ಮಧುಗಿರಿ / ಕೋಡಿಗೇನಹಳ್ಳಿ: ರಾಜಣ್ಣ ನಿನಗೆ ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ ಅದನ್ನು ಜನರು ಹೇಳುತ್ತಾರೆ. ಸಹಕಾರಿ ಕ್ಷೇತ್ರದಲ್ಲಿ ಬಡವರ ಪರವಾಗಿ, ಬೀದಿ ಬದಿ ವ್ಯಾಪಾರಿಗಳ ಪರವಾಗಿ ಸಾಲ ಸೌಲಭ್ಯಗಳನ್ನು ನೀಡುವುದರ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಬದಲಾವಣೆ ತರುವಲ್ಲಿ ಪ್ರಮುಖ ಪಾತ್ರ ನಿನ್ನದಾಗಿದೆ ಅಂತ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಕಿವಿಮಾತು ಹೇಳಿದರು.
ತಾಲೂಕಿನ ಕೋಡಿಗೇನಹಳ್ಳಿ ಗ್ರಾಮದಲ್ಲಿನ ಬೆಸ್ಕಾಂ ಕಚೇರಿ, ಪಟ್ಟಣದಲ್ಲಿ 36 ನೂತನ ಕಟ್ಟಡ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ನೂತನ ಪೊಲೀಸ್ ಠಾಣೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಪರಮೇಶ್ವರ್, ಕೆ.ಎನ್.ರಾಜಣ್ಣ ಪರಿಶಿಷ್ಟ ಜಾತಿ, ಪಂಗಡ ಹಾಗೂ ಶೋಷಿತ ಸಮುದಾಯದವರಿಗೆ ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿ ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಏಕೈಕ ವ್ಯಕ್ತಿಯಾಗಿದ್ದಾರೆ ಎಂದರು.
ತಳ ಸಮುದಾಯದವರಿಗೆ ಈ ಹಿಂದೆ ಸಹಕಾರಿ ಸಂಘಗಳ ಮೆಟ್ಟಿಲುಗಳ ಬಳಿ ಬಲಿಷ್ಠರು ಸುಳಿಯಲು ಬಿಡುತ್ತಿರಲಿಲ್ಲ. ಸಹಕಾರಿ ಸಚಿವರಾಗಿದ್ದ ರಾಜಣ್ಣನವರ ಅವಧಿಯಲ್ಲಿ ಶೋಷಿತ ಸಮುದಾಯದವರಿಗೆ ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ ದೊರೆಯುವಂತೆ ಮಾಡಿದ ಫಲ ಇಡೀ ರಾಜ್ಯದಲ್ಲಿ ಬದಲಾವಣೆ ಕಂಡಿದೆ ಎಂದರು.
ಈ ಹಿಂದಿನ ಪೊಲೀಸ್ ಠಾಣೆಯು 1954ರಲ್ಲಿ ಬ್ರಿಟಿಷರ ಕಾಲದಲ್ಲಿ ನಿರ್ಮಿಸಿದ ಹಾಗೂ ಶಿಥಿಲವಾಗಿದ್ದ ಹಿನ್ನೆಲೆಯಲ್ಲಿ ನೂತನ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಇಲ್ಲಿಗೆ ಬರುವವರಿಗೆ ಜನರನ್ನು ಪ್ರೀತಿ ವಿಶ್ವಾಸದಿಂದ ಕಂಡು ನ್ಯಾಯಯುತವಾಗಿ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು. ಜಿಲ್ಲೆಯಲ್ಲಿ ಪ್ರಾದೇಶಿಕ ಎಫ್ಎಸ್ಎಲ್ ಕೇಂದ್ರವನ್ನು 36 ಕೋಟಿ ರೂಗಳಲ್ಲಿ ನಿರ್ಮಿಸುವುದರ ಬಗ್ಗೆ ಸಿ ಎಂ ಬಗ್ಗೆ ಚರ್ಚಿಸಲಾಗುವುದು ಎಂದರು.
ನಾನು ಮೂರು ಬಾರಿ ಗೃಹ ಸಚಿವನಾಗಿದ್ದು, ಇಲಾಖೆಯಲ್ಲಿ ಹಲವಾರು ಬದಲಾವಣೆಯನ್ನು ತರಲಾಗಿದೆ. ಉನ್ನತ ಶಿಕ್ಷಣ ಸಚಿವನಾಗಿದ್ದಾಗ ತುಮಕೂರು ವಿಶ್ವ ವಿದ್ಯಾಲಯ ಹಾಗೂ ಸುಮಾರು 500 ಕೋಟಿ ರೂಗಳ ವೆಚ್ಚದಲ್ಲಿ 12 ಕೆ ಎಸ್ ಆರ್ ಪಿ ಬೆಟಾಲಿಯನ್ ಕೊರಟಗೆರೆ ಬಳಿ ತರಬೇತಿ ಕೇಂದ್ರವನ್ನು ಆರಂಭಿಸಲಾಗಿದೆ. ಮಧುಗಿರಿ 36 ಕೊರಟಗೆರೆ ಕ್ಷೇತ್ರಕ್ಕೆ 36 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲಾಗುವುದು. ಕರ್ನಾಟಕ ಪೊಲೀಸ್ ಇಲಾಖೆಯು ದೇಶದಲ್ಲಿ ಉತ್ತಮವಾದ ಹೆಸರು ಗಳಿಸಿರುವ ಇಲಾಖೆಯಾಗಿದ್ದು ಜನರಿಗೆ ನ್ಯಾಯ ಒದಗಿಸುವ ಇಲಾಖೆ ಎಂದು ಹೆಸರುಗಳಿಸಿದೆ. ಬೆಂಗಳೂರು ಮಹಿಳೆಯರಿಗೆ ಸುರಕ್ಷಿತವಾದ ನಗರವಾಗಿದೆ ಎಂದರು.
ಕಾಂಗ್ರೆಸ್ ಸರ್ಕಾರವು ಪ್ರಣಾಳಿಕೆಯಲ್ಲಿ ತಿಳಿಸಿರುವಂತೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಮಂಜೂರು ಮಾಡಿದ್ದೇವೆ. ಆದರೆ ವಿರೋಧ ಪಕ್ಷದವರು ನಮ್ಮ ಗ್ಯಾರಂಟಿಗಳ ಬಗ್ಗೆ ಟೀಕೆ ಟಿಪ್ಪಣಿಗಳನ್ನು ಮಾಡುತ್ತಿದ್ದಾರೆ. ನಮ್ಮ ಖಜಾನೆ ಖಾಲಿಯಾಗಿದೆ ಎನ್ನುತ್ತಾರೆ ಆದರೆ ವಿರೋಧ ಪಕ್ಷದವರು ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿ ಅವರ ಚುನಾವಣೆಯಲ್ಲಿ ಬಳಸಿಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ರಸ್ತೆ, ಕಟ್ಟಡಗಳ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಈ ಹಿಂದೆ ಆರಂಭಿಸಲಾದ ಎತ್ತಿನ ಹೊಳೆ ಯೋಜನೆಯು 5500 ಕೋಟಿ ರೂಗಳಾಗಿತ್ತು. ಆದರೆ ಇಂದಿಗೆ ಆ ಯೋಜನೆಯು 25 ಸಾವಿರ ರೂ ಗಳ ವರೆಗೆ ತಲುಪಿದ್ದು ಕೊರಟಗೆರೆ ತಾಲ್ಲೂಕು 69 ಮಧುಗಿರಿಯ 49 ಕೆರೆಗಳಿಗೆ ನೀರು ಬರಲಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


