ಕೊರಟಗೆರೆ: ರಾಜಕೀಯದ ಸುದೀರ್ಘ ಇತಿಹಾಸದಲ್ಲಿ ಈ ಹಿಂದೆ ಕೋಳಾಲ ಹೋಬಳಿ ಜಿ.ಪಂ. ಸದಸ್ಯನಾಗಿದ್ದ ವೇಳೆಯಿಂದಲೂ ಕೊರಟಗೆರೆ ಕ್ಷೇತ್ರದ ಜನತೆಯ ಪರವಾಗಿ ಕೆಲಸ ಮಾಡಿದ್ದೇನೆ ಎಂದು ಮಾಜಿ ಜಿ.ಪಂ.ಸದಸ್ಯ ಪಿ.ಎನ್. ಕೃಷ್ಣಮೂರ್ತಿ ತಿಳಿಸಿದರು.
ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಮಾವತ್ತೂರು ಗ್ರಾ.ಪಂ. ವ್ಯಾಪ್ತಿಯ ಲಿಂಗಾಪುರ ಗ್ರಾಮದಲ್ಲಿ ಶ್ರೀಮಾರಮ್ಮ ದೇವಾಲಯ ಸಮಿತಿಯಿಂದ ಆಯೋಜಿಸದ್ದ ಮಾರಮ್ಮ ದೇವಿ ಉತ್ಸವ ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಬುಧವಾರ ಸಂಜೆ ಪಾಲ್ಗೊಂಡು ದೇವಿಗೆ ಪೂಜೆ ಸಲ್ಲಿಸಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಮ್ಮ ಹಿರಿಯರ ಕಾಲದಿಂದಲೂ ಕ್ಷೇತ್ರದ ಜನತೆ ಪ್ರೀತಿ, ವಿಶ್ವಾಸ ತೋರಿ ಕೈ ಹಿಡಿದು ನಡೆಸಿದ್ದಾರೆ. 2028ಕ್ಕೆ ಕೊರಟಗೆರೆ ಕ್ಷೇತ್ರ ಸಾಮಾನ್ಯ ಮೀಸಲು ಕ್ಷೇತ್ರವಾದರೆ ಇಲ್ಲಿಂದಲೇ ಸ್ಪರ್ಧಿಸಲ್ಲಿದ್ದೇನೆ, ಸೋತರೂ ಗೆದ್ದರು ಎಂದಿಗೂ ನಿಮ್ಮವನೇ, ಇದೇ ಪ್ರೀತಿ ವಿಶ್ವಾಸ ಕೊನೆವರೆಗೂ ಕಾಪಾಡಿಕೊಂಡು ನಿಮ್ಮೆಲ್ಲರ ಸೇವೆಯನ್ನು ಮಾಡುತ್ತೇನೆ ಎಂದರು.
ಕರವೇ ಅಧ್ಯಕ್ಷ ನರಸಿಂಹರಾಜು ಮತ್ತು ಸ್ನೇಹಿತರು ಗ್ರಾಮದೇವತೆ ಉತ್ಸವ ಮೂರ್ತಿಯ ಪ್ರತಿಷ್ಠಾಪನೆಗೆ ವಿಶೇಷ ಆಸಕ್ತಿ ತೋರಿ ಶ್ರಮವಹಿಸಿ ಕೆಲಸ ಮಾಡಿರುವುದು ಹೆಮ್ಮೆಯ ಸಂಗತಿ. ಇಂತಹ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದರೆ ಮಾತ್ರ ನಮ್ಮ ಸಂಸ್ಕೃತಿಗೆ ನಾವು ನೀಡುವ ಗೌರವ ಎಂದು ಹೇಳಿದರು.
