nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ

    March 16, 2026

    ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು

    March 16, 2026

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ
    • ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು
    • ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ
    • ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ: ಪೋಷಕರಿಂದ ಬೃಹತ್ ಪ್ರತಿಭಟನಾ ಸಮಾವೇಶ
    ಜಿಲ್ಲಾ ಸುದ್ದಿ January 29, 2026

    ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ: ಪೋಷಕರಿಂದ ಬೃಹತ್ ಪ್ರತಿಭಟನಾ ಸಮಾವೇಶ

    By adminJanuary 29, 2026No Comments3 Mins Read
    aidso

    ದೊಡ್ಡಆಲದಮರ(ಹನುಮಂತನಗರ), ಜೋಡಿದೇವರಹಳ್ಳಿ, ನಾಗೇನಹಳ್ಳಿ, ಜೋಗಿಹಳ್ಳಿ, ಸೀಬಿಅಗ್ರಹಾರ, ಕುಂಟೇಗೌಡನಹಳ್ಳಿ, ನೆಲದಿಮ್ಮನಹಳ್ಳಿ, ಬಾಳಬಸವನಹಳ್ಳಿ, ಕಾಳೆನಳ್ಳಿ, ಅಮಲಗುಂದಿ, ಎಲ್. ಎಚ್. ಪಾಳ್ಯ, ಅಜ್ಜಯನಪಾಳ್ಯ, ಕಾಗೆನಿಂಗನಹಳ್ಳಿ, ಭೋವಿಪಾಳ್ಯ,  ಎಲದಬಾಗಿ, ಮತ್ತು ಜವನಹಳ್ಳಿ ಹಳ್ಳಿಗಳ ಸರ್ಕಾರಿ ಶಾಲೆಗಳನ್ನು ಬ್ರಹ್ಮಸಂದ್ರ ಕೆಪಿಎಸ್ ಮ್ಯಾಗ್ನೆಟ್ ಅಡಿಯಲ್ಲಿ ಮುಚ್ಚುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ, ಇಂದು ದೊಡ್ಡಆಲದಮರದಲ್ಲಿ ಬೃಹತ್ ಪೋಷಕರ ಪ್ರತಿಭಟನಾ ಸಮಾವೇಶ ನಡೆಯಿತು.

    ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ AIDSO ರಾಜ್ಯ ಉಪಾಧ್ಯಕ್ಷರಾದ  ಚಂದ್ರಕಲಾರವರು ಮಾತನಾಡುತ್ತಾ,  “ಅಕ್ಟೋಬರ್ 15 ಹಾಗೂ ಡಿಸೆಂಬರ್ 30 2025 ರಂದು ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವ ಆದೇಶಗಳ ಪ್ರಕಾರ, ರಾಜ್ಯಾದಾದ್ಯಂತ ಗ್ರಾಮ ಪಂಚಾಯಿತಿಗೆ ಒಂದು ಸರ್ಕಾರಿ ಶಾಲೆಯಂತೆ, ಕೇವಲ ೬೦೦೦ ಶಾಲೆಗಳು ಉಳಿದು ೪೦,೦೦೦ ಸರ್ಕೆಕಾರಿ ಶಾಲೆಗಳು ನಶಿಸುವವು.  ಅಂದರೆ, ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಐದು ಕಿಲೋಮೀಟರ್ ವ್ಯಾಪ್ತಿಯ ಉಳಿದ ಎಲ್ಲಾ ಸರ್ಕಾರಿ ಶಾಲೆಗಳನ್ನು ಕೊಲ್ಲುವ ಹುನ್ನಾರ ಇದಾಗಿದೆ. ಈಗಾಗಲೇ ಕಳೆದ 15 ವರ್ಷಗಳಲ್ಲಿ ರಾಜ್ಯ ಸರ್ಕಾರದ ಪ್ರಕಾರ 17 ಲಕ್ಷ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ ಯೋಜನೆ ಪ್ರಕಾರ ನಮ್ಮ ರಾಜ್ಯದ ಲಕ್ಷಾಂತರ ರೈತ-ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ. ಮತ್ತು  ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿ ವೃತ್ತಿಪರ ಶಿಕ್ಷಣವನ್ನು ಆರಂಬಿಸಲಾಗುವುದು.   6ನೇ ತರಗತಿಯಿಂದ ಮಕ್ಕಳಿಗೆ ಮಣ್ಣಿನ ಹಣತೆ ಮಾಡುವ, ಅಡಿಕೆ ಸುಲಿಯುವ ಕೌಶಲ್ಯಗಳನ್ನು ಕಲಿಸುವುದಾಗಿ ಶಿಕ್ಷಣ ಮಂತ್ರಿಗಳು ಬಹಿರಂಗಪಡಿಸಿದ್ದಾರೆ. ಕಾರ್ಮಿಕರ ಮಕ್ಕಳನ್ನು ಕಾರ್ಮಿಕರನ್ನಾಗಿಯೇ ಉಳಿಸುವುದು ಸರ್ಕಾರದ ಹುನ್ನಾರವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    AIDSO ರಾಜ್ಯ ಉಪಾಧ್ಯಕ್ಷರಾದ, ಅಪೂರ್ವ ರವರು ಮಾತನಾಡುತ್ತಾ,  “ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಈಗಾಗಲೇ ಇಳಿಮುಖ ಪಡೆದು, ಜನರ ಆಕ್ರೋಶಕ್ಕೆ ಕಾರಣವಾಗಿದೆ” ಎಂದರು. ಇದರಿಂದಲೇ, 13 ಜನವರಿ 2026 ರಂದು, ಬ್ರಹ್ಮಸಂದ್ರ ಕೆಪಿಎಸ್ ಮ್ಯಾಗ್ನೆಟ್ ಕುರಿತು ಬಿಡುಗಡೆ ಮಾಡಿದ ಆದೇಶವು “ಬಿಇಓ ರವರ ಮೌಖಿಕ ಸೂಚನೆ ಮೇರಿಗೆ” ಎಂಬ ಶೀರ್ಷಿಕೆ ಅಡಿಯಲ್ಲಿ ಸುತ್ತಲಿನ 16 ಶಾಲೆಗಳ ಮುಖ್ಯೋಪಾಧ್ಯಾಯರಿಗೆ ತಲುಪಿದೆ. ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿರುವ ಮಾನ್ಯ ಶಿಕ್ಷಣ ಸಚಿವ, ಮಧು ಬಂಗಾರಪ್ಪನವರು, ತನ್ನ ದೇಹದಲ್ಲಿ ಕನ್ನಡ ರಕ್ತ ಹರಿಯುವುದು ಎಂದು ಹೇಳುತ್ತಾರೆ. ಆದರೆ, ಹಿಂದಿನ ಬಾಗಿಲಿನಿಂದ ಸರ್ಕಾರಿ ಶಾಲೆಗಳನ್ನು ಮುಚ್ಚಲು ಆದೇಶ ಹೊರಡಿಸುತ್ತಿದ್ದಾರೆ. “ಒಂದೇ ಒಂದೇ ಸರ್ಕಾರಿ ಶಾಲೆಯನ್ನು ಮುಚ್ಚಿದಿಲ್ಲ, ಕೆಪಿಎಸ್ ಮ್ಯಾಗ್ನೆಟ್ ಬ್ರಹ್ಮಸಂದ್ರ ಆದೇಶ ರದ್ದು ಮಾಡುತ್ತಿದ್ದೇವೆ” ಎಂದು ಬಹಿರಂಗಪಡಿಸಲಿ; ಇಲ್ಲವಾದಲ್ಲಿ, ಈ ಹೋರಾಟ ಮತ್ತಷ್ಟು ತೀವ್ರಗೊಳ್ಳುವುದು, ಎಂಬ ಹೆಚ್ಚರಿಕೆ ನೀಡಿದರು.

