾರ್ ಪಿ.ಎಸ್.ರಾಜೇಶ್ವರಿ ಇತರರು ಹಾಜರಿದ್ದರು.
ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್, ತಹಶೀಲ್ದಾರ್ ಪಿ.ಎಸ್.ರಾಜೇಶ್ವರಿ, ರಾಜಸ್ವ ನಿರೀಕ್ಷಕ ಅರುಣ್ಕುಮಾರ್, ಗ್ರಾಮ ಆಡಳಿತಾಧಿಕಾರಿ ಅನಿಲ್, ಕಾಳಜಿ ಫೌಂಡೇಷನ್ನ ಶಿವಕುಮಾರ್ ಮೇಷ್ಟ್ರುಮನೆ, ಗಣೇಶ್ ಮಾರನಹಳ್ಳಿ, ರಫಿಪಾಷ, ಮುಖಂಡರಾದ ಅಯ್ಯನಪಾಳ್ಯ ಶ್ರೀನಿವಾಸ್, ಮಹಾಲಿಂಗಯ್ಯ, ಡಮರುಗ ಉಮೇಶ್ ಇತರರು ಹಾಜರಿದ್ದರು.
ತುಮಕೂರು ಜಿಲ್ಲೆ ತುಮಕೂರು ತಾಲ್ಲೂಕು, ಬೆಳಧರ ಶಾಲೆಯು ಸ್ವತಂತ್ರ ಪೂರ್ವದಲ್ಲಿಯೇ ಪ್ರಾರಂಭವಾದ ಶಾಲೆಯಾಗಿದ್ದು, ಸುಮಾರು 10–15 ಹಳ್ಳಿಗಳ ಕೃಷಿಕರ, ಬಡ ಅಲ್ಪಸಂಖ್ಯಾತ ಮಕ್ಕಳು, ಪರಿಶಿಷ್ಟಜಾತಿ ಪಂಗಡದ ಅತೀ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿರುವ ಶಾಲೆಯಾಗಿದೆ. ಆದ್ರೆ ಸ್ಥಳೀಯ ಖಾಸಗಿ ವ್ಯಕ್ತಿಯೊಬ್ಬ ಅಧಿಕಾರಿಗಳ ಬೆಂಬಲದೊಂದಿಗೆ ಸಮಾಜ ಸೇವಕನ ಸೋಗಿನಲ್ಲಿ ಶಾಲೆಯ ಕಾಂಪೌಂಡ್ ನ್ನೇ ಕಬಳಿಸಿದ್ದ. ಇದರ ವಿರುದ್ಧ ಕಾಳಜಿ ಪೌಂಡೇಷನ್ ಸೇರಿದಂತೆ ಹಲವು ಸಂಘಟನೆಗಳು, ಸ್ಥಳೀಯ ಮುಖಂಡರು ನಿರಂತರವಾಗಿ ಹೋರಾಟ ನಡೆಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