ಕರವೇ (ಪ್ರವೀಣ್ಶೆಟ್ಟಿ ಬಣ) ಅಧ್ಯಕ್ಷ ನರಸಿಂಹರಾಜು ಮಾತನಾಡಿ, ತಾ.ಪಂ. ಮಾಜಿ ಅಧ್ಯಕ್ಷ ದಿವಂಗತ ರಂಗಮುತ್ತಯ್ಯನವರ ಕಾಲದಲ್ಲಿ ಲಿಂಗಾಪುರ ಮೂಲಭೂತ ವ್ಯವಸ್ಥೆ ಕಲ್ಪಿಸಿ ಗ್ರಾಮ ಅಭಿವೃದ್ಧಿ ಕಂಡಿತ್ತು, ನಂತರ ಜಿ.ಪಂ. ಸದಸ್ಯರಾಗಿದ್ದ ಸಂದರ್ಭದಲ್ಲಿ ಪಿ.ಎನ್.ಕೃಷ್ಣಮೂರ್ತಿ ಅವರು ಹೊಳವನಹಳ್ಳಿ ಮತ್ತು ಕೋಳಾಲ ಹೋಬಳಿ ತಾಲೂಕಿನ ಹಲವು ಗ್ರಾಮಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದಾರೆ. 2028ಕ್ಕೆ ಕೊರಟಗೆರೆ ಕ್ಷೇತ್ರದ ಶಾಸಕರಾಗಲಿ ಎಂಬುದು ನಮ್ಮೆಲ್ಲರಾ ಭಯಕೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಚಂದ್ರಕಲಾ ಕೃಷ್ಣಮೂರ್ತಿ, ಮಾವತ್ತೂರು ಗ್ರಾ.ಪಂ ಉಪಾಧ್ಯಕ್ಷ ಮಹಾಲಿಂಗಯ್ಯ, ಸದಸ್ಯೆ ರಂಗಮ್ಮ, ಮಾಜಿ ಅಧ್ಯಕ್ಷ ನರಸಿಂಹಮೂರ್ತಿ(ಮೈಸೂರಪ್ಪ), ದಾಸಪ್ಪ, ಸತೀಶ್, ಕೆಇಬಿ ಕಂಟ್ರಾಕ್ಟರ್ ಮಹೇಶ್, ಕರವೇ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಉಪಾಧ್ಯಕ್ಷ ಶ್ರೀನಿವಾಸ್, ನಟರಾಜ್, ಸಂಘಟನಾ ಕಾರ್ಯದರ್ಶಿ ಪುಟ್ಟರಾಜ್, ರಮೇಶ್, ಗಿರೀಶ್, ರಂಗನಾಥ್ ರಂಗಮುತ್ತಯ್ಯ, ಎಲ್.ಕೆ ನಾಗರಾಜು, ಸದಾಶಿವಯ್ಯ.ಎಂ, ನಂದೀಶ್, ಗಿರಿಯಪ್ಪ, ಗೋವಿಂದಪ್ಪ, ರಾಜಣ್ಣ ಸಣ್ಣಪ್ಪ, ಓಬಳಯ್ಯ, ಶಾಂತಮೂರ್ತಿ, ಸಂಜೀವರಾಯಪ್ಪ, ನರಸಮ್ಮ ಮೇಡಂ, ನಾಗರಾಜು ಸೇರಿದಂತೆ ಊರಿನ ಗ್ರಾಮಸ್ಥರು ಹಾಜರಿದ್ದರು.
ಊರಿನ ಗ್ರಾಮಸ್ಥರಿಂದ ಅಭಿನಂದನೆ:
ಲಿಂಗಾಪುರ ಗ್ರಾಮಕ್ಕೆ ಗ್ರಾಮ ದೇವತೆ ಉತ್ಸವ ಮೂರ್ತಿ ದಾನವಾಗಿ ನೀಡಿ ಪ್ರತಿಷ್ಠಾಪನೆಗೆ ಕಾರಣರಾದ ಮಾಜಿ ಜಿ.ಪಂ ಸದಸ್ಯ ಕೃಷ್ಣಮೂರ್ತಿ ಮತ್ತು ಪತ್ನಿ ಚಂದ್ರಕಲಾ ಕೃಷ್ಣಮೂರ್ತಿಗೆ ಊರಿನ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿ 2028ಕ್ಕೆ ಕೊರಟಗೆರೆ ಕ್ಷೇತ್ರದ ಶಾಸಕರಾಗಲಿ ಎಂದು ಆಶೀರ್ವಾದಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