    ಮುಖ್ಯ ಭಾಷಣಕಾರರಾದ, ಎಐಎಂಎಸ್‌ ಎಸ್‌ ನ ಜಿಲ್ಲಾಧ್ಯಕ್ಷರಾದ ಕಲ್ಯಾಣಿ ರವರು ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಈ ಹೋರಾಟವು ಸ್ವತಂತ್ರ ಹೋರಾಟವನ್ನು ನೆನಪಿಸುತ್ತಿದೆ. ಹೇಗೆ ಸ್ವತಂತ್ರ ಹೋರಾಟದಲ್ಲಿ ಮಕ್ಕಳಿಂದ  ಹಿಡಿದು ವೃದ್ದರವರೆಗೆ ಹೊರಾಡಿ  ಬ್ರೀಟಿಷರಿಂದ ಸ್ವತಂತ್ರ ಪಡೆದ ಇತಿಹಾಸ ನೆನಪನ್ನು ಈ  ಸಮಾವೇಶವು ತಂದುಕೊಡುತ್ತದೆ.  ಇಂದು ಸಹ ಅಂದಿನಂತೆಯೇ    ಸರ್ಕಾರಿ ಶಾಲೆ ಉಳಿವಿಗಾಗಿ ಐತಿಹಾಸಿಕ ಪ್ರತಿಭಟನಾ ಹೋರಾಟದಲ್ಲಿ ಭಾಗವಹಿಸಿ, ಈ ಸಮಾವೇಶವನ್ನು  ಶಸ್ವಿಗೊಳಿಸಿದ್ದೀರಾ ಎಂದು ಅಭಿನಂದಿಸಿದರು.  ಇಂದು ಆಡಳಿತಾರೂಢ ಎಲ್ಲಾ ಸರ್ಕಾರಗಳು “ಶಿಕ್ಷಣ, ಆರೋಗ್ಯ ಹೀಗೆ ಎಲ್ಲಾಸಾರ್ವಜನಿಕ ಕೇತ್ರಗಳನ್ನು  ಖಾಸಗಿಕರಣ ಮಾಡಿ ಶಿಕ್ಷಣ, ಆರೋಗ್ಯ ಕೇವಲ ಶ್ರೀಮಂತ ವರ್ಗದವರ ಸ್ವತ್ತಾಗುತ್ತದೆ, ತುಳಿತಕ್ಕೊಳ್ಳಗಾದವರನ್ನು ಗುಲಾಮಗಿರಿಗೆ  ತಳ್ಳುತ್ತದೆ. ನಮಗೆ ಶಿಕ್ಷಣ ಸಿಕ್ಕರೆ ನಾವು ಈ ವ್ಯವಸ್ಥೆಯನ್ನು ಪ್ರಶ್ನಿಸುತ್ತೇವೆ; ಆದ್ದರಿಂದ ಜನಗಳನ್ನು ಅಂಧಕಾರಕ್ಕೆ ತಳ್ಳಬೇಕೆಂಬ ಯೋಚನೆ ಇದಾಗಿದೆ. ರೈತರು- ಕಾರ್ಮಿಕರು-ದಿನಗೂಲಿ ಕೆಲಸ ಮಾಡುವವರು ಬಹಳ ಕಷ್ಟದಿಂದ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಕಳುಹಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಈ ಶಾಲೆಗಳನ್ನು ಮುಚ್ಚಿದರೆ ಆ ಮಕ್ಕಳ ಗತಿ ಏನು? ರೈತ-ಕಾರ್ಮಿಕರು ಒಂದಾಗಿ ನಮ್ಮ ಮಕ್ಕಳಿಗೋಸ್ಕರ ಹೋರಾಟ ಕಟ್ಟಬೇಕಾಗಿದೆ.” ಎಂದು ಕರೆ ನೀಡಿದರು.

