ಗುಬ್ಬಿ, : ನಮಗೆ ಎಲ್ಲದಕ್ಕಿಂತಲೂ ಮುಖ್ಯವಾದದ್ದು ಆರೋಗ್ಯ, ಆರೋಗ್ಯದ ಮೇಲೆ ಪರಿಣಾಮ ಬೀರದಂತೆ ಪ್ರತಿಯೊಬ್ಬರು ಜಾಗೃತಿ ವಹಿಸಬೇಕು ಎಂದು ನೆರಳು ಸೇವಾ ಟ್ರಸ್ಟ್ ನ ಅಧ್ಯಕ್ಷ ಜಗದೀಶ್ ತಿಳಿಸಿದರು.
ತಾಲ್ಲೂಕಿನ ಸಿ.ಎಸ್.ಪುರ ಸಂತೆ ಮೈದಾನದಲ್ಲಿ ನೆರಳು ಸೇವಾ ಟ್ರಸ್ಟ್ ನ ಒಂದನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನೆರಳು ಸೇವಾ ಟ್ರಸ್ಟ್ ಹಾಗೂ ಶ್ರೀ ದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಸಹಯೋಗದೊಂದಿಗೆ ನಡೆದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು
ಮನುಷ್ಯ ಉದ್ಯೋಗ ಮತ್ತು ದುಡಿಮೆಯ ಒತ್ತಡದ ಜೀವನದಲ್ಲಿ ಆರೋಗ್ಯದ ಮೇಲಿನ ಕಾಳಜಿಯನ್ನೇ ಮರೆತುಬಿಡುತ್ತಾನೆ. ಇದರಿಂದ ಆರೋಗ್ಯ ಹದಗೆಡುತ್ತದೆ. ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಆರೋಗ್ಯವಂತ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು. ಕಳೆದ ಒಂದು ವರ್ಷದಿಂದ ನೆರಳು ಸೇವಾ ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗು, ಪುಸ್ತಕ, ಲೇಖನ ಸಾಮಗ್ರಿಗಳು. ಪರಿಸರದ ಬಗ್ಗೆ ಜಾಗೃತಿ ಸೇರಿದಂತೆ ಮುಂತಾದ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಾ ಬರುತ್ತಿದೆ. ಮುಂದಿನ ದಿನಗಳಲ್ಲಿ, ಸಮಾಜಮುಖಿ ಕೆಲಸ ಮಾಡಲು ನೆರಳು ಸೇವಾ ಟ್ರಸ್ಟ್ ಬದ್ಧವಾಗಿದೆ ಎಂದು ತಿಳಿಸಿದರು.
ಮತ್ತು ಹಲವಾರು ಶಾಲೆಗಳಿಗೆ ಗ್ರೀನ್ ಬೋರ್ಡ್ ವಿತರಣೆ ಮಾಡಿದ್ದೇವೆ ಬಡ ಮಕ್ಕಳಿಗೆ ಶಾಲೆಯ ಶುಲ್ಕವನ್ನು ಕಟ್ಟಿದ್ದೇವೆ ನಾವು ಯಾರಿಂದಲೂ ಧನಸಹಾಯವನ್ನು ಪಡೆದಿಲ್ಲ ನಾವೆಲ್ಲ ಸೇವಾ ಟ್ರಸ್ಟ್ ನ ಸದಸ್ಯರು ಸೇರಿ ನಮ್ಮ ಕೈಲಾಗುವ ಸಹಾಯವನ್ನು ಮಾಡಿದ್ದೇವೆ ಹಾಗೆ ಇನ್ನು ಮುಂದೆಯೂ ಕೂಡ ನಮ್ಮ ನೆರಳು ಸೇವಾ ಟ್ರಸ್ಟ್ ಕಡೆಯಿಂದ ಬಡ ಮಕ್ಕಳಿಗೆ ಆಸರೆಯಾಗಿರುತ್ತೇವೆ ಎಂದರು
ಈ ಸಂದರ್ಭದಲ್ಲಿ ನೆರಳು ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ನಾಗರಾಜು, ಉಪಾಧ್ಯಕ್ಷ ನಾರಾಯಣ, ಪ್ರಧಾನ ಕಾರ್ಯದರ್ಶಿ ಸಂತೋಷ್, ಖಜಾಂಚಿ ಪದ್ಮರಂಗ ಸೇರಿದಂತೆ ಟ್ರಸ್ಟ್ ನ ನಿರ್ದೇಶಕರು, ಸದಸ್ಯರು, ವೈದ್ಯರು ಉಪಸ್ಥಿತರಿದ್ದರು.
ವರದಿ: ಚೇತನ್ ಗೌಡ, ಗುಬ್ಬಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