    ಬಾಲಬಸವನಹಳ್ಳಿಯ ಗ್ರಾಮದ ರಮೇಶ್‌ ಸರ್ಕಾರ ಶಾಲೆಯನ್ನು   ಮುಚ್ಚಲು ಬಂದರೆ ನಮ್ಮೂರಿನ ಜನರೆಲ್ಲಾ ಒಗ್ಗಟ್ಟಾಗಿ ಹೋರಾಡುತ್ತೇವೆ. ನಮ್ಮ ಜೀವ ಹೋದರು ನಮ್ಮೂರ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಕನ್ನಡದ ಅಸ್ಮಿತೆಗೆ ಕನ್ನಡ ಶಾಲೆಗಳ ಉಳಿವು ಮುಖ್ಯ ಹೀಗಾಗಿ ಸರ್ಕಾರಿ ಶಾಲೆಯ ಉಳಿವಿಗಾಗಿ ನಾವೆಲ್ಲಾ ಮುಂದೆ ಇರುವುದಾಗಿ  ಜೋಡಿದೇವರಳ್ಳಿಯ ಶ್ರೀನಿವಾಸ್‌ ತಿಳಿಸಿದರು.

    ಸಮಾವೇಶದ ಅಧ್ಯಕ್ಷತೆಯನ್ನು ಎಐಡಿಎಸ್ಓ ತುಮಕೂರು ಜಿಲ್ಲಾ ಕಾರ್ಯದರ್ಶಿಗಳಾದ ಲಕ್ಕಪ್ಪ ವಹಿಸಿದ್ದರು. ವಿವಿಧ  ೧೩ ಹಳ್ಳಿಯ ಸಾರ್ವಜನಿಕ ಶಿಕ್ಷಣ ಸಮಿತಿಯ ಮುಖಂಡರು ಹಾಗೂ ಗ್ರಾಮಸ್ತರು, ಎಐಡಿಎಸ್‌ಓ ನ ಕಾರ್ಯಕರ್ತರಾದ ಭರತ್‌, ಸೈಯದ್ದ್.‌ ವೃಷಭ್‌, ಸಂದೀಪ್‌, ಹುಸೇನಪ್ಪ, ಭೂತೇಶ್‌ ಉಪಸ್ಥಿತರಿದ್ದರು.

    ಸರ್ಕಾರವು ಯೋಜನೆಯನ್ನು ಹಿಂಪಡೆದು ಅಧಿಕೃತವಾಗಿ ಆದೇಶ ಹೊರಡಿಸುವವರೆಗೂ ಈ ಹೋರಾಟ ಮುಂದುವರೆಯುತ್ತದೆ. ಹಾಗೂ ಜಿಲ್ಲೆಯ ಮೂಲೆ ಮೂಲೆಗೂ ಪ್ರತಿರೋಧ ಚಳುವಳಿಯು  ಹರಡುತ್ತದೆ. ಎಂಬ ದೃಢ ಸಂಕಲ್ಪದೊಂದಿಗೆ ಸಮಾವೇಶವು ಮುಕ್ತಾಯವಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ

    March 16, 2026

    ಕೊರಟಗೆರೆ: ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣ ಪಂಚಾಯಿತಿಯನ್ನು ಸರ್ಕಾರವು ಪುರಸಭೆಯಾಗಿ ಮೇಲ್ದರ್ಜೆಗೇರಿಸಿದ್ದು, ಈ ಸಂಬಂಧ ವಾರ್ಡ್‌ಗಳ ಮರು ವಿಂಗಡಣೆ ಪ್ರಕ್ರಿಯೆ…

    ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು

    March 16, 2026

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.